AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು ಉತ್ಪಾದಕರಿಗೆ ಬಿಗ್ ಶಾಕ್; ಕೋಚಿಮುಲ್‌ನಿಂದ ಪ್ರತಿ ಲೀಟರ್​ಗೆ 2 ರೂಪಾಯಿ ಕಡಿತ

ಹಾಲಿನ ಶೇಖರಣೆ ಹೆಚ್ಚಿಗೆ ಹಾಗೂ ಒಕ್ಕೂಟದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕೋಚಿಮುಲ್ ಮುಂದಾಗಿದ್ದು, ಈ ಹಿನ್ನಲೆ ಕೋಚಿಮುಲ್‌ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್​ ಹಾಲಿಗೆ 2 ರೂಪಾಯಿ ಕಡಿತಗೊಳಿಸಿದೆ. ಕೋಚಿಮುಲ್ ನಿರ್ಧಾರದಿಂದ ರೈತರಿಗೆ ಗಾಯದ ಮೇಲೆ ಬರೆ ಹಾಕಿದಂತಾಗಿದೆ.

ಹಾಲು ಉತ್ಪಾದಕರಿಗೆ ಬಿಗ್ ಶಾಕ್; ಕೋಚಿಮುಲ್‌ನಿಂದ ಪ್ರತಿ ಲೀಟರ್​ಗೆ 2 ರೂಪಾಯಿ ಕಡಿತ
ಕೋಚಿಮುಲ್‌ನಿಂದ ಪ್ರತಿ ಲೀಟರ್​ಗೆ 2 ರೂಪಾಯಿ ಕಡಿತ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 04, 2024 | 9:31 PM

Share

ಕೋಲಾರ, ಜು.04: ಮೊದಲಿನಿಂದಲೂ ರೈತರಿಗೆ ತೊಂದರೆ ತಪ್ಪಿದ್ದಲ್ಲ. ಒಮ್ಮೆ ಮಳೆ ಕೈಕೊಟ್ಟರೆ, ಇನ್ನೊಮ್ಮೆ ಬೆಲೆ ಕೈಕೊಡುತ್ತದೆ. ಅದರಂತೆ ಇದೀಗ ಹಾಲು ಉತ್ಪಾದಕರಿಗೆ ಕೋಚಿಮುಲ್​(Kochimul) ಬಿಗ್ ಶಾಕ್ ನೀಡಿದೆ. ಹೌದು, ಹಾಲು ಉತ್ಪಾದಕರಿಗೆ ದಿಢೀರನೆ 2 ರೂಪಾಯಿ ಕಡಿತ ಮಾಡಿ ಕೋಚಿಮುಲ್ ಆಡಳಿತ ಮಂಡಳಿ ಆದೇಶಿಸಿದೆ. ಪ್ರತಿ ಲೀಟರ್ ಹಾಲಿನ ಮೇಲೆ 2 ರುಪಾಯಿ ಕಡಿತ ಮಾಡಿದ್ದು, ನಾಳೆ(ಜು.05) ಬೆಳಿಗ್ಗೆಯಿಂದ ಜಾರಿಗೆ ಬರುವಂತೆ ಕೋಚಿಮುಲ್ ಸೂಚಿಸಿದೆ.

ನಾಳೆಯಿಂದ ಪರಿಷ್ಕೃತ ದರ

ಈ ಮೊದಲು ಹಾಲು ಉತ್ಪಾದಕರಿಗೆ 33.40 ರೂ ನೀಡಲಾಗುತ್ತಿತ್ತು, ಆದರೆ, ನಾಳೆಯಿಂದ ಹಾಲು ಉತ್ಪಾದಕರಿಗೆ ಪರಿಷ್ಕೃತ ದರ ಲೀಟರ್​ಗೆ 31.40 ರೂ ನೀಡಲು ಆದೇಶಿಸಿದೆ.  ಜನವರಿಯಲ್ಲಿ ಪ್ರತಿ ದಿನ ಕೋಚಿಮುಲ್​ಗೆ ಬರೋಬ್ಬರಿ 9.65 ಲಕ್ಷ ಲೀಟರ್ ಹಾಲು ಸಂಗ್ರಹವಾಗಿತ್ತು. ಜೂನ್ ತಿಂಗಳಿನಿಂದ ಪ್ರತಿ ದಿನ ಕೋಚಿಮುಲ್​ಗೆ 12.37 ಲಕ್ಷ ಲೀಟರ್ ಹಾಲು ಸಂಗ್ರಹ ಹಿನ್ನೆಲೆ, ಕೋಲಾರ – ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಗಳಿಂದ 2.50 ಲಕ್ಷ ಲೀಟರ್​ನಷ್ಟು ಹಾಲು ಹೆಚ್ಚಳವಾಗಿತ್ತು. ಆದರೆ, ಹಾಲಿನ ಶೇಖರಣೆ ಹೆಚ್ಚಿಗೆ ಹಾಗೂ ಒಕ್ಕೂಟದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕೋಚಿಮುಲ್ ಈ ನಿರ್ಧಾರ ಕೈಗೊಂಡಿದ್ದು, ಕೋಚಿಮುಲ್ ನಿರ್ಧಾರದಿಂದ ರೈತರಿಗೆ ಗಾಯದ ಮೇಲೆ ಬರೆ ಹಾಕಿದಂತಾಗಿದೆ. ಈಗಾಗಲೇ ಲೀಟರ್‌ಗೆ 4 ರೂ ಹೆಚ್ಚಳ ಮಾಡಿ ಗ್ರಾಹಕರ ಜೇಬಿಗೂ ಕತ್ತರಿ ಹಾಕಲಾಗಿತ್ತು.

ಇದನ್ನೂ ಓದಿ:ಕೋಚಿಮುಲ್ ನೇಮಕಾತಿ ಹಗರಣಕ್ಕೆ ಮಂಗಳೂರು ವಿವಿ ಲಿಂಕ್! ಪರೀಕ್ಷಾಂಗ ಕುಲಸಚಿವರ ವಿಚಾರಣೆ

ಇನ್ನು ಇತ್ತೀಚೆಗಷ್ಟೇ ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ಮಹತ್ವದ ನಿರ್ಧಾರ ಕೈಗೊಂಡಿತ್ತು. ಒಂದು ಲೀಟರ್ ನಂದಿನಿ ಹಾಲಿನ ಪ್ಯಾಕೆಟ್​​ಗೆ 50 ಎಂಎಲ್​​ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದು. ಈ ಹಿನ್ನಲೆ ಸದ್ಯ ಇರುವ ಲೀಟರ್ ಹಾಲಿಗೆ ಇರುವ 42 ರೂಪಾಯಿ ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಇದರ ಬೆನ್ನಲ್ಲೇ ಕೋಚಿಮುಲ್ ಹಾಲು ಉತ್ಪಾದಕರಿಗೆ ಬಿಗ್ ಶಾಕ್ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ