AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು ಉತ್ಪಾದಕರಿಗೆ ಬಿಗ್ ಶಾಕ್; ಕೋಚಿಮುಲ್‌ನಿಂದ ಪ್ರತಿ ಲೀಟರ್​ಗೆ 2 ರೂಪಾಯಿ ಕಡಿತ

ಹಾಲಿನ ಶೇಖರಣೆ ಹೆಚ್ಚಿಗೆ ಹಾಗೂ ಒಕ್ಕೂಟದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕೋಚಿಮುಲ್ ಮುಂದಾಗಿದ್ದು, ಈ ಹಿನ್ನಲೆ ಕೋಚಿಮುಲ್‌ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್​ ಹಾಲಿಗೆ 2 ರೂಪಾಯಿ ಕಡಿತಗೊಳಿಸಿದೆ. ಕೋಚಿಮುಲ್ ನಿರ್ಧಾರದಿಂದ ರೈತರಿಗೆ ಗಾಯದ ಮೇಲೆ ಬರೆ ಹಾಕಿದಂತಾಗಿದೆ.

ಹಾಲು ಉತ್ಪಾದಕರಿಗೆ ಬಿಗ್ ಶಾಕ್; ಕೋಚಿಮುಲ್‌ನಿಂದ ಪ್ರತಿ ಲೀಟರ್​ಗೆ 2 ರೂಪಾಯಿ ಕಡಿತ
ಕೋಚಿಮುಲ್‌ನಿಂದ ಪ್ರತಿ ಲೀಟರ್​ಗೆ 2 ರೂಪಾಯಿ ಕಡಿತ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 04, 2024 | 9:31 PM

Share

ಕೋಲಾರ, ಜು.04: ಮೊದಲಿನಿಂದಲೂ ರೈತರಿಗೆ ತೊಂದರೆ ತಪ್ಪಿದ್ದಲ್ಲ. ಒಮ್ಮೆ ಮಳೆ ಕೈಕೊಟ್ಟರೆ, ಇನ್ನೊಮ್ಮೆ ಬೆಲೆ ಕೈಕೊಡುತ್ತದೆ. ಅದರಂತೆ ಇದೀಗ ಹಾಲು ಉತ್ಪಾದಕರಿಗೆ ಕೋಚಿಮುಲ್​(Kochimul) ಬಿಗ್ ಶಾಕ್ ನೀಡಿದೆ. ಹೌದು, ಹಾಲು ಉತ್ಪಾದಕರಿಗೆ ದಿಢೀರನೆ 2 ರೂಪಾಯಿ ಕಡಿತ ಮಾಡಿ ಕೋಚಿಮುಲ್ ಆಡಳಿತ ಮಂಡಳಿ ಆದೇಶಿಸಿದೆ. ಪ್ರತಿ ಲೀಟರ್ ಹಾಲಿನ ಮೇಲೆ 2 ರುಪಾಯಿ ಕಡಿತ ಮಾಡಿದ್ದು, ನಾಳೆ(ಜು.05) ಬೆಳಿಗ್ಗೆಯಿಂದ ಜಾರಿಗೆ ಬರುವಂತೆ ಕೋಚಿಮುಲ್ ಸೂಚಿಸಿದೆ.

ನಾಳೆಯಿಂದ ಪರಿಷ್ಕೃತ ದರ

ಈ ಮೊದಲು ಹಾಲು ಉತ್ಪಾದಕರಿಗೆ 33.40 ರೂ ನೀಡಲಾಗುತ್ತಿತ್ತು, ಆದರೆ, ನಾಳೆಯಿಂದ ಹಾಲು ಉತ್ಪಾದಕರಿಗೆ ಪರಿಷ್ಕೃತ ದರ ಲೀಟರ್​ಗೆ 31.40 ರೂ ನೀಡಲು ಆದೇಶಿಸಿದೆ.  ಜನವರಿಯಲ್ಲಿ ಪ್ರತಿ ದಿನ ಕೋಚಿಮುಲ್​ಗೆ ಬರೋಬ್ಬರಿ 9.65 ಲಕ್ಷ ಲೀಟರ್ ಹಾಲು ಸಂಗ್ರಹವಾಗಿತ್ತು. ಜೂನ್ ತಿಂಗಳಿನಿಂದ ಪ್ರತಿ ದಿನ ಕೋಚಿಮುಲ್​ಗೆ 12.37 ಲಕ್ಷ ಲೀಟರ್ ಹಾಲು ಸಂಗ್ರಹ ಹಿನ್ನೆಲೆ, ಕೋಲಾರ – ಚಿಕ್ಕಬಳ್ಳಾಪುರ ಎರಡೂ ಜಿಲ್ಲೆಗಳಿಂದ 2.50 ಲಕ್ಷ ಲೀಟರ್​ನಷ್ಟು ಹಾಲು ಹೆಚ್ಚಳವಾಗಿತ್ತು. ಆದರೆ, ಹಾಲಿನ ಶೇಖರಣೆ ಹೆಚ್ಚಿಗೆ ಹಾಗೂ ಒಕ್ಕೂಟದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕೋಚಿಮುಲ್ ಈ ನಿರ್ಧಾರ ಕೈಗೊಂಡಿದ್ದು, ಕೋಚಿಮುಲ್ ನಿರ್ಧಾರದಿಂದ ರೈತರಿಗೆ ಗಾಯದ ಮೇಲೆ ಬರೆ ಹಾಕಿದಂತಾಗಿದೆ. ಈಗಾಗಲೇ ಲೀಟರ್‌ಗೆ 4 ರೂ ಹೆಚ್ಚಳ ಮಾಡಿ ಗ್ರಾಹಕರ ಜೇಬಿಗೂ ಕತ್ತರಿ ಹಾಕಲಾಗಿತ್ತು.

ಇದನ್ನೂ ಓದಿ:ಕೋಚಿಮುಲ್ ನೇಮಕಾತಿ ಹಗರಣಕ್ಕೆ ಮಂಗಳೂರು ವಿವಿ ಲಿಂಕ್! ಪರೀಕ್ಷಾಂಗ ಕುಲಸಚಿವರ ವಿಚಾರಣೆ

ಇನ್ನು ಇತ್ತೀಚೆಗಷ್ಟೇ ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ ಮಹತ್ವದ ನಿರ್ಧಾರ ಕೈಗೊಂಡಿತ್ತು. ಒಂದು ಲೀಟರ್ ನಂದಿನಿ ಹಾಲಿನ ಪ್ಯಾಕೆಟ್​​ಗೆ 50 ಎಂಎಲ್​​ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದು. ಈ ಹಿನ್ನಲೆ ಸದ್ಯ ಇರುವ ಲೀಟರ್ ಹಾಲಿಗೆ ಇರುವ 42 ರೂಪಾಯಿ ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗಿತ್ತು. ಇದರ ಬೆನ್ನಲ್ಲೇ ಕೋಚಿಮುಲ್ ಹಾಲು ಉತ್ಪಾದಕರಿಗೆ ಬಿಗ್ ಶಾಕ್ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ನ ‘ತಬಾಹಿ’ ವೈರಲ್: ಹಾಡು ಬರೆದಿರುವ ಭಟ್ಟರು ಹೇಳಿದ್ದೇನು?
‘ಟಾಕ್ಸಿಕ್’ನ ‘ತಬಾಹಿ’ ವೈರಲ್: ಹಾಡು ಬರೆದಿರುವ ಭಟ್ಟರು ಹೇಳಿದ್ದೇನು?
ಪುನೀತ್, ದರ್ಶನ್ ಜೀವನದಲ್ಲಿ ಆ ಎರಡು ಘಟನೆ ನಡೆಯಬಾರದಿತ್ತು: ಡಾಲಿ ಧನಂಜಯ್
ಪುನೀತ್, ದರ್ಶನ್ ಜೀವನದಲ್ಲಿ ಆ ಎರಡು ಘಟನೆ ನಡೆಯಬಾರದಿತ್ತು: ಡಾಲಿ ಧನಂಜಯ್
ಬೇತಾಳ ದೇವಾಲಯದ ಮೇಲೆ ಬೇತಮಂಗಲ ಪೊಲೀಸರಿಂದ ದಿಢೀರ್​​ ದಾಳಿ
ಬೇತಾಳ ದೇವಾಲಯದ ಮೇಲೆ ಬೇತಮಂಗಲ ಪೊಲೀಸರಿಂದ ದಿಢೀರ್​​ ದಾಳಿ
‘ಮದರ್ ಪ್ರಾಮಿಸ್’ ಸಿನಿಮಾನಲ್ಲಿ ನಟಿಸಿದ್ದೇಕೆ? ವಿವರಿಸಿದ ಡಾಲಿ
‘ಮದರ್ ಪ್ರಾಮಿಸ್’ ಸಿನಿಮಾನಲ್ಲಿ ನಟಿಸಿದ್ದೇಕೆ? ವಿವರಿಸಿದ ಡಾಲಿ
ರಾಜ್ಯ ಸರ್ಕಾರದ ವಿರುದ್ಧ ಅಶೋಕ್​​ ಸ್ಫೋಟಕ ಆರೋಪ
ರಾಜ್ಯ ಸರ್ಕಾರದ ವಿರುದ್ಧ ಅಶೋಕ್​​ ಸ್ಫೋಟಕ ಆರೋಪ
ಸಿದ್ದರಾಮಯ್ಯ ಜೊತೆಗಿನ ಭಿನ್ನಾಭಿಪ್ರಾಯ ಒಪ್ಪಿಕೊಂಡ ಸತೀಶ್​​ ಜಾರಕಿಹೊಳಿ
ಸಿದ್ದರಾಮಯ್ಯ ಜೊತೆಗಿನ ಭಿನ್ನಾಭಿಪ್ರಾಯ ಒಪ್ಪಿಕೊಂಡ ಸತೀಶ್​​ ಜಾರಕಿಹೊಳಿ
KRS ಡ್ಯಾಂನಲ್ಲಿ ಅನುಮತಿಯಿಲ್ಲದೆ ಮಣ್ಣು ಪರೀಕ್ಷೆ: ರೈತರ ತೀವ್ರ ವಿರೋಧ
KRS ಡ್ಯಾಂನಲ್ಲಿ ಅನುಮತಿಯಿಲ್ಲದೆ ಮಣ್ಣು ಪರೀಕ್ಷೆ: ರೈತರ ತೀವ್ರ ವಿರೋಧ
ಅಬ್ಬಿ ಫಾಲ್ಸ್‌ನಲ್ಲಿ ಪ್ರವಾಸಿಗರ ಹುಚ್ಚಾಟ!
ಅಬ್ಬಿ ಫಾಲ್ಸ್‌ನಲ್ಲಿ ಪ್ರವಾಸಿಗರ ಹುಚ್ಚಾಟ!
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?