ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಬ್ರಿಡ್ಜ್‌ನಿಂದ ಕೆಳಗುರುಳಿದ ಕಾರು; ನಾಲ್ವರು ದುರ್ಮರಣ

Bengaluru-Chennai Expressway: ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಸ್ಪೀಡ್ ಆಗಿ ಹೋಗುತ್ತಿದ್ದ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಬಳಿಕ ಕಾರು ಬ್ರಿಡ್ಜ್​​ ಮೇಲಿಂದ ಕೆಳಗೆ ಬಿದ್ದಿದೆ. ಪರಿಣಾಮ ಈ ದುರ್ಘಟನೆಯಲ್ಲಿ ನಾಲ್ವರು ಯುವಕರು ದುರಂತ ಸಾವು ಕಂಡಿದ್ದಾರೆ.

ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಬ್ರಿಡ್ಜ್‌ನಿಂದ ಕೆಳಗುರುಳಿದ ಕಾರು; ನಾಲ್ವರು ದುರ್ಮರಣ
ಬ್ರಿಡ್ಜ್​ ಮೇಲಿಂದ ಬಿದ್ದ ಕಾರು
Edited By:

Updated on: Nov 24, 2025 | 3:02 PM

ಕೋಲಾರ, (ನವೆಂಬರ್ 24): ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇನಲ್ಲಿ (Bengaluru-Chennai Expressway) ಕಾರು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಕೋಲಾರದ ಮಾಲೂರು (Maluru) ತಾಲೂಕಿನ ಅಬ್ಬೇನಹಳ್ಳಿ ಬಳಿ ನಡೆದಿದೆ. ಬೆಂಗಳೂರು – ಚೆನ್ನೈ ಎಕ್ಸ್‌ಪ್ರೆಸ್ ಹೈವೇಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿದೆ. ಬಳಿಕ ಬ್ರಿಡ್ಜ್ ನಿಂದ ಕೆಳಗೆ ಬಿದ್ದಿದೆ. ಈ ದುರ್ಘಟನೆಯಲ್ಲಿಗೋಪಿ (38), ಗೌತಮ್ ರಮೇಶ್ (28), ಹರಿಹರನ್ (27), ಜಯಂಕರ್ (30) ಮೃತಟ್ಟಿದ್ದು, ಇವರೆಲ್ಲರೂ ಚೆನ್ನೈ ಮೂಲದವರು ಎಂದು ತಿಳಿದುಬಂದಿದೆ.

ಕಾರು ಬ್ರಿಡ್ಜ್​​ ಮೇಲಿಂದ ಕೆಳಗೆ ಬಿದ್ದಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಯುವಕರನ್ನು ಕೋಲಾರದ ಅರ್ ಎಲ್ ಜಾಲಪ್ಪ ಆಸ್ಪತ್ರೆಗೆ ಚಿಕಿತ್ಸೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಯುವಕರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ರಿಡ್ಜ್​ ಮೇಲಿಂದ ನಾಲ್ಕು ಗಾಲಿಗಳು ಮೇಲೆ ಮಾಡಿ ಕಾರು ಬಿದ್ದಿದೆ. ಇನ್ನು  ಡಿವೈಡರ್​​​ಗೆ ಡಿಕ್ಕಿ ಹೊಡೆದು ಬಳಿಕ ಬ್ರಿಡ್ಜ್​​ ಮೇಲಿಂದ ಕೆಳಗುರುಳಿದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
Follow Us