AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Organ Donation: ರಿಸೆಪ್ಷನ್ ವೇಳೆ ಕುಸಿದು ಬಿದ್ದ ಮದುಮಗಳು, ಬ್ರೈನ್ ಡೆಡ್ – ಅಂಗಾಂಗ ದಾನ ಮಾಡಿದ ಕುಟುಂಬಸ್ಥರು

Brain dead: ಚೈತ್ರಾ (26) ಬ್ರೈನ್ ಡೆಡ್ ಆಗಿ ಅಸ್ವಸ್ಥಳಾದ ಮದುಮಗಳು. ಈ ಯುವತಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಮೂಲದವರು. ಆಕೆಯ ನಿಧನಾನಂತರ ಚೈತ್ರಾಳ ಅಂಗಾಂಗ ದಾನಕ್ಕೆ ನಿರ್ಧಾರ ಮಾಡಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

Organ Donation: ರಿಸೆಪ್ಷನ್ ವೇಳೆ ಕುಸಿದು ಬಿದ್ದ ಮದುಮಗಳು, ಬ್ರೈನ್ ಡೆಡ್ - ಅಂಗಾಂಗ ದಾನ ಮಾಡಿದ ಕುಟುಂಬಸ್ಥರು
ರಿಸೆಪ್ಷನ್ ವೇಳೆ ಕುಸಿದು ಬಿದ್ದ ಮದುಮಗಳು, ಬ್ರೈನ್ ಡೆಡ್ - ಅಂಗಾಂಗ ದಾನ ಮಾಡಿದ ಕುಟುಂಬಸ್ಥರು
TV9 Web
| Updated By: ಸಾಧು ಶ್ರೀನಾಥ್​|

Updated on:Feb 12, 2022 | 11:49 AM

Share

ಕೋಲಾರ: ಮದುವೆಯಾಗಿ ಸುಖ ಜೀವನ ಕಾಣಬೇಕಿದ್ದ ಯುವತಿಯೊಬ್ಬಳ ಜೀವನದಲ್ಲಿ ವಿಧಿ ತನ್ನ ಲೀಲೆ ತೋರಿದೆ. ಆ ಯುವತಿಯ ಸುಂದರ ಬದುಕನ್ನು ಮದುವೆ ರಿಸೆಪ್ಷನ್ ವೇಳೆಯೇ ಚಿವುಟಿಹಾಕಿದೆ. ತನ್ನ ಮದುವೆಯ ಆರತಕ್ಷತೆಯಲ್ಲಿ ಕುಸಿದು ಬಿದ್ದು ಮದುಮಗಳು (bride) ಅಸ್ವಸ್ಥಳಾಗಿದ್ದಾಳೆ. ತಕ್ಷಣ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ (nimhans) ಸೇರಿಸಲಾಗಿ, ಅಲ್ಲಿನ ವೈದ್ಯರು ಆಕೆಯನ್ನು ಬ್ರೈನ್ ಡೆಡ್ (brain dead) ಎಂದು ಘೋಷಣೆ ಮಾಡಿರುವ ಮನಕಲಕುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ.

MSc ಓದಿದ್ದ ಚೈತ್ರಾ ಕೈವಾರದಲ್ಲಿ ಉಪನ್ಯಾಸಕಿ: ಚೈತ್ರಾ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕೊಡಚೆರವು ಗ್ರಾಮದ ಕೃಷಿಕ ರಾಮಪ್ಪ ಎಂಬುವರ ಮಗಳು. ಎಂಎಸ್ಸಿ ಬಯೋಕೆಮಿಸ್ಟ್ರಿ ಮಾಡಿ, ಕೈವಾರದಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದರು. ಫೆಬ್ರವರಿ 6 ರಂದು ಸಂಜೆ ಶ್ರೀನಿವಾಸಪುರ ಪಟ್ಟಣದಲ್ಲಿ ಆರತಕ್ಷತೆ ನಡೆದಿತ್ತು. ಹೊಸಕೋಟೆ ಮೂಲದ ಯುವಕನೊಂದಿಗೆ ಚೈತ್ರಾ ಮದುವೆ ನಿಶ್ಚಯವಾಗಿತ್ತು. ಆದರೆ ಮದುವೆಯ ಮನೆಯಿಂದ ನೇರ ಆಸ್ಪತ್ರೆಗೆ ಹೋಗಿದ್ದ ಚೈತ್ರಾ. ಚಿಕಿತ್ಸೆ ಫಲಿಸದೆ ನಿನ್ನೆ ನಿಮ್ಹಾನ್ಸ್ ವೈದ್ಯರು ಬ್ರೈನ್ ಡೆಡ್ ಎಂದು ಘೋಷಣೆ ಮಾಡಿದ್ದಾರೆ. ಬಳಿಕ ಕುಟುಂಬಸ್ಥರು ಚೈತ್ರಾಳ ಅಂಗಾಂಗ ದಾನ ಮಾಡಿದ್ದಾರೆ.

ಚೈತ್ರಾ (26) ಬ್ರೈನ್ ಡೆಡ್ ಆಗಿ ಅಸ್ವಸ್ಥಳಾದ ಮದುಮಗಳು. ಈ ಯುವತಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಮೂಲದವರು. ಆಕೆಯ ನಿಧನಾನಂತರ ಚೈತ್ರಾಳ ಅಂಗಾಂಗ ದಾನಕ್ಕೆ ನಿರ್ಧಾರ ಮಾಡಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ  ಎಂದು  ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಮಾಡಿ, ಕರುಣಾಜನಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಟ್ವೀಟ್ ಸಾರಾಂಶ ಹೀಗಿದೆ: It was a big day for the 26-year Chaitra but destiny had other plans. She collapsed during her wedding reception at Srinivasapur in Kolar district. She was later declared as brain dead at NIMHANS. Despite the heart breaking tragedy, her parents have decided to donate her organs.

ಇದನ್ನೂ ಓದಿ: Hijab Row: ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್​ ನಿವಾಸಕ್ಕೆ ಶಾಸಕ ಭೇಟಿ – ಐ ಫೋನ್, ಸ್ಮಾರ್ಟ್​ವಾಚ್​ ಗಿಫ್ಟ್​

ಇದನ್ನೂ ಓದಿ: Sidlaghatta: ಶಿಡ್ಲಘಟ್ಟದ ಇತಿಹಾಸದಲ್ಲಿಯೇ ದಂಪತಿಯ ಭೀಕರ ಕೊಲೆ, ಗವಾಕ್ಷಿಯಿಂದ ಇಳಿದು ಕುಕೃತ್ಯ, ನಗನಾಣ್ಯ ದರೋಡೆ

Published On - 6:22 am, Sat, 12 February 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?