AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ದಿನದ ಮಗು ಬಿಟ್ಟು ದಂಪತಿ ಆತ್ಮಹತ್ಯೆ: ಈಗ ತಾನೇ ಕಣ್ಬಿಟ್ಟು ನೋಡುತ್ತಿರುವಾಗಲೇ ಅನಾಥವಾದ ಮಗು

ಏಳ ದಿನಗಳ ಪುಟ್ಟ ಹಸುಳೆಯನ್ನು ಬಿಟ್ಟು ಬಾಣಂತಿ ಗಂಡನ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಮಗ ಜನಿಸಿ ಏಳ ದಿನವಾಗಿದೆ ಅಷ್ಟೇ. ಅದ್ಯಾಕೋ ಏನು ದಂಪತಿ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದು, ಈಗ ತಾನೇ ಕಣ್ಬಿಟ್ಟಿರುವ ಮಗ ತಂದೆ ತಾಯಿ ಇಲ್ಲದೇ ಅನಾಥವಾಗಿದೆ. ಈ ಘಟನೆ ನಡೆದಿದ್ದೆಲ್ಲಿ? ಯಾರಿವರು ಎನ್ನುವ ವಿವರ ಈ ಕೆಳಗಿನಂತಿದೆ.

7 ದಿನದ ಮಗು ಬಿಟ್ಟು  ದಂಪತಿ ಆತ್ಮಹತ್ಯೆ: ಈಗ ತಾನೇ ಕಣ್ಬಿಟ್ಟು ನೋಡುತ್ತಿರುವಾಗಲೇ ಅನಾಥವಾದ ಮಗು
Kolar Couple Suicide
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ರಮೇಶ್ ಬಿ. ಜವಳಗೇರಾ|

Updated on:Dec 07, 2025 | 6:08 PM

Share

ಕೋಲಾರ, ಡಿಸೆಂಬರ್ 07):ಕೇವಲ ಏಳು ದಿನದ ಹಸುಗೂಸನ್ನು ಬಿಟ್ಟು ದಂಪತಿ (Couple) ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕೋಲಾರ (Kolar) ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಉಪ್ಪಾರಪಲ್ಲಿಯಲ್ಲಿ ನಡೆದಿದೆ. ಅಸ್ಸಾಂ ಮೂಲದ ಫರಿಜಾ(22), ರೆಹಮಾನ್​(28) ಆತ್ಮಹತ್ಯೆಗೆ ಶರಣಾದ ದಂಪತಿ. ಮೃತ ದಂಪತಿ 15 ದಿನಗಳಿಂದಷ್ಟೇ ಶ್ರೀನಿವಾಸರೆಡ್ಡಿ ಎಂಬುವರ ಕೋಳಿ ಫಾರಂನಲ್ಲಿ ಕೆಲಸಕ್ಕೆ ಸೇರಿಕೊಂಡಿತ್ತು.ಏಳು ದಿನಗಳ ಹಿಂದಷ್ಟೇ ರೆಹಮಾನ್, ಫರಿಜಾ ದಂಪತಿಗೆ ಹೆಣ್ಣು ಹುಟ್ಟಿತ್ತು. ಆದ್ರೆ, ಇದೀಗ ಚಿಕ್ಕ ಹಸುಳೆಯನ್ನು ಬಿಟ್ಟು ದಂಪತಿ ಏಕಾಏಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದೆ.ಆದ್ರೆ, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ರಾಯಲ್ಪಾಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಫರಿಜಾ ಹಾಗೂ ರೆಹಮಾನ್ ವಿಷ ಸೇವಿಸಿ ಮನೆಯಲ್ಲಿ ಅಕ್ಕಪಕ್ಕದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಮೃತಪಟ್ಟ ತಂದೆ ತಾಯಿಯ ಮಧ್ಯೆ ಏನು ಅರಿಯದ ಮಗು ಅಳುತ್ತಿದ್ದು, ಈ ದೃಶ್ಯ ನೋಡುಗರ ಕಣ್ಣಂಚಿನಲ್ಲಿ ನೀರು ತರಿಸುವಂತಿದೆ.

ಇದನ್ನೂ ಓದಿ: ಮಂಡ್ಯ: ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಕಾರು; ಮೂವರು ದುರ್ಮರಣ

ತಾಯಿಯ ಹೊಟ್ಟೆಯಿಂದ ಹೊರಬಂದು ಏಳು ದಿನವಾಗಿರುವ ಪುಟ್ಟ ಕಂದಮ್ಮ ಈಗ ತಾಣೆ ಕಣ್ಣು ಬಿಟ್ಟು ನೋಡಲು ಪ್ರಾರಂಭಿಸಿದೆ. ಆದ್ರೆ, ಇದೀಗ ಪುಟ್ಟ ಮಗುವಿಗೆ ಹಾರೈಕೆ ಮಾಡುವವರೇ ಇಲ್ಲದಂತಾಗಿದ್ದು, ಚಿಕ್ಕಂದಿನಲ್ಲೇ ಕಣ್ಣು ಬಿಟ್ಟು ನೋಡುವರಷ್ಟರಲ್ಲೇ ಮಗು ತನ್ನ ತಂದೆ ತಾಯಿಯನ್ನ ಕಳೆದುಕೊಂಡು ಅನಾಥವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:49 pm, Sun, 7 December 25

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ