AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kolar: ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ; ಕೋಲಾರದಲ್ಲಿ 3 ತಿಂಗಳ ಮಗು ಸಾವು

ನಿನ್ನೆ 3 ತಿಂಗಳ ಲಸಿಕೆ ಪಡೆದ ಮಗು ನಿನ್ನೆಯಿಂದ ರಾತ್ರಿ ನಿದ್ದೆ ಮಾಡದೆ ಒಂದೇ ಸಮನೆ ಅಳುತ್ತಿತ್ತು. ಇದರ ಪರಿಣಾಮ ಇಂದು ಪುನಃ ಮಗುವನ್ನು ಆಸ್ಪತ್ರೆಗೆ ಕರೆತಂದು ಪೋಷಕರು ವೈದ್ಯರಿಗೆ ತೋರಿಸಿದ್ದರು.

Kolar: ಸರ್ಕಾರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ; ಕೋಲಾರದಲ್ಲಿ 3 ತಿಂಗಳ ಮಗು ಸಾವು
ಕೋಲಾರದ ಸರ್ಕಾರಿ ಆಸ್ಪತ್ರೆ
TV9 Web
| Edited By: |

Updated on: Feb 04, 2022 | 6:40 PM

Share

ಕೋಲಾರ: ಸರ್ಕಾರಿ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯದಿಂದ 3 ತಿಂಗಳ ಗಂಡು ಮಗುವೊಂದು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಸೋಮಯಾಜಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ನಿನ್ನೆ 3 ತಿಂಗಳ ಲಸಿಕೆ ಪಡೆದ ಮಗು ನಿನ್ನೆಯಿಂದ ರಾತ್ರಿ ನಿದ್ದೆ ಮಾಡದೆ ಒಂದೇ ಸಮನೆ ಅಳುತ್ತಿತ್ತು. ಇದರ ಪರಿಣಾಮ ಇಂದು ಪುನಃ ಮಗುವನ್ನು ಆಸ್ಪತ್ರೆಗೆ ಕರೆತಂದು ಪೋಷಕರು ವೈದ್ಯರಿಗೆ ತೋರಿಸಿದ್ದರು.

ಆದರೆ, ಜ್ವರದಿಂದ ಬಳಲುತ್ತಿದ್ದ ಮಗುವಿಗೆ ಏನೂ ಆಗಿಲ್ಲವೆಂದು ಸಮಜಾಯಿಸಿ ಕೊಟ್ಟ ಡಾಕ್ಟರ್ ಸೌಮ್ಯ, ಹೆಚ್ಚಿನ ಚಿಕಿತ್ಸೆ ಬೇಕಾದರೆ ಶ್ರೀನಿವಾಸಪುರದ ಖಾಸಗಿ ಆಸ್ಪತ್ರೆಗೆ ಹೋಗಿ ಎಂದು ತಿಳಿಸಿದ್ದಾರೆ. ಕೂಡಲೆ ಖಾಸಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮಗು ಸಾವನ್ನಪ್ಪಿದೆ. ಸರ್ಕಾರಿ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಿದ್ದರೆ ಮಗು ಬದುಕುತ್ತಿತ್ತು ಎಂದು ಪೋಷಕರು ಆರೋಪಿಸಿದ್ದಾರೆ. ಸೋಮಯಾಜಲಹಳ್ಳಿ ಗ್ರಾಮದ ಸುಬ್ರಮಣಿ ಹಾಗೂ ಗಂಗರತ್ನ ದಂಪತಿಗಳ ಗಂಡು ಮಗು ಇದಾಗಿದ್ದು, ನಿರ್ಲಕ್ಷ್ಯ ವಹಿಸಿದ ವೈದ್ಯರ ವಿರುದ್ದ ಪೋಷಕರು ಗಂಭೀರ ಅರೋಪ ಮಾಡಿದ್ದಾರೆ.

ಒಂದೇ ಸಮನೆ ಅಳುತ್ತಿದ್ದ ಮಗುವಿಗೆ ಚಿಕಿತ್ಸೆ ನೀಡದೆ ಖಾಸಗಿ ಆಸ್ಪತ್ರೆಗೆ ತೆರಳುವಂತೆ ಸೂಚಿಸಿದ ವೈದ್ಯೆಯಿಂದ ಮಗು ಮೃತಪಟ್ಟಿದೆ ಎಂದು ಸೋಮಯಾಜಲಹಳ್ಳಿ ಪ್ರಾಥಮಿಕ ಅರೋಗ್ಯ ಕೇಂದ್ರದ ಎದುರು ವೈದ್ಯೆಯ ನಿರ್ಲಕ್ಷ್ಯವನ್ನುನ್ನ ಖಂಡಿಸಿ ಮಗುವಿನ ಪೋಷಕರು ಹಾಗೂ ಸಂಬಂಧಿಕರು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ತಾಲೂಕು ವೈದ್ಯಾಧಿಕಾರಿ ಡಾ. ವಿಜಯ ಭೇಟಿ ನೀಡಿದ್ದು, ಘಟನೆಗೆ ಕಾರಣಗಳೇನು? ವೈದ್ಯರ ನಿರ್ಲಕ್ಷ್ಯವಾಗಿದ್ಯಾ? ಎಂಬ ಬಗ್ಗೆ ಮಾಹಿತಿಯನ್ನ ಸಂಗ್ರಹ ಮಾಡುತ್ತಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಕೋಲಾರ: ರೈತರೂ ಇಷ್ಟೊಂದು ಸಾಧನೆ, ಸಂಪಾದನೆ ಮಾಡಬಹುದು; ಮಾದರಿ ಕೃಷಿಕನ ಯಶಸ್ವಿ ಬದುಕು!

ಮಗು ಜನಿಸಿದ ಬಳಿಕ ಬಾಣಂತಿ ಖಿನ್ನತೆಗೆ ಒಳಗಾಗಲು ಕಾರಣವೇನು? ಟಿವಿ9 ಜೊತೆ ಸತ್ಯ ಬಿಚ್ಚಿಟ್ಟ ಸ್ತ್ರೀರೋಗ ತಜ್ಞೆ

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!