AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ವಾಮಾಚಾರಕ್ಕಾಗಿ ಸಮಾಧಿ ಅಗೆದು ಮಗುವಿನ ಶವ ಹೊರತೆಗೆದ ದುಷ್ಕರ್ಮಿಗಳು

ಸರಿಯಾಗಿ 20 ದಿನಗಳ ಹಿಂದೆ ಕೋಲಾರ ಪಟ್ಟಣದಲ್ಲಿ ಮೂರೂವರೆ ವರ್ಷದ ಮಗು ಆಯೇಷಾ ಅಂಜುಂ ಜೊತೆ ತಾಯಿ ಹಮೀದಾ ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಹೆಬ್ಬಟ ಕ್ರಾಸ್​​​ನ ಖಬರಸ್ತಾನದಲ್ಲಿ ಹಮೀದಾ ಮತ್ತು ಆಯೇಷಾ ಅಂಜುಂ ಶವಸಂಸ್ಕಾರ ಮಾಡಲಾಗಿತ್ತು. ಆದರೆ ನ.19ರಂದು ಯಾರೋ ದುಷ್ಕರ್ಮಿಗಳು ಮಗು ಆಯೇಷಾ ಅಂಜುಂ ಶವ ಹೊರತೆಗೆದು ಅದರ ಬಟ್ಟೆ, ಕೂದಲು ತೆಗೆದುಕೊಂಡಿರುವ ಆರೋಪ ಕೇಳಿಬಂದಿದೆ. ಮುಂದೇನಾಯ್ತು ಇಲ್ಲಿದೆ ಓದಿ..

ಕೋಲಾರ: ವಾಮಾಚಾರಕ್ಕಾಗಿ ಸಮಾಧಿ ಅಗೆದು ಮಗುವಿನ ಶವ ಹೊರತೆಗೆದ ದುಷ್ಕರ್ಮಿಗಳು
ಪೊಲೀಸರಿಗೆ ದೂರು ನೀಡಿದ ಪೋಷಕರು
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Nov 27, 2023 | 7:32 PM

Share

ಕೋಲಾರ ನ.27: ವಾಮಾಚಾರಕ್ಕಾಗಿ (Black Magic) ಸಮಾಧಿ ಅಗೆದು ಮಗುವಿನ ಶವ ಹೊರತೆಗೆದಿರುವ ಘಟನೆ ಶ್ರೀನಿವಾಸಪುರ ಪಟ್ಟಣದ ಹೆಬ್ಬಟಕ್ರಾಸ್​ನಲ್ಲಿ ನಡೆದಿದೆ. 20 ದಿನಗಳ ಹಿಂದೆ ಕೋಲಾರ ಪಟ್ಟಣದಲ್ಲಿ ಮೂರೂವರೆ ವರ್ಷದ ಮಗು ಆಯೇಷಾ ಅಂಜುಂ ಜೊತೆ ತಾಯಿ ಹಮೀದಾ ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಹೆಬ್ಬಟ ಕ್ರಾಸ್​​​ನ ಖಬರಸ್ತಾನದಲ್ಲಿ ಹಮೀದಾ ಮತ್ತು ಆಯೇಷಾ ಅಂಜುಂ ಶವಸಂಸ್ಕಾರ ಮಾಡಲಾಗಿತ್ತು. ಆದರೆ ನ.19ರಂದು ಯಾರೋ ದುಷ್ಕರ್ಮಿಗಳು ಮಗು ಆಯೇಷಾ ಅಂಜುಂ ಶವ (Body) ಹೊರತೆಗೆದು ಅದರ ಬಟ್ಟೆ, ಕೂದಲು ತೆಗೆದುಕೊಂಡಿರುವ ಆರೋಪ ಕೇಳಿಬಂದಿದೆ. ಅಂತ್ಯಸಂಸ್ಕಾರ ವೇಳೆ ಮಗುವಿಗೆ ಹಾಕಿದ್ದ ಬಟ್ಟೆ ಸಮಾಧಿಯ ಪಕ್ಕದಲ್ಲಿ ಪತ್ತೆಯಾಗಿದೆ.

ವರದಕ್ಷಿಣೆ ಕಿರುಕುಳ ತಾಳಲಾರದೆ ಮಗು ಆಯೇಷಾ ಅಂಜುಂ ಜೊತೆ ತಾಯಿ ಹಮೀದಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತಿ ಶೋಯಬ್ ವಿರುದ್ಧ ಹಮೀದಾ ಪೋಷಕರು ಆರೋಪ ಮಾಡಿದ್ದರು. ಇದೀಗ ಪತಿ ಶೋಯಬ್ ಸೂಚನೆಯಂತೆ ಶ್ರೀರಾಮ ಮತ್ತು ನಾರಾಯಣಸ್ವಾಮಿ ಎಂಬುವರು ಮೃತ ಆಯೇಷಾ ಅಂಜುಂ ಶವ ಹೊರತೆಗೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ ನ.19ರ ಬೆಳಗ್ಗೆ ಇಬ್ಬರು ಸ್ಮಶಾನಕ್ಕೆ ತೆರಳಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಮ್ಮ ಧಾರ್ಮಿಕ ಭಾವನಕ್ಕೆ ಧಕ್ಕೆಯುಂಟಾಗಿದೆ ಎಂದು ಹಮೀದಾ ಪೋಷಕರು ಶ್ರೀನಿವಾಸಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ