AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯರಗೋಳ್ ನೀರಾವರಿ ಯೋಜನೆಯಲ್ಲಿ ಅವ್ಯವಹಾರ ಆರೋಪ: ತನಿಖೆಗೆ ಆದೇಶಿಸಿದ ಸಿದ್ದರಾಮಯ್ಯ

ಕೋಲಾರ ಜಿಲ್ಲೆಯ ಯರಗೋಳ್ ನೀರಾವರಿ ಯೋಜನೆಯಲ್ಲಿ ಅವ್ಯವಹಾರ ಆರೋಪ ಕೇಳಿಬಂದಿದ್ದರಿಂದ ಸಿಎಂ ಸಿದ್ದರಾಮಯ್ಯ ಅವರು ತನಿಖೆಗೆ ಆದೇಶಿಸಿದ್ದಾರೆ.

ಯರಗೋಳ್ ನೀರಾವರಿ ಯೋಜನೆಯಲ್ಲಿ ಅವ್ಯವಹಾರ ಆರೋಪ: ತನಿಖೆಗೆ ಆದೇಶಿಸಿದ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
TV9 Web
| Edited By: |

Updated on:Jul 15, 2023 | 12:19 PM

Share

ಕೋಲಾರ/ಬೆಂಗಳೂರು, (ಜುಲೈ 15): ಯರಗೋಳ್ ನೀರಾವರಿ ಯೋಜನೆಯಲ್ಲಿ(yargol project) ಅವ್ಯವಹಾರ(corruption) ಆರೋಪ ಕೇಳಿಬಂದ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನಿಖೆಗೆ ಆದೇಶಿಸಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಯತಗೋಳ ಗ್ರಾಮದ ಬಳಿ ಕರ್ನಾಟಕ ನಗರ ನೀರು ಸರಬರಾಜು ಹಾಗು ಒಳಚರಂಡಿ ಮಂಡಳಿಯು 160 ಕೋಟಿ ರೂಪಾಯಿ ವೆಚ್ಚದಲ್ಲಿ ಯರಗೋಳ ಡ್ಯಾಂ ನಿರ್ಮಾಣ ಮಾಡಿದೆ. ಆದರೆ ಡ್ಯಾಂ ನಿರ್ಮಾಣ, ಪೈಪ್ ಲೈನ್ ಅಳವಡಿಕೆ, ಓವರ್ ಹೆಡ್ ಟ್ಯಾಂಕ್ ನಿರ್ಮಾಣದಲ್ಲಿ ನಿಗದಿಗಿಂತಲೂ ಹೆಚ್ಚುವರಿಯಾಗಿ ಹಣ ಮಂಜೂರು ಮಾಡಿದ ಆರೋಪ ಸಂಬಂಧ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ದೂರಿನ ಮೇರೆಗೆ ತನಿಖೆಗೆ ಆದೇಶಿಸಲಾಗಿದೆ.

160 ಕೋಟಿ ವೆಚ್ಚದಲ್ಲಿ ಡ್ಯಾಂ ನಿರ್ಮಾಣ ಮಾಡಲಾಗಿದ್ದು, ನೀರು ಪೂರೈಕೆಗೆ 79 ಕೋಟಿ ರೂ ಹಣ ವೆಚ್ಚ ಸೇರಿದಂತೆ ಒಟ್ಟು 249 ಕೋಟಿ ರೂಪಾಯಿ ಯೋಜನೆಗೆ ಹಣ ಮಂಜೂರು ಮಾಡಲಾಗಿತ್ತು. ಆದ್ರೆ, ಡ್ಯಾಂ ನಿರ್ಮಾಣ, ಪೈಪ್ ಲೈನ್ ಅಳವಡಿಕೆ, ಓವರ್ ಹೆಡ್ ಟ್ಯಾಂಕ್ ನಿರ್ಮಾಣದಲ್ಲಿ ನಿಗದಿಗಿಂತಲೂ ಹೆಚ್ಚುವರಿಯಾಗಿ ಹಣ ಮಂಜೂರು ಮಾಡಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ದೂರಿನ ಮೇರೆಗೆ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದು, 15 ದಿನದಲ್ಲಿ ತನಿಖೆ ನಡೆಸಿ, ವರದಿ ನೀಡುವಂತೆ ಪ್ರಾದೇಶಿಕ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

2007ರಲ್ಲಿ ಬಿಜೆಪಿ-ಜೆಡಿಎಸ್​ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಹೆಚ್‍.ಡಿ. ಕುಮಾರಸ್ವಾಮಿ ಅವರ ಸರ್ಕಾರದಲ್ಲಿ ಅನುಮೋದನೆಗೊಂಡಿದ್ದ, ಕೋಲಾರ ಜಿಲ್ಲೆಯ ಬಹುನಿರೀಕ್ಷಿತ ಯರಗೋಳ್ ಕುಡಿಯುವ ನೀರಿನ ಕಾಮಗಾರಿ. ಈ ಕಾಮಗಾರಿಗೆ 2008 ರಲ್ಲಿ ಅಂದಾಜು 160 ಕೋಟಿ ರೂ. ಎಂದು ಅಂದಾಜಿಸಲಾಗಿತ್ತು. 3 ತಾಲೂಕಿನ ಜನರಿಗೆ ಕುಡಿಯುವ ನೀರು ಸಿಗುತ್ತದೆಂಬ ಆಸೆಯಿಂದ ಯರಗೋಳ್‌ ಯೋಜನೆಗೆ ಅನುಮೋದನೆ ನೀಡಲಾಗಿತ್ತು. ಆದ್ರೆ, ಇದೀಗ ಈ ಯೋಜನೆ ದಿಕ್ಕು ತಪ್ಪಿದೆ.

ಯರಗೋಳ್‌ ಯೋಜನೆಯಲ್ಲಿ ಕೆಲಸವಾಗದೆ ಅನುದಾನ ಮಂಗಮಾಯವಾಗಿದ್ದರೂ, ಇದರ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಬದಲಿಗೆ ಜಿಲ್ಲೆಯ ಜನರಿಗೆ ಅಂಗೈಯಲ್ಲಿ ಅರಮನೆ ತೋರಿಸಿ ಯೋಜನೆಗಳ ಹಣವನ್ನು ಲೂಟಿ ಮಾಡಿಸಿದ್ದಾರೆ ಎಂದು ಜಿಲ್ಲೆ ರೈತ ಸಂಘಟನೆಗಳು ಆರೋಪಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Published On - 11:25 am, Sat, 15 July 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?