AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರು ಯಾವ ಧರ್ಮ ಬೇಕಾದ್ರೂ ಸ್ವೀಕರಿಸಬಹುದು‌; ಅಂಬೇಡ್ಕರ್ ಉದಾಹರಿಸಿ ರಮೇಶ್ ಕುಮಾರ್ ಹೇಳಿಕೆ

Ramesh Kumar: ಯಾರಿಗೆ ಯಾವ ಮತದಲ್ಲಿ ಇಷ್ಟ ಇದ್ರೆ ಅದರಲ್ಲಿ ಇರಬಹುದು. ಹಿಂದುವಾಗಿ ಹುಟ್ಟುವುದು ತಪ್ಪಿಸಲು ಸಾಧ್ಯವಿಲ್ಲ. ಆದ್ರೆ ಹಿಂದುವಾಗಿ ಸಾಯಿಯುವುದಿಲ್ಲ ಎಂದು ಅಂಬೇಡ್ಕರ್ ಹೇಳಿದ್ರು ಎಂದು ರಮೇಶ್ ಕುಮಾರ್ ಹೇಳಿದ್ದಾರೆ.

ಯಾರು ಯಾವ ಧರ್ಮ ಬೇಕಾದ್ರೂ ಸ್ವೀಕರಿಸಬಹುದು‌; ಅಂಬೇಡ್ಕರ್ ಉದಾಹರಿಸಿ ರಮೇಶ್ ಕುಮಾರ್ ಹೇಳಿಕೆ
ರಮೇಶ್ ಕುಮಾರ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Oct 02, 2021 | 3:59 PM

Share

ಕೋಲಾರ: ಯಾರು ಯಾವ ಧರ್ಮ ಬೇಕಾದ್ರೂ ಸ್ವೀಕರಿಸಬಹುದು‌. ಹಿಂದೂ ಆಗಿ ಸಾಯಲ್ಲ ಎಂದು ಅಂಬೇಡ್ಕರ್ ಹೇಳಿದ್ದರು. ಮಹಾನ್ ವ್ಯಕ್ತಿಯನ್ನೇ ಮತಾಂತರದಿಂದ ತಪ್ಪಿಸಲು ಆಗಿಲ್ಲ. ಯಾರಿಗೆ ಯಾವ ಧರ್ಮ ಇಷ್ಟವಾಗತ್ತೋ ಅಲ್ಲಿ ಇರಬಹುದು ಎಂದು ಕೋಲಾರದಲ್ಲಿ ಮಾಜಿ ಸ್ಪೀಕರ್ ರಮೇಶ್‌ಕುಮಾರ್ ಹೇಳಿಕೆ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಮತಾಂತರ ನಿಷೇಧ ವಿಚಾರವಾಗಿ ಬಹಳಷ್ಟು ಚರ್ಚೆಯಾಗುತ್ತಿದೆ. ರಾಜಕೀಯ ನಾಯಕರು ಈ ಬಗ್ಗೆ ವಿವಿಧ ಹೇಳಿಕೆ ನೀಡುತ್ತಿದ್ದಾರೆ. ಈ ನಡುವೆ ಶನಿವಾರ, ರಮೇಶ್ ಕುಮಾರ್ ಹೀಗೆ ಪ್ರತಿಕ್ರಿಯೆ ನೀಡಿದ್ದಾರೆ.

ಯಾರಿಗೆ ಯಾವ ಮತದಲ್ಲಿ ಇಷ್ಟ ಇದ್ರೆ ಅದರಲ್ಲಿ ಇರಬಹುದು. ಹಿಂದುವಾಗಿ ಹುಟ್ಟುವುದು ತಪ್ಪಿಸಲು ಸಾಧ್ಯವಿಲ್ಲ. ಆದ್ರೆ ಹಿಂದುವಾಗಿ ಸಾಯಿಯುವುದಿಲ್ಲ ಎಂದು ಅಂಬೇಡ್ಕರ್ ಹೇಳಿದ್ರು. ಅದಕ್ಕೆ ಯಾರ ಬಳಿ ಉತ್ತರ ಇಲ್ಲ, ಅವರಿಗಿಂತ ಮಹಾನ್ ವ್ಯಕ್ತಿ ಬೇಕೆ ನಿಮಗೆ. ಬಡತನ, ಅಸ್ಪೃಶ್ಯತೆ ಮೊದಲು ನಿವಾರಣೆಯಾಗಲಿ ಎಂದು ಸ್ವಾಮಿ ವಿವೇಕಾನಂದ ಮದ್ರಾಸ್​ನಲ್ಲಿ ಹೇಳುತ್ತಾರೆ. ಮಾನವ ಧರ್ಮ‌ ದೊಡ್ಡದ್ದು ಎಂದು ಬಸವಣ್ಣ ಹೆಳಿದ್ರು. ಯಾರು ಯಾವ ದರ್ಮ ಬೇಕಾದ್ರು ಸ್ವೀಕರಿಸಬಹುದು‌ ಎಂದು ರಮೇಶ್ ಕುಮಾರ್ ಹೇಳಿದ್ದಾರೆ.

ಕೋಲಾರ ಶಾಸಕ ಶ್ರೀನಿವಾಸಗೌಡ ಕಾಂಗ್ರೇಸ್ ಸೇರ್ಪಡೆ ವಿಚಾರವಾಗಿ ಕೋಲಾರದಲ್ಲಿ ರಮೇಶ್ ಕುಮಾರ್ ಮಾತನಾಡಿದ್ದಾರೆ. ಕಾಂಗ್ರೆಸ್ ಒಂದು ದೊಡ್ಡ ಸಂಸ್ಥೆ. ಅದನ್ನು ಸೇರಬೇಕು ಎಂದು ತೀರ್ಮಾನ‌ ಮಾಡಿದ್ರೆ ಸೇರ್ತಾರೆ. ಅವರು ಗ್ರಾಮ‌ ಪಂಚಾಯತಿನಿಂದ ಜನರ‌ ಮಧ್ಯೆ ಆಯ್ಕೆಯಾಗಿ ಬಂದವರು. ಅವರೇನು ಆಕಾಶದಿಂದ ಉದುರಿ‌ಬಂದವರಲ್ಲ. ಗಾಳಿಯಲ್ಲಿ ತೇಲಿ ಬಂದವರಲ್ಲ.

ಅವರಿಗೆ ಅವರದೇ ಆದ ಶಕ್ತಿ ಸಾಮರ್ಥ್ಯ ಇದೆ. ರಾಷ್ಟ್ರೀಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಹಕಾರ ಕ್ಷೇತ್ರದಲ್ಲಿ, ಸಚಿವರಾಗಿ ಕೆಲಸ‌ ಮಾಡಿದ್ದಾರೆ. ಇಷ್ಟು ಹಳೆ ಮನುಷ್ಯ, ಅನುಭವ ಇರುವವರು ಕಾಂಗ್ರೆಸ್​ಗೆ ಬಂದ್ರೆ ಶಕ್ತಿ ಬರಲಿದೆ. ಅವರು ಸೆಕ್ಯೂಲರ್ ಆಗಿ ಕೆಲಸ‌ ಮಾಡಬೇಕು ಎಂದುಕೊಂಡಿದ್ದಾರೆ. ಸಂವಿಧಾನದಲ್ಲಿ ಅವಕಾಶವಿದೆ. ಸ್ವತಂತ್ರವಾಗಿ ಅವರು ನಾಯಕರು. ಅವರಿಗೆ ಯಾರ ಕೃಪ ಕಟಾಕ್ಷ ಬೇಕಾಗಿಲ್ಲ ಎಂದು ತಿಳಿಸಿದ್ದಾರೆ. ಈ ವೇಳೆ, ಶಾಸಕರಾದ ರಮೇಶ್‌ಕುಮಾರ್, ಕೃಷ್ಣ ಭೈರೇಗೌಡ ಹಾಗೂ ಶ್ರೀನಿವಾಸಗೌಡರು ಕೆರೆಗೆ ಬಾಗಿನ ಅರ್ಪಣೆ ಮಾಡಿದ್ದಾರೆ. ಕೋಲಾರಮ್ಮ ಕೆರೆಗೆ ಬಾಗಿನ ಅರ್ಪಿಸಿದ್ದಾರೆ.

ಇದನ್ನೂ ಓದಿ: ಉಪಚುನಾವಣೆಯಲ್ಲಿ ಜೆಡಿಎಸ್​ನಿಂದ ಮುಸ್ಲಿಂ ಅಭ್ಯರ್ಥಿ ವಿಚಾರ; ಸಿದ್ದರಾಮಯ್ಯ, ಕುಮಾರಸ್ವಾಮಿ ವಾಕ್ಸಮರ

ಇದನ್ನೂ ಓದಿ: ಸದಾನಂದಗೌಡ ವಿರುದ್ಧ ಮಾತಿನ ಚಾಟಿ ಬೀಸಿದ ಕಾಂಗ್ರೆಸ್

Published On - 3:56 pm, Sat, 2 October 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ