AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗೆ ಓಡಾಡಲು ರಸ್ತೆ ಮಾಡಿಕೊಡಿ ಎಂದು ಎಳೆ ಮಗುವಿನ ಜೊತೆ ಧರಣಿ ಕುಳಿತ ದಂಪತಿ

ಗ್ರಾಮದ ಕೆಲ ಬಲಾಢ್ಯರು, ದಂಪತಿ ಮನೆಗೆ ಹೋಗುವ ರಸ್ತೆಯನ್ನು ಒತ್ತುವರಿ ಮಾಡಿಕೊಂಡಿದ್ದಾರಂತೆ. ಗ್ರಾಮ ಲೆಕ್ಕಾಧಿಕಾರಿ ಅರುಣ್, 2 ತಿಂಗಳಿನಿಂದ ತೆರವು ಮಾಡುತ್ತೇನೆ ಎಂದು ಕಾಲಹರಣ ಮಾಡುತ್ತಿದ್ದಾರೆ.

ಮನೆಗೆ ಓಡಾಡಲು ರಸ್ತೆ ಮಾಡಿಕೊಡಿ ಎಂದು ಎಳೆ ಮಗುವಿನ ಜೊತೆ ಧರಣಿ ಕುಳಿತ ದಂಪತಿ
ಕೋಲಾರ ತಾಲೂಕು ಕಚೇರಿಯ ಮುಂಭಾಗ ದಂಪತಿ ಧರಣಿ
TV9 Web
| Edited By: |

Updated on:Jul 22, 2022 | 9:28 PM

Share

ಕೋಲಾರ: ಮನೆಗೆ ರಸ್ತೆ ಇಲ್ಲ ಎಂದು ದಂಪತಿ ಪ್ರತಿಭಟನೆ ನಡೆಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ದಂಪತಿ ಕೋಲಾರ ತಾಲೂಕು ಕಚೇರಿಯ ಮುಂಭಾಗ ಕುಳಿತು ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ. ಒಂದೂವರೆ ತಿಂಗಳ ಮಗು ಜೊತೆ ರಂಜಿತ್ ಹಾಗೂ ಲಾವಣ್ಯ ದಂಪತಿ ಧರಣಿಗೆ ಕುಳಿತಿದ್ದಾರೆ. ಗ್ರಾಮದ ಕೆಲ ಬಲಾಢ್ಯರು, ದಂಪತಿ ಮನೆಗೆ ಹೋಗುವ ರಸ್ತೆಯನ್ನು ಒತ್ತುವರಿ ಮಾಡಿಕೊಂಡಿದ್ದಾರಂತೆ. ಗ್ರಾಮ ಲೆಕ್ಕಾಧಿಕಾರಿ ಅರುಣ್, 2 ತಿಂಗಳಿನಿಂದ ತೆರವು ಮಾಡುತ್ತೇನೆ ಎಂದು ಕಾಲಹರಣ ಮಾಡುತ್ತಿದ್ದಾರೆ. ಹೀಗಾಗಿ ಕೋಲಾರ ತಾಲೂಕಿನ ಬೆಳಮಾರನಹಳ್ಳಿ ಗ್ರಾಮದ ದಂಪತಿ ತಮಗೆ ನ್ಯಾಯ ಕೊಡಿಸುವಂತೆ ಪ್ರತಿಭಟನೆ ನಡೆಸಿದ್ದಾರೆ.

ಬೆಳಮಾರನಹಳ್ಳಿ‌ ಗ್ರಾಮದ ದಂಪತಿಯಾದ ರಂಜಿತ್ ಲಾವಣ್ಯ ತಾಲೂಕು ಕಚೇರಿಯಲ್ಲಿ ಇಂದು ಎರಡೂವರೆ ತಿಂಗಳ ಹಸುಗೂಸಿನೊಂದಿಗೆ ಬಾಣಂತಿ ಲಾವಣ್ಯ ಪ್ರತಿಭಟನೆ ನಡೆಸಿದ್ದಾರೆ ಇನ್ನು ಗ್ರಾಮದಲ್ಲಿ ಕೆಲ ಬಲಾಡ್ಯರು ನನ್ನ ಮನೆಗೆ ಹೋಗುವ ರಸ್ತೆಯನ್ನು ಕಳೆದ ಒಂದು ವರ್ಷದಿಂದ ಒತ್ತುವರಿ ಮಾಡಿಕೊಂಡಿದ್ದು ಓಡಾಡಲು ರಸ್ತೆ ಇಲ್ಲದಂತಾಗಿತ್ತು ಈ ಸಂಬಂಧ ಪಂಚಾಯಿತಿಗೆ ಮನವಿಯನ್ನು ನೀಡಿ ಮನೆಗೆ ಹೋಗುವ ರಸ್ತೆಯನ್ನ ಒತ್ತುವರಿ ದಾರರಿಂದ ತೆರವು ಮಾಡಿಕೊಡಬೇಕು ಎಂದು ಕೋರಲಾಗಿತ್ತು. ಆದ್ರೆ ಗ್ರಾಮ ಲೆಕ್ಕಾಧಿಕಾರಿ ಒತ್ತುವರಿ ತೆರವು ಮಾಡುತ್ತೇವೆ ಎಂದು ಕಾಲಹರಣ ಮಾಡುತ್ತಿದ್ದರು, ಇಂದು ತಹಶೀಲ್ದಾರ್, ರಾಜಸ್ವ ನಿರೀಕ್ಷಕರು, ಹಾಗೂ ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿ ಒತ್ತುವರಿ ದಾರರಿಂದ ರಸ್ತೆಯನ್ನು ತೆರವು ಗೊಳಿಸುತ್ತೇವೆ, ರಸ್ತೆ ತೆರವಿಗೆ ಜೆಸಿಬಿ ಯಂತ್ರಕ್ಕೆ ಹತ್ತುಸಾವಿರ ನೀಡಿದರೆ ಮಾತ್ರ ರಸ್ತೆ ತೆರವು ಗೊಳಿಸ್ತೇವೆ ಎಂದು ಹಣಕ್ಕೆ ಬೇಡಿಕೆಯನ್ನ ಇಟ್ಟಿದ್ದರು,

ಆದ್ರೆ ಆ ಹತ್ತು ಸಾವಿರ ಹಣವನ್ನ ಸಹ ನೀಡಿದ್ದರೂ ರಸ್ತೆ ತೆರವುಗೊಳಿಸಿರುವುದಿಲ್ಲ, ನಾವು ಇಂದು ಬೆಳಗ್ಗೆ ಇಂದ ತಾಲೂಕು ಕಚೇರಿಯಲ್ಲಿ ಎರಡು ತಿಂಗಳ ಹಸುಗೂಸಿನೊಂದಿಗೆ ಧರಣಿ ಕುಳಿತಿದ್ದರೂ ಯಾವೊಬ್ಬ ಅಧಿಕಾರಿ ಈ ಬಗ್ಗೆ ಸ್ಪಂದಿಸಿಲ್ಲ, ತಹಶೀಲ್ದಾರ್ ಅವರಿಗೂ ಸಹ ಸುಮಾರು ಬಾರಿ ದೂರವಾಣಿ ಮಾಡಿದ್ದರೂ ಸ್ವೀಕರಿಸಿಲ್ಲ, ನಮಗೆ ನಮ್ಮ ಮನೆಗೆ ಹೋಗಲು ದಾರಿ ಬೇಕು ಎಂದು ದಂಪತಿಗಳು ಪಟ್ಟು ಹಿಡಿದು ಧರಣಿ ನಡೆಸಿದ್ದಾರೆ. ಜೊತೆಗೆ ಗ್ರಾಮ ಪಂಚಾಯತಿ ಪಿಡಿಓ ಕೂಡಾ ಇಪ್ಪತ್ತು ಸಾವಿರ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು ಅನ್ನೋದು ತಿಳಿದು‌ ಬಂದಿದೆ.

Published On - 8:46 pm, Fri, 22 July 22

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ