AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ದಿನದ ಮಗು ಬಿಟ್ಟು ದಂಪತಿ ಆತ್ಮಹತ್ಯೆ: ಈಗ ತಾನೇ ಕಣ್ಬಿಟ್ಟು ನೋಡುತ್ತಿರುವಾಗಲೇ ಅನಾಥವಾದ ಮಗು

ಏಳ ದಿನಗಳ ಪುಟ್ಟ ಹಸುಳೆಯನ್ನು ಬಿಟ್ಟು ಬಾಣಂತಿ ಗಂಡನ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಮಗ ಜನಿಸಿ ಏಳ ದಿನವಾಗಿದೆ ಅಷ್ಟೇ. ಅದ್ಯಾಕೋ ಏನು ದಂಪತಿ ಏಕಾಏಕಿ ಆತ್ಮಹತ್ಯೆಗೆ ಶರಣಾಗಿದ್ದು, ಈಗ ತಾನೇ ಕಣ್ಬಿಟ್ಟಿರುವ ಮಗ ತಂದೆ ತಾಯಿ ಇಲ್ಲದೇ ಅನಾಥವಾಗಿದೆ. ಈ ಘಟನೆ ನಡೆದಿದ್ದೆಲ್ಲಿ? ಯಾರಿವರು ಎನ್ನುವ ವಿವರ ಈ ಕೆಳಗಿನಂತಿದೆ.

7 ದಿನದ ಮಗು ಬಿಟ್ಟು  ದಂಪತಿ ಆತ್ಮಹತ್ಯೆ: ಈಗ ತಾನೇ ಕಣ್ಬಿಟ್ಟು ನೋಡುತ್ತಿರುವಾಗಲೇ ಅನಾಥವಾದ ಮಗು
Kolar Couple Suicide
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Dec 07, 2025 | 6:08 PM

Share

ಕೋಲಾರ, ಡಿಸೆಂಬರ್ 07):ಕೇವಲ ಏಳು ದಿನದ ಹಸುಗೂಸನ್ನು ಬಿಟ್ಟು ದಂಪತಿ (Couple) ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕೋಲಾರ (Kolar) ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಉಪ್ಪಾರಪಲ್ಲಿಯಲ್ಲಿ ನಡೆದಿದೆ. ಅಸ್ಸಾಂ ಮೂಲದ ಫರಿಜಾ(22), ರೆಹಮಾನ್​(28) ಆತ್ಮಹತ್ಯೆಗೆ ಶರಣಾದ ದಂಪತಿ. ಮೃತ ದಂಪತಿ 15 ದಿನಗಳಿಂದಷ್ಟೇ ಶ್ರೀನಿವಾಸರೆಡ್ಡಿ ಎಂಬುವರ ಕೋಳಿ ಫಾರಂನಲ್ಲಿ ಕೆಲಸಕ್ಕೆ ಸೇರಿಕೊಂಡಿತ್ತು.ಏಳು ದಿನಗಳ ಹಿಂದಷ್ಟೇ ರೆಹಮಾನ್, ಫರಿಜಾ ದಂಪತಿಗೆ ಹೆಣ್ಣು ಹುಟ್ಟಿತ್ತು. ಆದ್ರೆ, ಇದೀಗ ಚಿಕ್ಕ ಹಸುಳೆಯನ್ನು ಬಿಟ್ಟು ದಂಪತಿ ಏಕಾಏಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದೆ.ಆದ್ರೆ, ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ರಾಯಲ್ಪಾಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಫರಿಜಾ ಹಾಗೂ ರೆಹಮಾನ್ ವಿಷ ಸೇವಿಸಿ ಮನೆಯಲ್ಲಿ ಅಕ್ಕಪಕ್ಕದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಮೃತಪಟ್ಟ ತಂದೆ ತಾಯಿಯ ಮಧ್ಯೆ ಏನು ಅರಿಯದ ಮಗು ಅಳುತ್ತಿದ್ದು, ಈ ದೃಶ್ಯ ನೋಡುಗರ ಕಣ್ಣಂಚಿನಲ್ಲಿ ನೀರು ತರಿಸುವಂತಿದೆ.

ಇದನ್ನೂ ಓದಿ: ಮಂಡ್ಯ: ಡಿವೈಡರ್‌ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಕಾರು; ಮೂವರು ದುರ್ಮರಣ

ತಾಯಿಯ ಹೊಟ್ಟೆಯಿಂದ ಹೊರಬಂದು ಏಳು ದಿನವಾಗಿರುವ ಪುಟ್ಟ ಕಂದಮ್ಮ ಈಗ ತಾಣೆ ಕಣ್ಣು ಬಿಟ್ಟು ನೋಡಲು ಪ್ರಾರಂಭಿಸಿದೆ. ಆದ್ರೆ, ಇದೀಗ ಪುಟ್ಟ ಮಗುವಿಗೆ ಹಾರೈಕೆ ಮಾಡುವವರೇ ಇಲ್ಲದಂತಾಗಿದ್ದು, ಚಿಕ್ಕಂದಿನಲ್ಲೇ ಕಣ್ಣು ಬಿಟ್ಟು ನೋಡುವರಷ್ಟರಲ್ಲೇ ಮಗು ತನ್ನ ತಂದೆ ತಾಯಿಯನ್ನ ಕಳೆದುಕೊಂಡು ಅನಾಥವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:49 pm, Sun, 7 December 25

Follow Us
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು