AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ದಿನದ ಮಗು ಬಿಟ್ಟು ದಂಪತಿ ಆತ್ಮಹತ್ಯೆ: ಈಗ ತಾನೇ ಕಣ್ಬಿಟ್ಟು ನೋಡುತ್ತಿರುವಾಗಲೇ ಅನಾಥವಾದ ಮಗು

ಏಳ ದಿನಗಳ ಪುಟ್ಟ ಹಸುಳೆಯನ್ನು ಬಿಟ್ಟು ಬಾಣಂತಿ ಗಂಡನ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಮಗ ಜನಿಸಿ ಏಳ ದಿನವಾಗಿದೆ ಅಷ್ಟೇ. ಅದ್ಯಾಕೋ ಏನು ದಂಪತಿ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದು, ಈಗ ತಾನೇ ಕಣ್ಬಿಟ್ಟಿರುವ ಮಗ ತಂದೆ ತಾಯಿ ಇಲ್ಲದೇ ಅನಾಥವಾಗಿದೆ. ಈ ಘಟನೆ ನಡೆದಿದ್ದೆಲ್ಲಿ? ಯಾರಿವರು ಎನ್ನುವ ವಿವರ ಈ ಕೆಳಗಿನಂತಿದೆ.

7 ದಿನದ ಮಗು ಬಿಟ್ಟು  ದಂಪತಿ ಆತ್ಮಹತ್ಯೆ: ಈಗ ತಾನೇ ಕಣ್ಬಿಟ್ಟು ನೋಡುತ್ತಿರುವಾಗಲೇ ಅನಾಥವಾದ ಮಗು
Kolar Couple Suicide
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Dec 07, 2025 | 6:08 PM

Share

ಕೋಲಾರ, ಡಿಸೆಂಬರ್ 07):ಕೇವಲ ಏಳು ದಿನದ ಹಸುಗೂಸನ್ನು ಬಿಟ್ಟು ದಂಪತಿ (Couple) ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕೋಲಾರ (Kolar) ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಉಪ್ಪಾರಪಲ್ಲಿಯಲ್ಲಿ ನಡೆದಿದೆ. ಅಸ್ಸಾಂ ಮೂಲದ ಫರಿಜಾ(22), ರೆಹಮಾನ್​(28) ಆತ್ಮಹತ್ಯೆಗೆ ಶರಣಾದ ದಂಪತಿ. ಮೃತ ದಂಪತಿ 15 ದಿನಗಳಿಂದಷ್ಟೇ ಶ್ರೀನಿವಾಸರೆಡ್ಡಿ ಎಂಬುವರ ಕೋಳಿ ಫಾರಂನಲ್ಲಿ ಕೆಲಸಕ್ಕೆ ಸೇರಿಕೊಂಡಿತ್ತು.ಏಳು ದಿನಗಳ ಹಿಂದಷ್ಟೇ ರೆಹಮಾನ್, ಫರಿಜಾ ದಂಪತಿಗೆ ಹೆಣ್ಣು ಹುಟ್ಟಿತ್ತು. ಆದ್ರೆ, ಇದೀಗ ಚಿಕ್ಕ ಹಸುಳೆಯನ್ನು ಬಿಟ್ಟು ದಂಪತಿ ಏಕಾಏಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದೆ.ಆದ್ರೆ, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ರಾಯಲ್ಪಾಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಫರಿಜಾ ಹಾಗೂ ರೆಹಮಾನ್ ವಿಷ ಸೇವಿಸಿ ಮನೆಯಲ್ಲಿ ಅಕ್ಕಪಕ್ಕದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಮೃತಪಟ್ಟ ತಂದೆ ತಾಯಿಯ ಮಧ್ಯೆ ಏನು ಅರಿಯದ ಮಗು ಅಳುತ್ತಿದ್ದು, ಈ ದೃಶ್ಯ ನೋಡುಗರ ಕಣ್ಣಂಚಿನಲ್ಲಿ ನೀರು ತರಿಸುವಂತಿದೆ.

ಇದನ್ನೂ ಓದಿ: ಮಂಡ್ಯ: ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಕಾರು; ಮೂವರು ದುರ್ಮರಣ

ತಾಯಿಯ ಹೊಟ್ಟೆಯಿಂದ ಹೊರಬಂದು ಏಳು ದಿನವಾಗಿರುವ ಪುಟ್ಟ ಕಂದಮ್ಮ ಈಗ ತಾಣೆ ಕಣ್ಣು ಬಿಟ್ಟು ನೋಡಲು ಪ್ರಾರಂಭಿಸಿದೆ. ಆದ್ರೆ, ಇದೀಗ ಪುಟ್ಟ ಮಗುವಿಗೆ ಹಾರೈಕೆ ಮಾಡುವವರೇ ಇಲ್ಲದಂತಾಗಿದ್ದು, ಚಿಕ್ಕಂದಿನಲ್ಲೇ ಕಣ್ಣು ಬಿಟ್ಟು ನೋಡುವರಷ್ಟರಲ್ಲೇ ಮಗು ತನ್ನ ತಂದೆ ತಾಯಿಯನ್ನ ಕಳೆದುಕೊಂಡು ಅನಾಥವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:49 pm, Sun, 7 December 25

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ