AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ ಶಾಸಕರ ಮುನಿಸು ಶಮನಕ್ಕೆ ಸಿಎಂ ಸಿದ್ದರಾಮಯ್ಯ ಎಂಟ್ರಿ, ಕೆಲವೇ ಕ್ಷಣಗಳಲ್ಲಿ ಸಭೆ

ಕೋಲಾರ ಕಾಂಗ್ರೆಸ್ ಭಿನ್ನಮತದ ಬೆಂಕಿ ತಣಿಸಲು ಇದೀಗ ಸಿಎಂ ಸಿದ್ದರಾಮಯ್ಯ ಅಖಾಡಕ್ಕಿಳಿದಿದ್ದಾರೆ. ಅತೃಪ್ತರೊಂದಿಗೆ ಸಭೆ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದಾರೆ. ಕೋಲಾರ ನಾಯಕರ ಜತೆಗಿನ ಸಿಎಂ ಸಭೆಯ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಸಹ ಇರಲಿದ್ದಾರೆ.

ಕೋಲಾರ ಶಾಸಕರ ಮುನಿಸು ಶಮನಕ್ಕೆ ಸಿಎಂ ಸಿದ್ದರಾಮಯ್ಯ ಎಂಟ್ರಿ, ಕೆಲವೇ ಕ್ಷಣಗಳಲ್ಲಿ ಸಭೆ
ಸಿದ್ದರಾಮಯ್ಯ
TV9 Web
| Updated By: Ganapathi Sharma|

Updated on: Mar 28, 2024 | 2:58 PM

Share

ಬೆಂಗಳೂರು, ಮಾರ್ಚ್​ 28: ಸಚಿವ ಕೆಹೆಚ್​ ಮುನಿಯಪ್ಪ ಅಳಿಯನಿಗೆ ಟಿಕೆಟ್​ ವಿರೋಧಿಸಿ ಕೋಲಾರ (Kolar) ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಶಾಸಕರು, ಎಂಎಲ್​ಸಿಗಳ ರಾಜೀನಾಮೆಯ ಹೈಡ್ರಾಮಾವೇ ನಡೆದುಗೋಗಿದೆ. ಟಿಕೆಟ್​ ಘೋಷಣೆಗೂ ಮುನ್ನವೇ ಕೋಲಾರ ಕಾಂಗ್ರೆಸ್​ನಲ್ಲಿ (Congress) ಬಣ ಬಡಿದಾಟ ಸ್ಫೋಟಗೊಂಡಿದೆ. ಕೋಲಾರ ಕಾಂಗ್ರೆಸ್​ನಲ್ಲಿನ ಬಿರುಕು ಮತ್ತೆ ಜಗಜಾಹೀರಾಗಿದ್ದು, ಸದ್ಯ ಕೋಲಾರ ಟಿಕೆಟ್​ ಘೋಷಣೆಯನ್ನು ಹೈಕಮಾಂಡ್​ ತಡೆ ಹಿಡಿದಿದೆ. ಇದೀಗ ಅಸಮಾಧಾನ ಶಮನಕ್ಕೆ ಖುದ್ದು ಸಿಎಂ ಸಿದ್ದರಾಮಯ್ಯರೇ (CM Siddaramaiah) ಮುಂದಾಗಿದ್ದಾರೆ.

ಸಚಿವ ಮುನಿಯಪ್ಪ ಮತ್ತು ರಮೇಶ್ ಕುಮಾರ್ ಬಣಗಳ ನಡುವಿನ ತಿಕ್ಕಾಟವೇ ಟಿಕೆಟ್​ ಕಲಹಕ್ಕೆ ಕಾರಣವಾಗಿದೆ. ಸಚಿವ ಮುನಿಯಪ್ಪ, ಕೋಲಾರದಲ್ಲಿ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್‌ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಯಾವುದೇ ಕಾರಣಕ್ಕೂ ಟಿಕೆಟ್​ ಕೊಡಬಾರದು ಎಂದು ರಮೇಶ್ ಕುಮಾರ ಬಣ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಶಾಸಕರ ಮುನಿಸು ಶಮನಕ್ಕೆ ಸಿಎಂ ಸಿದ್ದರಾಮಯ್ಯ ಸಂಜೆ 4 ಗಂಟೆಯ ಹೊತ್ತಿಗೆ ಸಭೆ ಕರೆದಿದ್ದಾರೆ. ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಕೋಲಾರ ಶಾಸಕರು ಭಾಗಿಯಾಗುತ್ತಿದ್ದಾರೆ.

ಕೋಲಾರ ನಾಯಕರ ಜೊತೆ ಚರ್ಚೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನು ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ಕೋಲಾರ ಟಕೆಟ್​ ವಿಚಾರದಲ್ಲಿ ಸಂಜೆಯೊಳಗೆ ತೀರ್ಮಾನ ಆಗುತ್ತದೆ. ಯಾರೂ ರಾಜೀನಾಮೆ ಕೊಡುವುದಿಲ್ಲ ಅಂದಿದ್ದಾರೆ.

ಕೋಲಾರ ಸ್ಥಳೀಯ ನಾಯಕರು, ಹೈಕಮಾಂಡ್ ಮಧ್ಯೆ ಸಂಘರ್ಷ?

ಕೋಲಾರ ಕಾಂಗ್ರೆಸ್​ ಟಿಕೆಟ್​ ವಿಚಾರದಲ್ಲಿ ರಾಜ್ಯ ನಾಯಕರು, ಹೈಕಮಾಂಡ್​ ಮಧ್ಯೆ ಸಂಘರ್ಷ ಏರ್ಪಟ್ಟಿದೆ. ಸಚಿವ ಮುನಿಯಪ್ಪರನ್ನ ಮಾತ್ರ ಖರ್ಗೆ ಚರ್ಚೆಗೆ ಆಹ್ವಾನಿಸಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಕೋಲಾರ ಮುನಿಸಿಗೆ ಕಾರಣವೇನು?

ಟಿಕೆಟ್​ ವಿಚಾರದಲ್ಲಿ ಮುನಿಯಪ್ಪರನ್ನು ಮಾತ್ರ ಚರ್ಚೆಗೆ ಪರಿಗಣಿಸಿದ್ದ ಖರ್ಗೆ, ಮುನಿಯಪ್ಪ ಜೊತೆ ಮಾತ್ರ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ. ಬೇರೆ ನಾಯಕರ ಅಭಿಪ್ರಾಯದ ಬಗ್ಗೆ ಖರ್ಗೆ ಚರ್ಚಿಸಿರಲಿಲ್ಲ. ಕೋಲಾರ ಸ್ಥಳೀಯ ನಾಯಕರ ಅಭಿಪ್ರಾಯ ಪಡೆದಿರಲಿಲ್ಲ. ವಿಧಾನಸಭೆಗೆ ದೇವನಹಳ್ಳಿಯಿಂದ ಮುನಿಯಪ್ಪ ಆಯ್ಕೆ ಆಗಿದ್ದಾರೆ. ಇದರಿಂದ ಮುನಿಯಪ್ಪರನ್ನು ಕೋಲಾರದಿಂದ ಹೊರಗಿಡಲು ಶಾಸಕರ ತಂತ್ರ ಆಗಿದೆ. ಮುನಿಯಪ್ಪರಿಂದ ಉಳಿಗಾಲ ಎಂದುಕೊಂಡಿರೋ ಶಾಸಕರು, ಶಾಸಕರು ಪಕ್ಷ ಸೇರ್ಪಡೆಗೂ ವಿರೋಧಿಸಿದ್ದ ಮುನಿಯಪ್ಪ, ಕೊತ್ತೂರು ಮಂಜುನಾಥ್, ಎಂಸಿ ಸುಧಾಕರ್ ಸೇರ್ಪಡೆಗೆ ಅಡ್ಡಗಾಲು ಹಾಕಿದ್ದರು. ವಿರೋಧಿ ಬಣ ಸೃಷ್ಟಿ ಆಗುತ್ತೆಂದು ಅಡ್ಡಗಾಲು ಹಾಕಿದ್ದ ಮುನಿಯಪ್ಪ, ಇದಿರಂದ ರಾಜಕೀಯ ಭವಿಷ್ಯಕ್ಕೆ ಕಂಟಕ ಎಂದು ಶಾಸಕರು ಭಾವಿಸಿದ್ದಾರೆ.

ಇದನ್ನೂ ಓದಿ: ಕೋಲಾರದಲ್ಲಿ ಕಾಂಗ್ರೆಸ್ ಶಾಸಕರ ರಾಜೀನಾಮೆ ನಿರ್ಧಾರಕ್ಕೆ ಖರ್ಗೆ ‘ಮಲತಾಯಿ ಧೋರಣೆ’ ಕಾರಣವಾಯ್ತಾ?

ಒಟ್ಟಾರೆಯಾಗಿ ಕೋಲಾರ ಕಾಂಗ್ರೆಸ್​ ಟಿಕೆಟ್​ನಲ್ಲಿ ಬಣ ಬಡಿದಾಟ ನಡೆಯುತ್ತಿದೆ. ಮನವೊಲಿಸಲು ಸಿಎಂ ಸಿದ್ದರಾಮಯ್ಯರೇ ಖುದ್ದು ಎಂಟ್ರಿಯಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ದೇವದತ್ ಪಡಿಕ್ಕಲ್ 4ನೇ ಅರ್ಧಶತಕ: ಹುಬ್ಬಳ್ಳಿ ಟೈಗರ್ಸ್​ಗೆ ಭರ್ಜರಿ ಜಯ
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
ಉಫ್... ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
Daily Devotional: ಶ್ರಾವಣ ಮಾಸದ ಅಮಾವಾಸ್ಯೆ ಪೂಜಾ ವಿಧಿ-ವಿಧಾನ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಶ್ರಾವಣ ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಶುಭ ತಿಳಿಯಿರಿ
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
ಇದ್ದಕ್ಕಿದ್ದಂತೆ ಚಲಿಸಿ ಒಬ್ಬ ವ್ಯಕ್ತಿಯ ಜೀವ ಬಲಿ ಪಡೆದ ಟಾಟಾ ಹ್ಯಾರಿಯರ್!
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ