AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಿಂದ ಚೆನ್ನೈ ಸಂಪರ್ಕಿಸಿರೋ ಎಕ್ಸ್‌ಪ್ರೆಸ್‌ ಹೈವೇ ಕಾಮಗಾರಿಯಿಂದಾಗಿ ಕಾಡು ಪ್ರಾಣಿಗಳಿಗೆ ಎದುರಾಯ್ತು ಸಂಕಷ್ಟ

ಬೆಂಗಳೂರಿನಿಂದ ಚೆನ್ನೈ ಸಂಪರ್ಕಿಸಿರೋ ಎಕ್ಸ್‌ಪ್ರೆಸ್‌ ಹೈವೇ ಕಾಮಗಾರಿಯಿಂದಾಗಿ ಅರಣ್ಯವೇ ನಾಶವಾಗಿ ಹೆದ್ದಾರಿ ರೂಪಕೊಳ್ತಿದೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಕೃಷ್ಣವರಂ ಹಾಗೂ ದೊಡ್ಡೂರು, ಕರಪನಹಳ್ಳಿ ಗ್ರಾಮಗಳ ಬಳಿ ಇದೇ ಕಾಮಗಾರಿ ಭರದಿಂದ ಸಾಗಿದೆ.

ಬೆಂಗಳೂರಿನಿಂದ ಚೆನ್ನೈ ಸಂಪರ್ಕಿಸಿರೋ ಎಕ್ಸ್‌ಪ್ರೆಸ್‌ ಹೈವೇ ಕಾಮಗಾರಿಯಿಂದಾಗಿ ಕಾಡು ಪ್ರಾಣಿಗಳಿಗೆ ಎದುರಾಯ್ತು ಸಂಕಷ್ಟ
ಬೆಂಗಳೂರಿನಿಂದ ಚೆನ್ನೈ ಸಂಪರ್ಕಿಸಿರೋ ಎಕ್ಸ್‌ಪ್ರೆಸ್‌ ಹೈವೇ ಕಾಮಗಾರಿಯಿಂದಾಗಿ ಕಾಡು ಪ್ರಾಣಿಗಳಿಗೆ ಎದುರಾಯ್ತು ಸಂಕಷ್ಟ
TV9 Web
| Edited By: |

Updated on: Mar 27, 2022 | 10:34 PM

Share

ಕೋಲಾರ: ಈ ಜಿಲ್ಲೆ ಅಪರೂಪದ ಜೀವಸಂಕುಲ ವಾಸ ಇರೋ ಪ್ರದೇಶ. ಆದ್ರೆ ಅದೇ ಅರಣ್ಯದ ಪಕ್ಕದಲ್ಲಿ ಹಾದು ಹೋಗ್ತಿರೋ ಹೆದ್ದಾರಿ ಮೂಕಪ್ರಾಣಿಗಳಿಗೆ ಕುತ್ತು ತಂದಿದೆ. ಬೃಹತ್‌ ಯಂತ್ರಗಳ ಸದ್ದಿಗೆ ಕಾಡುಮೃಗಗಳು ದಿಕ್ಕಾಪಾಲಾಗಿ ಓಡ್ತಿವೆ. ದೈತ್ಯ ಯಂತ್ರಗಳ ಸದ್ದು, ಅರಣ್ಯದ ಆಹುತಿ, ಕಾಡು ಪ್ರಾಣಿಗಳು ದಿಕ್ಕೆಟ್ಟು ಓಡುವಂತೆ ಮಾಡಿದೆ.

ಎಕ್ಸ್‌ಪ್ರೆಸ್‌ ಹೈವೇ ಕಾಮಗಾರಿ, ಕಾಡು ಪ್ರಾಣಿಗಳಿಗೆ ಕಿರಿಕಿರಿ ಬೆಂಗಳೂರಿನಿಂದ ಚೆನ್ನೈ ಸಂಪರ್ಕಿಸಿರೋ ಎಕ್ಸ್‌ಪ್ರೆಸ್‌ ಹೈವೇ ಕಾಮಗಾರಿಯಿಂದಾಗಿ ಅರಣ್ಯವೇ ನಾಶವಾಗಿ ಹೆದ್ದಾರಿ ರೂಪಕೊಳ್ತಿದೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಕೃಷ್ಣವರಂ ಹಾಗೂ ದೊಡ್ಡೂರು, ಕರಪನಹಳ್ಳಿ ಗ್ರಾಮಗಳ ಬಳಿ ಇದೇ ಕಾಮಗಾರಿ ಭರದಿಂದ ಸಾಗಿದೆ. ಬೆಂಗಳೂರಿಂದ ಚೆನ್ನೈಗೆ ಹೊಸದಾಗಿ ಇಂಡಸ್ಟ್ರಿಯಲ್ ಎಕ್ಸ್ಪ್ರೆಕ್ಸ್ ಕಾರಿಡಾರ್ ಹೈವೇ ನಿರ್ಮಾಣ ಮಾಡಲಾಗುತ್ತಿದೆ. ಈ ಕಾಮಗಾರಿಗೆ ರೈತರ ಸಾವಿರಾರು ಎಕರೆ ಭೂಮಿ ವಶಪಡಿಸಿಕೊಳ್ಳಲಾಗಿದ್ದು, ಸರಿಯಾದ ಪರಿಹಾರ ಕೊಟ್ಟಿಲ್ಲ ಅನ್ನೋ ಆರೋಪ ಕೇಳಿಬಂದಿತ್ತು. ಇದ್ರ ಬೆನ್ನಲ್ಲೇ ಈ ಕಾಮಗಾರಿಯಿಂದಾಗಿ ಈಗ ಮೂಕಪ್ರಾಣಿಗಳು ಕೂಡಾ ರೋಧಿಸುತ್ತಿವೆ.

ಈ ಹೆದ್ದಾರಿ ನಿರ್ಮಾಣದಿಂದಾಗಿ ಸಾವಿರಾರು ಕೃಷ್ಣಮೃಗ ಹಾಗೂ ಜಿಂಕೆಗಳು ವಾಸವಿದ್ದ ಕೃಷ್ಣಾವರಂ ಬಳಿಯ ಬಡಮಾಕನಹಳ್ಳಿ ಅರಣ್ಯ ಪ್ರದೇಶ ನಾಶವಾಗ್ತಿದೆ. ಇಲ್ಲೇ ಕೆಲಸ ನಡೆಯುತ್ತಿರೋದ್ರಿಂದ ಯಂತ್ರಗಳ ಸದ್ದಿಗೆ ಜಿಂಕೆಗಳು ದಿಕ್ಕಾಪಾಲಾಗಿ ಓಡ್ತಿವೆ. ಸದ್ದು ಗದ್ದಲಕ್ಕೆ ಬೆದರಿರುವ ಜಿಂಕೆಗಳು ತಮ್ಮ ನೆಲೆ ಕಳೆದುಕೊಂಡು ಅಕ್ಕ ಪಕ್ಕದ ಗ್ರಾಮಗಳ ಬಳಿಗೆ ಬಂದು ಬೀದಿ ನಾಯಿಗಳಿಗೆ ಆಹಾರವಾಗ್ತಿವೆ. ಅಷ್ಟೇ ಅಲ್ಲ ಹಗಲುರಾತ್ರಿ ನಡೆಯುತ್ತಿರೋ ಬ್ಲಾಸ್ಟಿಂಗ್‌ಗೆ ನವಿಲು, ಕಾಡು ಹಂದಿಗಳು ಕೂಡಾ ಇಲ್ಲಿ ಕಾಣ್ತಿಲ್ಲ. ಆದ್ರೆ ಅರಣ್ಯ ಇಲಾಖೆ ಮಾತ್ರ, ಅರಣ್ಯ ಪ್ರದೇಶದಲ್ಲಿ ಹೆದ್ದಾರಿ ಹಾದು ಹೋಗ್ತಿಲ್ಲ ಅಂತಿದ್ದಾರೆ. ಒಟ್ನಲ್ಲಿ ಬೆಳೆಯುತ್ತಿರೋ ಯುಗದಲ್ಲಿ ಹೆದ್ದಾರಿಗಳು, ಎಕ್ಸ್‌ಪ್ರೆಸ್‌ ಹೈವೇಗಳು ಅನಿವಾರ್ಯ. ಆದ್ರೆ ಈ ನಿರ್ಮಾಣ ಕಾಮಗಾರಿಗೂ ಮುನ್ನ ಈ ಮೂಕಪ್ರಾಣಿಗಳನ್ನ ಸಂರಕ್ಷಣೆ ಮಾಡೋ ಕೆಲಸ ಆಗಬೇಕಿದೆ.

ವರದಿ: ರಾಜೇಂದ್ರ ಸಿಂಹ, ಟಿವಿ9 ಕೋಲಾರ

ಇದನ್ನೂ ಓದಿ: ಬ್ಯಾಂಕ್​​ಗೆ 20 ಕೋಟಿ ರೂ.ವಂಚನೆ ಕೇಸ್​​; 10 ವರ್ಷಗಳ ನಂತರ ಗುಜರಾತ್​ ಮೂಲದ ಉದ್ಯಮಿಯನ್ನು ಬಂಧಿಸಿದ ಸಿಬಿಐ

ಕೋಲಾರದಲ್ಲಿ ಪುರಾತನ ದೇಗುಲ ವಿರೂಪಗೊಳಿಸಿದ ಕಿಡಿಗೇಡಿಗಳು; ಹಿಂದೂ ಕಾರ್ಯಕರ್ತರಿಂದ ಆಕ್ರೋಶ, ಸ್ಥಳದಲ್ಲಿ ಹೈ ಅಲರ್ಟ್

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ