AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಲ್ಮೀಕಿ ಹಗರಣದಲ್ಲಿ ಹಣ ತಿಂದವರಿಗೆ ಕುಷ್ಟರೋಗ ಬಂದು ಸಾಯಲಿ: ಕಾಂಗ್ರೆಸ್ ಶಾಸಕನಿಂದಲೇ ಶಾಪ!

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ಕೋಲಾರ ಶಾಸಕ ಕೊತ್ತನೂರು ಮಂಜುನಾಥ್ ಅಚ್ಚರಿಯ ಮತ್ತು ತೀಕ್ಷ್ಣವಾದ ಹೇಳಿಕೆ ನೀಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆಯಾಗಿರುವುದು ನಿಜ ಎಂದು ಒಪ್ಪಿಕೊಂಡಿರುವ ಅವರು ನೀಡಿರುವ ಗಂಭೀರ ಹೇಳಿಕೆ ಇಲ್ಲಿದೆ.

ವಾಲ್ಮೀಕಿ ಹಗರಣದಲ್ಲಿ ಹಣ ತಿಂದವರಿಗೆ ಕುಷ್ಟರೋಗ ಬಂದು ಸಾಯಲಿ: ಕಾಂಗ್ರೆಸ್ ಶಾಸಕನಿಂದಲೇ ಶಾಪ!
ಕೊತ್ತನೂರು ಮಂಜುನಾಥ್
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Jul 06, 2024 | 1:52 PM

Share

ಕೋಲಾರ, ಜುಲೈ 6: ವಾಲ್ಮೀಕಿ ಹಗರಣದಲ್ಲಿ ಹಣ ತಿಂದವರಿಗೆ ಕುಷ್ಟರೋಗ ಬಂದು ಹಾರ್ಟ್​ ಅಟ್ಯಾಕ್​ ಆಗಿ ಸಾಯಲಿ ಎಂದು ಕಾಂಗ್ರೆಸ್ ಶಾಸಕ ಕೊತ್ತೂರು ಮಂಜನಾಥ್ ಶಾಪ ಹಾಕಿದ್ದಾರೆ. ಕೋಲಾರದಲ್ಲಿ ಹಗರಣದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಹಣ ವರ್ಗಾವಣೆ ಆಗಿರುವುದು. ಈ ಬಗ್ಗೆ ನಾವು ಮಾಧ್ಯಮಗಳಲ್ಲಿ ನೋಡಿದ್ದೇವೆ. ಹಗರಣದಲ್ಲಿ ಯಾರೇ ಇದ್ದರೂ ಅವರಿಗೆ ಶಿಕ್ಷೆಯಾಗಲಿ. ಹಗರಣ ಕುರಿತು ಸಿಐಡಿ ತನಿಖೆ ಸರಿಯಾಗಿ ಆಗುತ್ತಿಲ್ಲ, ಇಲ್ಲಿ ನ್ಯಾಯ ಸಿಗುವುದು ಅನುಮಾನ ಎನಿಸಿದರೆ, ಸಿಬಿಐ ತನಿಖೆಗೆ ವಹಿಸಬೇಕು ಎಂದು ನಾನೂ ಕೂಡಾ ಒತ್ತಾಯ ಮಾಡುತ್ತೇನೆ ಎಂದರು.

ಮುಡಾ ಹಗರಣ ಕುರಿತು ಇನ್ನೂ ತನಿಖೆ ನಡೆಯುತ್ತಿದೆ. ಹೆಚ್ ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ಅವರ ಸುದ್ದಿ ತೆಗಿಯಲೇ ಬೇಡಿ. ಅವರ ಸಹವಾಸವೇ ಬೇಡ ಎಂದರು. ಮುಡಾ ಆಗಲಿ ವಾಲ್ಮೀಕಿ ನಿಗಮದ್ದಾಗಲೀ ಸರಿಯಾದ ತನಿಖೆಯಾಗಿ ಸತ್ಯಾಂಶ ಹೊರಬರಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದರು.

ಡಿಕೆ ಶಿವಕುಮಾರ್​​ಗೆ ಸಿಎಂ ಸ್ಥಾನ ಬಿಟ್ಟುಕೊಡುವಂತೆ ಸ್ವಾಮೀಜಿ ಕೇಳಿದ ವಿಚಾರವಾಗಿ ಪ್ರತಿಕ್ರಿಯಿಸಿ, ಸ್ವಾಮೀಜಿಗಳೇ ನೀವು ನಿಮ್ಮ ಕೆಲಸ ಮಾಡಿ. ದಯಮಾಡಿ ರಾಜಕೀಯಕ್ಕೆ ಬರಬೇಡಿ. ಕರ್ನಾಟಕದಲ್ಲಿನ ಸರ್ವ ಜನಾಂಗದ ಸ್ವಾಮೀಜಿಗಳಲ್ಲಿ ಮನವಿ, ಯಾವುದೇ ಸ್ವಾಮೀಜಿ ಒಂದು ಜಾತಿಗೆ ಸಂಬಂಧಿಸಿದ ಸ್ವಾಮೀಜಿ ಆಗಿರುವುದಿಲ್ಲ. ಸ್ವಾಮೀಜಿಗಳಲ್ಲಿ ಪಾದಕ್ಕೆ ನಮಸ್ಕರಿಸಿ ಕೇಳಿಕೊಳ್ಳುತ್ತೇನೆ, ಸ್ವಾಮೀಜಿಗಳು ನೀವು ದಯಮಾಡಿ ರಾಜಕೀಯಕ್ಕೆ ಬರಬೇಡಿ. ಸ್ವಾಮೀಜಿಗಳ ಮೇಲಿರುವ ಗೌರವ ಕಡಿಮೆಯಾಗುತ್ತದೆ. ದಯವಿಟ್ಟು ಧರ್ಮವನ್ನು ಉಳಿಸಿ, ಬಡ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿ, ಕಷ್ಟ ಎಂದು ಬಂದ ಜನರಿಗೆ ಆಶೀರ್ವಾದ ಮಾಡಿ, ಪ್ರವಚನ ಮಾಡಿ ಎಂದು ಮನವಿ ಮಾಡಿದರು.

ಸ್ವಾಮೀಜಿಗಯಿಂದ ಯಾರೂ ಹೇಳಿಸಿರುವುದಲ್ಲ, ಅವರೇ ಪ್ರೀತಿಯಿಂದ ಹೇಳಿದ್ದಾರೆ. ದಯಮಾಡಿ ಸ್ವಾಮೀಜಿಗಳು ರಾಜಕೀಯಕ್ಕೆ ಬರಬೇಡಿ ಎಂದರು.

ಕೋಚಿಮುಲ್​ ನಿರ್ಧಾರ ಸರಿಯಲ್ಲ: ಮಂಜುನಾಥ್

ಕೋಚಿಮುಲ್​​ನಿಂದ ಹಾಲು ಉತ್ಪಾದಕರಿಗೆ 2 ರೂ. ಕಡಿತ ವಿಚಾರವಾಗಿ ಪ್ರತಿಕ್ರಿಯಿಸಿದ ಶಾಸಕ ಕೊತ್ತೂರು ಮಂಜುನಾಥ್, ಕೋಚಿಮುಲ್​ ನಿರ್ಧಾರ ಸರಿ ಇಲ್ಲ. ಈ ಬಗ್ಗೆ ಸೋಮವಾರ ಸಭೆ ಕರೆಯಲಾಗಿದೆ. ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಜೊತೆಗೆ ಚರ್ಚಿಸಿ ಸಮಸ್ಯೆ ಬಗೆಹರಿಸುತ್ತೇವೆ ಎಂದರು. ಒಕ್ಕೂಟಕ್ಕೆ ನಷ್ಟವಾದರೂ ಪರವಾಗಿಲ್ಲ ರೈತರಿಗೆ ತೊಂದರೆಯಾಗಬಾರದು ಎಂದರು.

ಇದನ್ನೂ ಓದಿ: ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿಯ ಜಮೀನೇ ಇಲ್ಲ, ನಕಲಿ‌ ದಾಖಲೆ‌ ಸೃಷ್ಟಿ ಎಂದ ಆರ್​​ಟಿಐ ಕಾರ್ಯಕರ್ತ

ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಫಾಗಿಂಗ್ ಮಾಡಲು ಹಾಗೂ ಶುಚಿತ್ವ ಕಾಪಾಡಲು ಸೂಚನೆ ನೀಡಲಾಗಿದೆ. ಸೊಳ್ಳೆ ನಿಯಂತ್ರಣ ಮಾಡುವುದು ಕಷ್ಟ. ಅವುಗಳನ್ನು ಕಂಟ್ರೋಲ್​ ಮಾಡಲು ಪ್ರಯತ್ನ ಮಾಡಲಾಗುತ್ತಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ