AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಟಾರ್ಗೆಟ್ ಮಾಡುವವರಿಗೆ ಇನ್ನೆಷ್ಟು ಭಯ ಇರಬೇಕು: ರಮೇಶ್​ಕುಮಾರ್ ವಾಗ್ದಾಳಿ

ಯಾರಾದ್ರೂ ನನ್ನನ್ನ ಟಾರ್ಗೆಟ್ ಮಾಡಿದರೆ ಮನಸ್ಸಿನಲ್ಲಿ ಜೈ ದೇವರಾಜ ಅರಸು ಎಂದು ನೆನಪಿಸಿಕೊಳ್ಳುತ್ತೇನೆ ಎಂದು ಪರೋಕ್ಷವಾಗಿ ಸಚಿವ ಸುಧಾಕರ್​ಗೆ ಟಾಂಗ್ ಕೊಟ್ಟರು

ನನ್ನನ್ನು ಟಾರ್ಗೆಟ್ ಮಾಡುವವರಿಗೆ ಇನ್ನೆಷ್ಟು ಭಯ ಇರಬೇಕು: ರಮೇಶ್​ಕುಮಾರ್ ವಾಗ್ದಾಳಿ
ರಮೇಶ್ ​ಕುಮಾರ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Oct 28, 2021 | 11:07 PM

Share

ಕೋಲಾರ: ಕೆಲವರು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ನನ್ನ ಬಗ್ಗೆ ಅವರಿಗೆ ಇನ್ನೆಷ್ಟು ಭಯ ಇರಬೇಕು. ನನಗೆ ಇದಕ್ಕಿಂತಲೂ ಗೌರವ ಬೇಕೆ ಎಂದು ಮಾಜಿ ಸಚಿವ ಡಾ.ಕೆ.ರಮೇಶ್​ಕುಮಾರ್ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಹೆಸರು ಹೇಳದೆ ಟೀಕಿಸಿದರು.

ಡಿಸಿಸಿ ಬ್ಯಾಂಕ್​ನಲ್ಲಿ ಮಾತನಾಡಿದ ಅವರು, ನೆನಪಿರಲಿ ನಾನು ದೇವರಾಜ ಅರಸು ಬಳಿ ತರಬೇತಿ ಪಡೆದಿದ್ದೇನೆ. ಅವರಂತೆ 8 ವರ್ಷ ಈ ರಾಜ್ಯ ಆಳಲು ಯಾರಿಂದಲೂ ಆಗಿಲ್ಲ. ಅಂತಿಮಯಾತ್ರೆಯಲ್ಲಿ ಅರಸು ಹುಲಿ ಹೋದಂತೆ ಹೋದರು. ಯಾರಾದ್ರೂ ನನ್ನನ್ನ ಟಾರ್ಗೆಟ್ ಮಾಡಿದರೆ ಮನಸ್ಸಿನಲ್ಲಿ ಜೈ ದೇವರಾಜ ಅರಸು ಎಂದು ನೆನಪಿಸಿಕೊಳ್ಳುತ್ತೇನೆ ಎಂದು ಪರೋಕ್ಷವಾಗಿ ಸಚಿವ ಸುಧಾಕರ್​ಗೆ ಟಾಂಗ್ ಕೊಟ್ಟರು.

ನಾನು ಜನರ ಕೃಪೆಯಿಂದ ಉಳಿದಿದ್ದೇನೆ. ನನ್ನ ತಾಯಿ ಅನಕ್ಷರಸ್ಥೆ, ತಂದೆ 2ನೇ ಕ್ಲಾಸ್ ಓದಿದ್ದಾರೆ. ಇಷ್ಟು ಜನ ನನ್ನನ್ನು ಟಾರ್ಗೆಟ್ ಮಾಡ್ತಾ ಇದ್ದಾರೆ ಅಂದ್ರೆ ಅದಕ್ಕಿಂತ ಗೌರವ ಬೇಕಾ ನನಗೆ ಎಂದು ತಮ್ಮನ್ನು ಟಾರ್ಗೆಟ್ ಮಾಡುವವರಿಗೆ ಟೇಬಲ್ ಗುದ್ದಿ ಎಚ್ಚರಿಕೆ ಕೊಟ್ಟರು.

ಡಿಸಿಸಿ ಬ್ಯಾಂಕ್​ನಲ್ಲಿ ಸಾವಿರಾರು ಹೆಣ್ಣು ಮಕ್ಕಳಿಗೆ ಪಕ್ಷ, ಜಾತಿ, ಪಂಗಡ ನೋಡದೆ ಎಲ್ಲರಿಗೂ ಸಾಲ ನೀಡಿದ್ದೇವೆ. ಯಾರು ಬೇಕಾದರೂ ಸಂಘ ರಚಿಸಿಕೊಂಡು ಬಂದು ಸಾಲ ಕೇಳಬಹುದು. ಉದ್ದೇಶ ಪೂರ್ವಕವಾಗಿ ಸಾಲ ಕೊಟ್ಟಿಲ್ಲ ಅಂದ್ರೆ ಪ್ರಶ್ನಿಸಬಹುದು ಎಂದರು. ಡಿಸಿಸಿ ಬ್ಯಾಂಕ್​ನಲ್ಲಿ ಅವ್ಯವಹಾರ ಆಗಿದ್ದರೆ ದಾವೆ ಹೂಡಲಿ. ಮೊಕದ್ದಮೆ ಹೂಡುವುದಕ್ಕೆ ಕಾನೂನಿನಲ್ಲಿ ಅವಕಾಶ ಇದೆ. ಸುಖಾಸುಮ್ಮನೆ ಗಾಳಿಯಲ್ಲಿ ಮಾತಾಡುವುದನ್ನು ಬಿಡಬೇಕು ಎಂದು ಡಿಸಿಸಿ ಬ್ಯಾಂಕ್​​ನಲ್ಲಿ ಅವ್ಯವಹಾರವಾಗಿದೆ ಎಂದು ಆರೋಪ ಮಾಡಿದ್ದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ಹೆಸರು ಪ್ರಸ್ತಾಪಿಸದೇ ತಾಕೀತು ಮಾಡಿದರು.

ಇದನ್ನೂ ಓದಿ: ಸುಧಾಕರ್​ಗೆ ಅಧಿಕಾರದ ಮದ! ದುರಹಂಕಾರದಲ್ಲಿ ಮಾತನಾಡುತ್ತಿದ್ದಾರೆ- ಸಿದ್ದರಾಮಯ್ಯ ತಿರುಗೇಟು ಇದನ್ನೂ ಓದಿ: ಕೋಲಾರ ಡಿಸಿಸಿ ಬ್ಯಾಂಕ್​ನಲ್ಲಿ ಭ್ರಷ್ಟಾಚಾರ ನಡೆದಿದೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

Published On - 11:06 pm, Thu, 28 October 21

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು