AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲೂರಿನಲ್ಲಿ ಉದ್ಯಮಿ ಬಾಬು ಅಪಹರಣ ಪ್ರಕರಣ ಸುಖಾಂತ್ಯ; ಉದ್ಯಮಿಯನ್ನ ಬಿಟ್ಟು ಕಳುಹಿಸಿದ ಕಿಡ್ನಾಪರ್ಸ್, ಕಾರಣ ಇಲ್ಲಿದೆ

ಆ ಕುಟುಂಬ ಆರ್ಥಿಕವಾಗಿ ಒಂದಷ್ಟು ಅನುಕೂಲಸ್ಥರಾಗಿರಬಹುದೇನೋ ಆದರೆ, ಮನೆಯಲ್ಲಿರುವವರಿಗೆ ಬಹಳ ಅನಾರೋಗ್ಯವೇ ಕಾಡುತ್ತಿದೆ. ಮನೆಯ ಯಜಮಾನಿ ನಡೆಯಲಾಗದ ಸ್ಥಿತಿ, ಮನೆ ಮಗನಿಗೆ ಪೆರಾಲಿಸಿಸ್​ ಆಗಿ ಆನಾರೋಗ್ಯ ಕಾಡುತ್ತಿದೆ. ಹೀಗಿರುವಾಗ ಮನೆಯ ಯಜಮಾನನ್ನೇ ಕಿಡ್ನಾಪ್​ ಮಾಡಿದ್ದ ದುಷ್ಕರ್ಮಿಗಳು, ಇದೀಗ ಬಿಟ್ಟು ಕಳುಹಿಸಿದ್ದಾರೆ.

ಮಾಲೂರಿನಲ್ಲಿ ಉದ್ಯಮಿ ಬಾಬು ಅಪಹರಣ ಪ್ರಕರಣ ಸುಖಾಂತ್ಯ; ಉದ್ಯಮಿಯನ್ನ ಬಿಟ್ಟು ಕಳುಹಿಸಿದ ಕಿಡ್ನಾಪರ್ಸ್, ಕಾರಣ ಇಲ್ಲಿದೆ
ಅಪಹರಣಕ್ಕೋಳಗಾದ ಉದ್ಯಮಿ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 07, 2023 | 2:05 PM

Share

ಕೋಲಾರ: ಜಿಲ್ಲೆಯ ಮಾಲೂರಿ(Malur)ನ ಮಾರುತಿ ಬಡಾವಣೆ ನಿವಾಸಿ ಉದ್ಯಮಿ ಬಾಬು ಎಂಬುವವರನ್ನ ನಿನ್ನೆ(ಜು.5) ಮಾಡಲಾಗಿತ್ತು. ಬಳಿಕ 5 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಕಿಡ್ನಾಪರ್ಸ್(Kidnapers) ಉದ್ಯಮಿಯನ್ನ ಆಂಧ್ರದ ಪಲಮನೇರು ಅರಣ್ಯಕ್ಕೆ ಕರೆದೊಯ್ದಿದ್ದರು. ಇದೀಗ ಬಾಬುರನ್ನ ಬಿಟ್ಟು ಕಳುಹಿಸಿದ್ದಾರೆ. ಆ ಮೂಲಕ ಅಪಹರಣ ಪ್ರಕರಣ ಸುಖಾಂತ್ಯ ಕಂಡಿದೆ. ಈ ಕುರಿತು ಉದ್ಯಮಿ ‘ಮುಖಕ್ಕೆ ಮಾಸ್ಕ್​ ಹಾಕಿದ್ದು, ಅವರೂ ಕೂಡ ಮಂಕಿ ಟೋಪಿಯನ್ನ ಹಾಕಿಕೊಂಡಿದ್ದರು. ಆದರೆ, ಮೂರು ಜನ ಇದ್ದರೆಂದು ಅಪಹರಣಕ್ಕೊಳಗಾದ ಉದ್ಯಮಿ ಹೇಳಿದ್ದಾರೆ.

ಉದ್ಯಮಿಯನ್ನ ಬಿಡಲು ಕಾರಣವೇನು?

ಇನ್ನು ಉದ್ಯಮಿಯನ್ನ ಕಿಡ್ನ್ಯಾಪ್ ಮಾಡಿ, ಬರೊಬ್ಬರಿ 5 ಕೋಟಿಗೆ ಭೇಡಿಕೆಯಿಟ್ಟಿದ್ದ ಕಿಡ್ನಾಪರ್ಸ್, ಅಪಹರಣ ವಿಚಾರ ಪೊಲೀಸರಿಗೆ ಗೊತ್ತಾದ ಹಿನ್ನೆಲೆ ಬಿಟ್ಟು ಕಳುಹಿಸಿದ್ದಾರೆ. ನಿನ್ನೆ(ಜು.6) ರಾತ್ರಿ ಸುರಕ್ಷಿತವಾಗಿ ಬಾಬು ಮನೆಗೆ ವಾಪಸ್ ಆಗಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮೂರು ತಂಡ ರಚನೆ ಮಾಡಿ, ಹುಡುಕಾಟ ನಡೆಸಿದ್ದಾರೆ. ಈ ಕುರಿತು ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:Yadagir News: ಹಾಡಹಾಗಲೇ ಇಬ್ಬರು ಗ್ರಾ.ಪಂ. ಮಹಿಳಾ ಸದಸ್ಯೆಯರ ಅಪಹರಣ: ಕಾಂಗ್ರೆಸ್ ಮುಖಂಡರ ವಿರುದ್ಧ ಕಿಡ್ನಾಪ್ ಆರೋಪ

ಘಟನೆ ವಿವರ

ಇಟ್ಟಿಗೆ ಕಾರ್ಖಾನೆ, ರಿಯಲ್​ ಎಸ್ಟೇಟ್​, ಟಿಂಬರ್​ ಕೆಲಸ ಹೀಗೆ ಹಲವು ಕೆಲಸಗಳನ್ನು ಮಾಡಿಕೊಂಡು ಒಂದಷ್ಟು ಆರ್ಥಿಕವಾಗಿ ಅನುಕೂಲಸ್ಥರಾಗಿ ಇರುವ ಬಾಬು ಅವರನ್ನು ನಿನ್ನೆ ಮಧ್ಯಾಹ್ನ ಇಟ್ಟಿಗೆ ಖರೀದಿ ಮಾಡುವ ನೆಪದಲ್ಲಿ ಬಂದ ಯಾರೋ ದುಷ್ಕರ್ಮಿಗಳು ಅವರನ್ನು ಮಾಲೂರು ತಾಲ್ಲೂಕಿನ ಹೆಡಗಿನಬೆಲೆ ಗ್ರಾಮದ ಇಟ್ಟಿಗೆ ಕಾರ್ಖಾನೆ ಬಳಿ ಕರೆದುಕೊಂಡು ಹೋಗಿ, ನಂತರ ಅಲ್ಲಿಂದ ಅವರನ್ನು ಕಿಡ್ನಾಪ್​ ಮಾಡಲಾಗಿತ್ತು. ಸಂಜೆಯಾದರೂ ಮನೆಗೆ ಊಟಕ್ಕೆ ಬರಲಿಲ್ಲವೆಂದು ಅವರ ಪತ್ನಿ ವರಲಕ್ಷ್ಮಿ ಹಾಗೂ ಮಗ ಮಂಜುನಾಥ್​ ಪೋನ್​ ಮಾಡಿದ್ರೆ, ಪೋನ್​ ಸ್ವಿಚ್​ ಆಫ್​ ಬಂದಿತ್ತು.

ನಂತರ ಸಂಜೆ ವೇಳೆ ಬಾಬು ಅವರ ಪೋನ್​ ನಂಬರ್​ನಿಂದಲೇ ಯಾರೋ ದುಷ್ಕರ್ಮಿಗಳು ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬಾಬು ಅವರನ್ನು ಕಿಡ್ನಾಪ್​ ಮಾಡಿದ್ದೇವೆ. ನಿಮಗೆ ಅವರು ಬೇಕೆಂದರೆ 5 ಕೋಟಿ ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದರು. ಗಾಬರಿಗೊಂಡ ಮನೆಯವರು ಬಾಬು ಅವರು ಎಲ್ಲಿದ್ದಾರೆ ಎಂದು ಕೇಳಿದಾಗ ಅವರಿಂದಲೇ ಪೋನ್​ ನಲ್ಲಿ ಮಾತನಾಡಿಸಿದ್ದರು. ಇದರಿಂದ ದಿಕ್ಕು ಕಾಣದಾದ ಕುಟುಂಬಸ್ಥರು ಮಾಲೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಇದೀಗ ಉದ್ಯಮಿ ವಾಪಾಸ್ಸಾಗಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ