AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾರು ಯಾವ ಧರ್ಮ ಬೇಕಾದ್ರೂ ಸ್ವೀಕರಿಸಬಹುದು‌; ಅಂಬೇಡ್ಕರ್ ಉದಾಹರಿಸಿ ರಮೇಶ್ ಕುಮಾರ್ ಹೇಳಿಕೆ

Ramesh Kumar: ಯಾರಿಗೆ ಯಾವ ಮತದಲ್ಲಿ ಇಷ್ಟ ಇದ್ರೆ ಅದರಲ್ಲಿ ಇರಬಹುದು. ಹಿಂದುವಾಗಿ ಹುಟ್ಟುವುದು ತಪ್ಪಿಸಲು ಸಾಧ್ಯವಿಲ್ಲ. ಆದ್ರೆ ಹಿಂದುವಾಗಿ ಸಾಯಿಯುವುದಿಲ್ಲ ಎಂದು ಅಂಬೇಡ್ಕರ್ ಹೇಳಿದ್ರು ಎಂದು ರಮೇಶ್ ಕುಮಾರ್ ಹೇಳಿದ್ದಾರೆ.

ಯಾರು ಯಾವ ಧರ್ಮ ಬೇಕಾದ್ರೂ ಸ್ವೀಕರಿಸಬಹುದು‌; ಅಂಬೇಡ್ಕರ್ ಉದಾಹರಿಸಿ ರಮೇಶ್ ಕುಮಾರ್ ಹೇಳಿಕೆ
ರಮೇಶ್ ಕುಮಾರ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Oct 02, 2021 | 3:59 PM

Share

ಕೋಲಾರ: ಯಾರು ಯಾವ ಧರ್ಮ ಬೇಕಾದ್ರೂ ಸ್ವೀಕರಿಸಬಹುದು‌. ಹಿಂದೂ ಆಗಿ ಸಾಯಲ್ಲ ಎಂದು ಅಂಬೇಡ್ಕರ್ ಹೇಳಿದ್ದರು. ಮಹಾನ್ ವ್ಯಕ್ತಿಯನ್ನೇ ಮತಾಂತರದಿಂದ ತಪ್ಪಿಸಲು ಆಗಿಲ್ಲ. ಯಾರಿಗೆ ಯಾವ ಧರ್ಮ ಇಷ್ಟವಾಗತ್ತೋ ಅಲ್ಲಿ ಇರಬಹುದು ಎಂದು ಕೋಲಾರದಲ್ಲಿ ಮಾಜಿ ಸ್ಪೀಕರ್ ರಮೇಶ್‌ಕುಮಾರ್ ಹೇಳಿಕೆ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಮತಾಂತರ ನಿಷೇಧ ವಿಚಾರವಾಗಿ ಬಹಳಷ್ಟು ಚರ್ಚೆಯಾಗುತ್ತಿದೆ. ರಾಜಕೀಯ ನಾಯಕರು ಈ ಬಗ್ಗೆ ವಿವಿಧ ಹೇಳಿಕೆ ನೀಡುತ್ತಿದ್ದಾರೆ. ಈ ನಡುವೆ ಶನಿವಾರ, ರಮೇಶ್ ಕುಮಾರ್ ಹೀಗೆ ಪ್ರತಿಕ್ರಿಯೆ ನೀಡಿದ್ದಾರೆ.

ಯಾರಿಗೆ ಯಾವ ಮತದಲ್ಲಿ ಇಷ್ಟ ಇದ್ರೆ ಅದರಲ್ಲಿ ಇರಬಹುದು. ಹಿಂದುವಾಗಿ ಹುಟ್ಟುವುದು ತಪ್ಪಿಸಲು ಸಾಧ್ಯವಿಲ್ಲ. ಆದ್ರೆ ಹಿಂದುವಾಗಿ ಸಾಯಿಯುವುದಿಲ್ಲ ಎಂದು ಅಂಬೇಡ್ಕರ್ ಹೇಳಿದ್ರು. ಅದಕ್ಕೆ ಯಾರ ಬಳಿ ಉತ್ತರ ಇಲ್ಲ, ಅವರಿಗಿಂತ ಮಹಾನ್ ವ್ಯಕ್ತಿ ಬೇಕೆ ನಿಮಗೆ. ಬಡತನ, ಅಸ್ಪೃಶ್ಯತೆ ಮೊದಲು ನಿವಾರಣೆಯಾಗಲಿ ಎಂದು ಸ್ವಾಮಿ ವಿವೇಕಾನಂದ ಮದ್ರಾಸ್​ನಲ್ಲಿ ಹೇಳುತ್ತಾರೆ. ಮಾನವ ಧರ್ಮ‌ ದೊಡ್ಡದ್ದು ಎಂದು ಬಸವಣ್ಣ ಹೆಳಿದ್ರು. ಯಾರು ಯಾವ ದರ್ಮ ಬೇಕಾದ್ರು ಸ್ವೀಕರಿಸಬಹುದು‌ ಎಂದು ರಮೇಶ್ ಕುಮಾರ್ ಹೇಳಿದ್ದಾರೆ.

ಕೋಲಾರ ಶಾಸಕ ಶ್ರೀನಿವಾಸಗೌಡ ಕಾಂಗ್ರೇಸ್ ಸೇರ್ಪಡೆ ವಿಚಾರವಾಗಿ ಕೋಲಾರದಲ್ಲಿ ರಮೇಶ್ ಕುಮಾರ್ ಮಾತನಾಡಿದ್ದಾರೆ. ಕಾಂಗ್ರೆಸ್ ಒಂದು ದೊಡ್ಡ ಸಂಸ್ಥೆ. ಅದನ್ನು ಸೇರಬೇಕು ಎಂದು ತೀರ್ಮಾನ‌ ಮಾಡಿದ್ರೆ ಸೇರ್ತಾರೆ. ಅವರು ಗ್ರಾಮ‌ ಪಂಚಾಯತಿನಿಂದ ಜನರ‌ ಮಧ್ಯೆ ಆಯ್ಕೆಯಾಗಿ ಬಂದವರು. ಅವರೇನು ಆಕಾಶದಿಂದ ಉದುರಿ‌ಬಂದವರಲ್ಲ. ಗಾಳಿಯಲ್ಲಿ ತೇಲಿ ಬಂದವರಲ್ಲ.

ಅವರಿಗೆ ಅವರದೇ ಆದ ಶಕ್ತಿ ಸಾಮರ್ಥ್ಯ ಇದೆ. ರಾಷ್ಟ್ರೀಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಹಕಾರ ಕ್ಷೇತ್ರದಲ್ಲಿ, ಸಚಿವರಾಗಿ ಕೆಲಸ‌ ಮಾಡಿದ್ದಾರೆ. ಇಷ್ಟು ಹಳೆ ಮನುಷ್ಯ, ಅನುಭವ ಇರುವವರು ಕಾಂಗ್ರೆಸ್​ಗೆ ಬಂದ್ರೆ ಶಕ್ತಿ ಬರಲಿದೆ. ಅವರು ಸೆಕ್ಯೂಲರ್ ಆಗಿ ಕೆಲಸ‌ ಮಾಡಬೇಕು ಎಂದುಕೊಂಡಿದ್ದಾರೆ. ಸಂವಿಧಾನದಲ್ಲಿ ಅವಕಾಶವಿದೆ. ಸ್ವತಂತ್ರವಾಗಿ ಅವರು ನಾಯಕರು. ಅವರಿಗೆ ಯಾರ ಕೃಪ ಕಟಾಕ್ಷ ಬೇಕಾಗಿಲ್ಲ ಎಂದು ತಿಳಿಸಿದ್ದಾರೆ. ಈ ವೇಳೆ, ಶಾಸಕರಾದ ರಮೇಶ್‌ಕುಮಾರ್, ಕೃಷ್ಣ ಭೈರೇಗೌಡ ಹಾಗೂ ಶ್ರೀನಿವಾಸಗೌಡರು ಕೆರೆಗೆ ಬಾಗಿನ ಅರ್ಪಣೆ ಮಾಡಿದ್ದಾರೆ. ಕೋಲಾರಮ್ಮ ಕೆರೆಗೆ ಬಾಗಿನ ಅರ್ಪಿಸಿದ್ದಾರೆ.

ಇದನ್ನೂ ಓದಿ: ಉಪಚುನಾವಣೆಯಲ್ಲಿ ಜೆಡಿಎಸ್​ನಿಂದ ಮುಸ್ಲಿಂ ಅಭ್ಯರ್ಥಿ ವಿಚಾರ; ಸಿದ್ದರಾಮಯ್ಯ, ಕುಮಾರಸ್ವಾಮಿ ವಾಕ್ಸಮರ

ಇದನ್ನೂ ಓದಿ: ಸದಾನಂದಗೌಡ ವಿರುದ್ಧ ಮಾತಿನ ಚಾಟಿ ಬೀಸಿದ ಕಾಂಗ್ರೆಸ್

Published On - 3:56 pm, Sat, 2 October 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ