AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral video: ಕಾಂಗ್ರೆಸ್​ ಮುಖಂಡ ಶ್ರೀನಿವಾಸಪುರದ ಶ್ರೀನಿವಾಸ ಕೊಲೆ ಪ್ರಕರಣ: ರಾಜಿ ಪಂಚಾಯ್ತಿ ವಿಡಿಯೋ ವೈರಲ್

Mediation video: 2018ರಲ್ಲೇ ಶ್ರೀನಿವಾಸನನ್ನು ಕೊಲೆ ಮಾಡಲು ಯತ್ನಿಸಿದ್ದ ವೇಣುಗೋಪಾಲ್. ಆ ವೇಳೆ ತಾನೇ ವಿಡಿಯೋ ರೆಕಾರ್ಡ್ ಮಾಡಿದ್ದಾಗಿ ವೇಣುಗೋಪಾಲ್ ಒಪ್ಪಿಕೊಂಡಿದ್ದ. ನಾನು ನಿನಗೆ ಹೊಡೆಯಬೇಕಿತ್ತು, ಆದರೆ ಆ ಏಟು ಬೇರೆಯವರಿಗೆ ಬಿತ್ತು. ಪರಸ್ಪರ ಚರ್ಚೆ ವೇಳೆ ಶ್ರೀನಿವಾಸ್​ಗೆ ನೇರವಾಗಿ ಹೇಳಿದ್ದ ವೇಣುಗೋಪಾಲ್. ಕೊಲೆಯಾದ ಶ್ರೀನಿವಾಸ, ಆರೋಪಿ ವೇಣುಗೋಪಾಲ್ ನಡುವಣ ಆ ವಿಡಿಯೋ ಇದೀಗ ವೈರಲ್ ಆಗಿದೆ.

Viral video: ಕಾಂಗ್ರೆಸ್​ ಮುಖಂಡ ಶ್ರೀನಿವಾಸಪುರದ ಶ್ರೀನಿವಾಸ ಕೊಲೆ ಪ್ರಕರಣ: ರಾಜಿ ಪಂಚಾಯ್ತಿ ವಿಡಿಯೋ ವೈರಲ್
ಶ್ರೀನಿವಾಸಪುರದ ಶ್ರೀನಿವಾಸ ಕೊಲೆ ಪ್ರಕರಣ: ರಾಜಿ ಪಂಚಾಯ್ತಿ ವಿಡಿಯೋ ವೈರಲ್
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಸಾಧು ಶ್ರೀನಾಥ್​|

Updated on: Oct 25, 2023 | 12:14 PM

Share

ಕೋಲಾರ ಜಿಲ್ಲೆ ಶ್ರೀನಿವಾಸಪುರದ ಹೊಗಳಗೆರೆ ರಸ್ತೆಯಲ್ಲಿ ಕಾಂಗ್ರೆಸ್​ ಮುಖಂಡ ( Congress leader) ಎಂ. ಶ್ರೀನಿವಾಸ ಎಂಬಾತನನ್ನು ಮೊನ್ನೆ ಆಯುಧ ಪೂಜೆಯ ದಿನವೇ ಮಾರಕ ಅಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಪ್ರಕರಣದಲ್ಲಿ ಕೊಲೆಯಾದ ಶ್ರೀನಿವಾಸ ಮತ್ತು ಆರೋಪಿ ವೇಣುಗೋಪಾಲ್ ನಡುವಣ ಈ ಹಿಂದಿನ ವಿಡಿಯೋ ಇದೀಗ ವೈರಲ್ ಆಗಿದೆ (Viral video). 2018ರಲ್ಲಿ ನಡೆದಿದೆ ಎನ್ನಲಾದ ರಾಜಿ ಪಂಚಾಯ್ತಿಯ ವಿಡಿಯೋ ಅದಾಗಿದೆ. 2018ರಲ್ಲಿ ಕೌನ್ಸಿಲರ್ ಶ್ರೀನಿವಾಸ​ ಮತ್ತು ವೇಣುಗೋಪಾಲ​​ ಮಧ್ಯೆ ಗಲಾಟೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಶ್ರೀನಿವಾಸಪುರದ ಕಾಂಗ್ರೆಸ್ ಮುಖಂಡ ಕೆ.ಕೆ. ಮಂಜು ಮನೆಯಲ್ಲಿ ರಾಜಿ ಸಂಧಾನ (Mediation) ಏರ್ಪಡಿಸಲಾಗಿತ್ತು.

2018ರಲ್ಲೇ ಶ್ರೀನಿವಾಸನನ್ನು ಕೊಲೆ ಮಾಡಲು ಯತ್ನಿಸಿದ್ದ ವೇಣುಗೋಪಾಲ್. ಆ ವೇಳೆ ತಾನೇ ವಿಡಿಯೋ ರೆಕಾರ್ಡ್ ಮಾಡಿದ್ದಾಗಿ ವೇಣುಗೋಪಾಲ್ ಒಪ್ಪಿಕೊಂಡಿದ್ದ. ನಾನು ನಿನಗೆ ಹೊಡೆಯಬೇಕಿತ್ತು, ಆದರೆ ಆ ಏಟು ಬೇರೆಯವರಿಗೆ ಬಿತ್ತು. ಪರಸ್ಪರ ಚರ್ಚೆ ವೇಳೆ ಶ್ರೀನಿವಾಸ್​ಗೆ ನೇರವಾಗಿ ಹೇಳಿದ್ದ ವೇಣುಗೋಪಾಲ್. ಕೊಲೆಯಾದ ಶ್ರೀನಿವಾಸ, ಆರೋಪಿ ವೇಣುಗೋಪಾಲ್ ನಡುವಣ ಆ ವಿಡಿಯೋ ಇದೀಗ ವೈರಲ್ ಆಗಿದೆ. ಇದನ್ನೂ ಓದಿ: ಕೋಲಾರ ಕಾಂಗ್ರೆಸ್ ಮುಖಂಡ ಹತ್ಯೆ ಪ್ರಕರಣ; ಆರೋಪಿಗಳ ಮೇಲೆ ಫೈರಿಂಗ್​​​

ಶ್ರೀನಿವಾಸ್ ಕೊಲೆ ಪ್ರಕರಣದಲ್ಲಿ ವೇಣುಗೋಪಾಲ್ ಆರೋಪಿ A1 ಆಗಿದ್ದಾನೆ. ಸದ್ಯ ಮೂವರು ಆರೋಪಿಗಳು ಪೊಲೀಸರ ಗುಂಡೇಟು ತಿಂದು ಆಸ್ಪತ್ರೆಯಲ್ಲಿದ್ದಾರೆ. ಆರೋಪಿಗಳಾದ ವೇಣುಗೋಪಾಲ್, ಸಂತೋಷ್, ಮುನೀಂದ್ರಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಆರೋಪಿಗಳು ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋಲಾರಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ