AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೈಕ್ ಆಕ್ಸಿಡೆಂಟ್: ಬಂಗಾರಪೇಟೆ ಬಳಿ ಡಿವೈಎಸ್ಪಿ ಪುತ್ರ, ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೆ ಸಾವು

ಲಾರಿಗೆ ಹಿಂಬದಿಯಿಂದ ದ್ವಿಚಕ್ರ ವಾಹನ ಡಿಕ್ಕಿಯಾಗಿ (Bike accident) ಬೈಕ್​​ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಕೋಲಾರ ಜಿಲ್ಲೆ ಬಂಗಾರಪೇಟೆ (Bangarapet) ತಾಲೂಕಿನ ನೇರಳೆಕೆರೆ ಬಳಿ ಘಟನೆ ನಡೆದಿದೆ.

ಬೈಕ್ ಆಕ್ಸಿಡೆಂಟ್: ಬಂಗಾರಪೇಟೆ ಬಳಿ ಡಿವೈಎಸ್ಪಿ ಪುತ್ರ, ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೆ ಸಾವು
ಅಪಘಾತ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ಸಾಧು ಶ್ರೀನಾಥ್​|

Updated on:Oct 04, 2023 | 4:27 PM

Share

ಕೆಜಿಎಫ್, ಅಕ್ಟೋಬರ್ 4​: ಲಾರಿಗೆ ಹಿಂಬದಿಯಿಂದ ದ್ವಿಚಕ್ರ ವಾಹನ ಡಿಕ್ಕಿಯಾಗಿ (Bike accident) ಬೈಕ್​​ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಕೋಲಾರ ಜಿಲ್ಲೆ ಬಂಗಾರಪೇಟೆ (Bangarapet) ತಾಲೂಕಿನ ನೇರಳೆಕೆರೆ ಬಳಿ ಘಟನೆ ನಡೆದಿದೆ. ಕೆಜಿಎಫ್​ನಲ್ಲಿ ( KGF) ಇಂಜಿನಿಯರಿಂಗ್ ಮಾಡ್ತಿದ್ದ ವಿದ್ಯಾರ್ಥಿ (engineering student) ಧೀರಜ್ (21) ಮೃತ ಪಟ್ಟ ಯುವಕ.

ಧೀರಜ್ ಚಿತ್ರದುರ್ಗದ ಡಿವೈಎಸ್​​ಪಿ ಅನಿಲ್ ಕುಮಾರ್ ಅವರ ಮಗ. ಬೈಕ್​ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಬಂಗಾರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ:

ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ತಿಪ್ಪಶೆಟ್ಟಿಹಳ್ಳಿ ಗ್ರಾಮದ ಬಾವಿಯಲ್ಲಿ ಕೃಷ್ಣಪ್ಪ(45) ಮೃತದೇಹ ಪತ್ತೆಯಾಗಿದೆ. ಕೃಷ್ಣಪ್ಪ ಕಾಣೆಯಾಗಿದ್ದ ಬಗ್ಗೆ ಕುಟುಂಬಸ್ಥರು 2 ದಿನದ ಹಿಂದೆ ದೂರು ನೀಡಿದ್ದರು. ವೀಳ್ಯದೆಲೆ ಕೊಯ್ಯುವ ಸಲುವಾಗಿ ಗಂಗರಾಜು ತೋಟಕ್ಕೆ ಹೋಗಿದ್ದರು. ಕೊಲೆಗೈದು ಶವವನ್ನು ಬಾವಿಗೆ ಎಸೆದಿದ್ದಾರೆಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:20 pm, Wed, 4 October 23

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!