AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಬ್ರಿಡ್ಜ್‌ನಿಂದ ಕೆಳಗುರುಳಿದ ಕಾರು; ನಾಲ್ವರು ದುರ್ಮರಣ

Bengaluru-Chennai Expressway: ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಸ್ಪೀಡ್ ಆಗಿ ಹೋಗುತ್ತಿದ್ದ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರು ಬ್ರಿಡ್ಜ್​​ ಮೇಲಿಂದ ಕೆಳಗೆ ಬಿದ್ದಿದೆ. ಪರಿಣಾಮ ಈ ದುರ್ಘಟನೆಯಲ್ಲಿ ನಾಲ್ವರು ಯುವಕರು ದುರಂತ ಸಾವು ಕಂಡಿದ್ದಾರೆ.

ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಬ್ರಿಡ್ಜ್‌ನಿಂದ ಕೆಳಗುರುಳಿದ ಕಾರು; ನಾಲ್ವರು ದುರ್ಮರಣ
ಬ್ರಿಡ್ಜ್​ ಮೇಲಿಂದ ಬಿದ್ದ ಕಾರು
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Nov 24, 2025 | 3:02 PM

Share

ಕೋಲಾರ, (ನವೆಂಬರ್ 24): ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇನಲ್ಲಿ (Bengaluru-Chennai Expressway) ಕಾರು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಕೋಲಾರದ ಮಾಲೂರು (Maluru) ತಾಲೂಕಿನ ಅಬ್ಬೇನಹಳ್ಳಿ ಬಳಿ ನಡೆದಿದೆ. ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿದೆ. ಬಳಿಕ ಬ್ರಿಡ್ಜ್ ನಿಂದ ಕೆಳಗೆ ಬಿದ್ದಿದೆ. ಈ ದುರ್ಘಟನೆಯಲ್ಲಿಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27), ಜಯಂಕರ್ (30) ಮೃತಟ್ಟಿದ್ದು, ಇವರೆಲ್ಲರೂ ಚೆನ್ನೈ ಮೂಲದವರು ಎಂದು ತಿಳಿದುಬಂದಿದೆ.

ಕಾರು ಬ್ರಿಡ್ಜ್​​ ಮೇಲಿಂದ ಕೆಳಗೆ ಬಿದ್ದಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಯುವಕರನ್ನು ಕೋಲಾರದ ಅರ್ ಎಲ್ ಜಾಲಪ್ಪ ಆಸ್ಪತ್ರೆಗೆ ಚಿಕಿತ್ಸೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಯುವಕರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ರಿಡ್ಜ್​ ಮೇಲಿಂದ ನಾಲ್ಕು ಗಾಲಿಗಳು ಮೇಲೆ ಮಾಡಿ ಕಾರು ಬಿದ್ದಿದೆ. ಇನ್ನು  ಡಿವೈಡರ್​​​ಗೆ ಡಿಕ್ಕಿ ಹೊಡೆದು ಬಳಿಕ ಬ್ರಿಡ್ಜ್​​ ಮೇಲಿಂದ ಕೆಳಗುರುಳಿದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ