AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರಾವಣ ಶನಿವಾರ: ತಿಮ್ಮಪ್ಪನ ದರ್ಶನ ಪಡೆದು ವಾಪಸ್ಸಾಗುತ್ತಿದ್ದಾಗ ಲಾರಿಗೆ ಕಾರು ಡಿಕ್ಕಿ, DySP ತಂದೆ ಸಾವು

ಘಟನೆಯಲ್ಲಿ ಹುಣಸೂರು ಅಬಕಾರಿ DySP ವಿಜಯ್ ​ಕುಮಾರ್​​, ಅವರ ತಾಯಿ ಮತ್ತು ಅಬಕಾರಿ ಇನ್ಸ್​ಪೆಕ್ಟರ್​​ ಲೋಕೇಶ್​ ಅವರುಗಳು ಗಾಯಗೊಂಡಿದ್ದಾರೆ. ವಿಜಯ್ ​ಕುಮಾರ್ ಅವರ ಕುಟುಂಬ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ವಾಪಸ್ಸಾಗುತ್ತಿದ್ದಾಗ ಶ್ರಾವಣ ಶನಿವಾರವಾದ ಇಂದು ಆಂಧ್ರದ ಪಲಮನೇರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶ್ರಾವಣ ಶನಿವಾರ: ತಿಮ್ಮಪ್ಪನ ದರ್ಶನ ಪಡೆದು ವಾಪಸ್ಸಾಗುತ್ತಿದ್ದಾಗ ಲಾರಿಗೆ ಕಾರು ಡಿಕ್ಕಿ, DySP ತಂದೆ ಸಾವು
ತಿಮ್ಮಪ್ಪನ ದರ್ಶನ ಪಡೆದು ವಾಪಸ್ಸಾಗುತ್ತಿದ್ದಾಗ ಲಾರಿಗೆ ಕಾರು ಡಿಕ್ಕಿ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on:Sep 02, 2023 | 1:06 PM

Share

ಕೋಲಾರ, ಸೆಪ್ಟೆಂಬರ್​ 2: ಆಂಧ್ರದ ಪಲಮನೇರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ (Palamaner on National Highway) ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿಯಾಗಿ ಅಪಘಾತ (accident) ಸಂಭವಿಸಿದ್ದು, ಹುಣಸೂರು ಅಬಕಾರಿ DySP ತಂದೆ (Hunsur Excise DySp) ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಗಿರಿಗೌಡ (80) ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಮೂವರಿಗೆ ಗಾಯಗಳಾಗಿವೆ. ಮೃತ ಗಿರಿಗೌಡ ಅವರು ಹುಣಸೂರು ಅಬಕಾರಿ DySP ವಿಜಯ್​ ಕುಮಾರ್ ಅವರ ತಂದೆ.

ಘಟನೆಯಲ್ಲಿ ಹುಣಸೂರು ಅಬಕಾರಿ DySP ವಿಜಯ್ ​ಕುಮಾರ್​​, ಅವರ ತಾಯಿ ಮತ್ತು ಅಬಕಾರಿ ಇನ್ಸ್​ಪೆಕ್ಟರ್​​ ಲೋಕೇಶ್​ ಅವರುಗಳು ಗಾಯಗೊಂಡಿದ್ದಾರೆ. ಕೋಲಾರದ ಜಾಲಪ್ಪ ಆಸ್ಪತ್ರೆಯಲ್ಲಿ ಮೂವರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ವಿಜಯ್ ​ಕುಮಾರ್ ಅವರ ಕುಟುಂಬ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ವಾಪಸ್ಸಾಗುತ್ತಿದ್ದಾಗ ಶ್ರಾವಣ ಶನಿವಾರವಾದ ಇಂದು ಆಂಧ್ರದ ಪಲಮನೇರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Also Read: ಕೋಲಾರದ ರೈತನಿಗೆ ಬಂಗಾರದ ಬೆಳೆಯಾದ ಸೀಬೆ; ಲಕ್ಷ ಲಕ್ಷ ಆದಾಯಕ್ಕೆ ಕಾರಣವಾಯ್ತು ಮಿಶ್ರ ಬೆಳೆ

ಡಿಎಸ್ಪಿ ವಿಜಯ್ ಕುಮಾರ್ ಎರಡು ಕಾಲುಗಳಿಗೆ ಗಾಯಗಳಾಗಿವೆ, ಇನ್ನು ಅಬಕಾರಿ ಇನ್ಸ್‌ಪೆಕ್ಟರ್ ಲೋಕೇಶ್ ಗೆ ಸಣ್ಣಪುಟ್ಟ ಗಾಯಗಳಾಗಿವೆ, ಡಿಎಸ್ಪಿ ವಿಜಯ್ ಕುಮಾರ್ ಅವರ ತಾಯಿಗೆ ತಲೆಗೆ ತೀವ್ರ ಪೆಟ್ಟಾಗಿದ್ದು ಚಿಕಿತ್ಸೆ ಮುಂದುವರಿದಿದೆ.

ಆಟ ಆಡ್ತಾ ಆಡ್ತಾ ವಿಷ ಸೇವನೆ ಮಾಡಿಬಿಟ್ಟ ಪುಟ್ಟ ಕಂದಮ್ಮಗಳು, ತೀವ್ರ ಅಸ್ವಸ್ಥ

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ) ಸೆಪ್ಟೆಂಬರ್​ 2: ಮನೆ ಮುಂದೆ ರಸ್ತೆಯಲ್ಲಿ ಆಟವಾಡುವ ವೇಳೆ ಮೂರು ಪುಟ್ಟ ಕಂದಮ್ಮಗಳು ವಿಷ (poison) ಸೇವಿಸಿದ್ದು, ತೀವ್ರ ಅಸ್ವಸ್ಥಗೊಂಡಿವೆ. ದೇವನಹಳ್ಳಿ (devanahalli) ಪಟ್ಟಣದ ವಿನಾಯಕ ನಗರದಲ್ಲಿ ಈ ಅಚಾತುರ್ಯ ಘಟನೆ ನಡೆದಿದೆ. ಸುಚಿತ್ರಾ ( 3 ) ಲೋಹಿತ್ಯಾ ( 4 ) ವೇದಾಂತ ( 3 ) ವಿಷ ಸೇವನೆಯಿಂದ ಅಸ್ವಸ್ಥರಾದ ಮಕ್ಕಳು (toddlers).

ರಸ್ತೆ ಬದಿಯಲ್ಲಿ ಪ್ಯಾಕೆಟ್ ನಲ್ಲಿ ತುಂಬಿದ್ದ ಡ್ರೈನೇಜ್ ಕ್ಲೀನರ್ (D-Klog) ಪಾಯಿಸನ್ ಅನ್ನು ಸಕ್ಕರೆಯೆಂದು ಭಾವಿಸಿ, ಮೂವರೂ ಮಕ್ಕಳು ತಿಂದುಬಿಟ್ಟಿವೆ. ಅದೃಷ್ಟವಶಾತ್ ಮೂರೂ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:11 am, Sat, 2 September 23

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!