AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolar: ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ; ಕೋಲಾರದಲ್ಲಿ 3 ತಿಂಗಳ ಮಗು ಸಾವು

ನಿನ್ನೆ 3 ತಿಂಗಳ ಲಸಿಕೆ ಪಡೆದ ಮಗು ನಿನ್ನೆಯಿಂದ ರಾತ್ರಿ ನಿದ್ದೆ ಮಾಡದೆ ಒಂದೇ ಸಮನೆ ಅಳುತ್ತಿತ್ತು. ಇದರ ಪರಿಣಾಮ ಇಂದು ಪುನಃ ಮಗುವನ್ನು ಆಸ್ಪತ್ರೆಗೆ ಕರೆತಂದು ಪೋಷಕರು ವೈದ್ಯರಿಗೆ ತೋರಿಸಿದ್ದರು.

Kolar: ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ; ಕೋಲಾರದಲ್ಲಿ 3 ತಿಂಗಳ ಮಗು ಸಾವು
ಕೋಲಾರದ ಸರ್ಕಾರಿ ಆಸ್ಪತ್ರೆ
TV9 Web
| Edited By: |

Updated on: Feb 04, 2022 | 6:40 PM

Share

ಕೋಲಾರ: ಸರ್ಕಾರಿ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದ 3 ತಿಂಗಳ ಗಂಡು ಮಗುವೊಂದು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಸೋಮಯಾಜಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ನಿನ್ನೆ 3 ತಿಂಗಳ ಲಸಿಕೆ ಪಡೆದ ಮಗು ನಿನ್ನೆಯಿಂದ ರಾತ್ರಿ ನಿದ್ದೆ ಮಾಡದೆ ಒಂದೇ ಸಮನೆ ಅಳುತ್ತಿತ್ತು. ಇದರ ಪರಿಣಾಮ ಇಂದು ಪುನಃ ಮಗುವನ್ನು ಆಸ್ಪತ್ರೆಗೆ ಕರೆತಂದು ಪೋಷಕರು ವೈದ್ಯರಿಗೆ ತೋರಿಸಿದ್ದರು.

ಆದರೆ, ಜ್ವರದಿಂದ ಬಳಲುತ್ತಿದ್ದ ಮಗುವಿಗೆ ಏನೂ ಆಗಿಲ್ಲವೆಂದು ಸಮಜಾಯಿಸಿ ಕೊಟ್ಟ ಡಾಕ್ಟರ್ ಸೌಮ್ಯ, ಹೆಚ್ಚಿನ ಚಿಕಿತ್ಸೆ ಬೇಕಾದರೆ ಶ್ರೀನಿವಾಸಪುರದ ಖಾಸಗಿ ಆಸ್ಪತ್ರೆಗೆ ಹೋಗಿ ಎಂದು ತಿಳಿಸಿದ್ದಾರೆ. ಕೂಡಲೆ ಖಾಸಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮಗು ಸಾವನ್ನಪ್ಪಿದೆ. ಸರ್ಕಾರಿ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಿದ್ದರೆ ಮಗು ಬದುಕುತ್ತಿತ್ತು ಎಂದು ಪೋಷಕರು ಆರೋಪಿಸಿದ್ದಾರೆ. ಸೋಮಯಾಜಲಹಳ್ಳಿ ಗ್ರಾಮದ ಸುಬ್ರಮಣಿ ಹಾಗೂ ಗಂಗರತ್ನ ದಂಪತಿಗಳ ಗಂಡು ಮಗು ಇದಾಗಿದ್ದು, ನಿರ್ಲಕ್ಷ್ಯ ವಹಿಸಿದ ವೈದ್ಯರ ವಿರುದ್ದ ಪೋಷಕರು ಗಂಭೀರ ಅರೋಪ ಮಾಡಿದ್ದಾರೆ.

ಒಂದೇ ಸಮನೆ ಅಳುತ್ತಿದ್ದ ಮಗುವಿಗೆ ಚಿಕಿತ್ಸೆ ನೀಡದೆ ಖಾಸಗಿ ಆಸ್ಪತ್ರೆಗೆ ತೆರಳುವಂತೆ ಸೂಚಿಸಿದ ವೈದ್ಯೆಯಿಂದ ಮಗು ಮೃತಪಟ್ಟಿದೆ ಎಂದು ಸೋಮಯಾಜಲಹಳ್ಳಿ ಪ್ರಾಥಮಿಕ ಅರೋಗ್ಯ ಕೇಂದ್ರದ ಎದುರು ವೈದ್ಯೆಯ ನಿರ್ಲಕ್ಷ್ಯವನ್ನುನ್ನ ಖಂಡಿಸಿ ಮಗುವಿನ ಪೋಷಕರು ಹಾಗೂ ಸಂಬಂಧಿಕರು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ತಾಲೂಕು ವೈದ್ಯಾಧಿಕಾರಿ ಡಾ. ವಿಜಯ ಭೇಟಿ ನೀಡಿದ್ದು, ಘಟನೆಗೆ ಕಾರಣಗಳೇನು? ವೈದ್ಯರ ನಿರ್ಲಕ್ಷ್ಯವಾಗಿದ್ಯಾ? ಎಂಬ ಬಗ್ಗೆ ಮಾಹಿತಿಯನ್ನ ಸಂಗ್ರಹ ಮಾಡುತ್ತಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಕೋಲಾರ: ರೈತರೂ ಇಷ್ಟೊಂದು ಸಾಧನೆ, ಸಂಪಾದನೆ ಮಾಡಬಹುದು; ಮಾದರಿ ಕೃಷಿಕನ ಯಶಸ್ವಿ ಬದುಕು!

ಮಗು ಜನಿಸಿದ ಬಳಿಕ ಬಾಣಂತಿ ಖಿನ್ನತೆಗೆ ಒಳಗಾಗಲು ಕಾರಣವೇನು? ಟಿವಿ9 ಜೊತೆ ಸತ್ಯ ಬಿಚ್ಚಿಟ್ಟ ಸ್ತ್ರೀರೋಗ ತಜ್ಞೆ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್