AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ವಾಮಾಚಾರಕ್ಕಾಗಿ ಸಮಾಧಿ ಅಗೆದು ಮಗುವಿನ ಶವ ಹೊರತೆಗೆದ ದುಷ್ಕರ್ಮಿಗಳು

ಸರಿಯಾಗಿ 20 ದಿನಗಳ ಹಿಂದೆ ಕೋಲಾರ ಪಟ್ಟಣದಲ್ಲಿ ಮೂರೂವರೆ ವರ್ಷದ ಮಗು ಆಯೇಷಾ ಅಂಜುಂ ಜೊತೆ ತಾಯಿ ಹಮೀದಾ ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಹೆಬ್ಬಟ ಕ್ರಾಸ್​​​ನ ಖಬರಸ್ತಾನದಲ್ಲಿ ಹಮೀದಾ ಮತ್ತು ಆಯೇಷಾ ಅಂಜುಂ ಶವಸಂಸ್ಕಾರ ಮಾಡಲಾಗಿತ್ತು. ಆದರೆ ನ.19ರಂದು ಯಾರೋ ದುಷ್ಕರ್ಮಿಗಳು ಮಗು ಆಯೇಷಾ ಅಂಜುಂ ಶವ ಹೊರತೆಗೆದು ಅದರ ಬಟ್ಟೆ, ಕೂದಲು ತೆಗೆದುಕೊಂಡಿರುವ ಆರೋಪ ಕೇಳಿಬಂದಿದೆ. ಮುಂದೇನಾಯ್ತು ಇಲ್ಲಿದೆ ಓದಿ..

ಕೋಲಾರ: ವಾಮಾಚಾರಕ್ಕಾಗಿ ಸಮಾಧಿ ಅಗೆದು ಮಗುವಿನ ಶವ ಹೊರತೆಗೆದ ದುಷ್ಕರ್ಮಿಗಳು
ಪೊಲೀಸರಿಗೆ ದೂರು ನೀಡಿದ ಪೋಷಕರು
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Nov 27, 2023 | 7:32 PM

Share

ಕೋಲಾರ ನ.27: ವಾಮಾಚಾರಕ್ಕಾಗಿ (Black Magic) ಸಮಾಧಿ ಅಗೆದು ಮಗುವಿನ ಶವ ಹೊರತೆಗೆದಿರುವ ಘಟನೆ ಶ್ರೀನಿವಾಸಪುರ ಪಟ್ಟಣದ ಹೆಬ್ಬಟಕ್ರಾಸ್​ನಲ್ಲಿ ನಡೆದಿದೆ. 20 ದಿನಗಳ ಹಿಂದೆ ಕೋಲಾರ ಪಟ್ಟಣದಲ್ಲಿ ಮೂರೂವರೆ ವರ್ಷದ ಮಗು ಆಯೇಷಾ ಅಂಜುಂ ಜೊತೆ ತಾಯಿ ಹಮೀದಾ ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಹೆಬ್ಬಟ ಕ್ರಾಸ್​​​ನ ಖಬರಸ್ತಾನದಲ್ಲಿ ಹಮೀದಾ ಮತ್ತು ಆಯೇಷಾ ಅಂಜುಂ ಶವಸಂಸ್ಕಾರ ಮಾಡಲಾಗಿತ್ತು. ಆದರೆ ನ.19ರಂದು ಯಾರೋ ದುಷ್ಕರ್ಮಿಗಳು ಮಗು ಆಯೇಷಾ ಅಂಜುಂ ಶವ (Body) ಹೊರತೆಗೆದು ಅದರ ಬಟ್ಟೆ, ಕೂದಲು ತೆಗೆದುಕೊಂಡಿರುವ ಆರೋಪ ಕೇಳಿಬಂದಿದೆ. ಅಂತ್ಯಸಂಸ್ಕಾರ ವೇಳೆ ಮಗುವಿಗೆ ಹಾಕಿದ್ದ ಬಟ್ಟೆ ಸಮಾಧಿಯ ಪಕ್ಕದಲ್ಲಿ ಪತ್ತೆಯಾಗಿದೆ.

ವರದಕ್ಷಿಣೆ ಕಿರುಕುಳ ತಾಳಲಾರದೆ ಮಗು ಆಯೇಷಾ ಅಂಜುಂ ಜೊತೆ ತಾಯಿ ಹಮೀದಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತಿ ಶೋಯಬ್ ವಿರುದ್ಧ ಹಮೀದಾ ಪೋಷಕರು ಆರೋಪ ಮಾಡಿದ್ದರು. ಇದೀಗ ಪತಿ ಶೋಯಬ್ ಸೂಚನೆಯಂತೆ ಶ್ರೀರಾಮ ಮತ್ತು ನಾರಾಯಣಸ್ವಾಮಿ ಎಂಬುವರು ಮೃತ ಆಯೇಷಾ ಅಂಜುಂ ಶವ ಹೊರತೆಗೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ ನ.19ರ ಬೆಳಗ್ಗೆ ಇಬ್ಬರು ಸ್ಮಶಾನಕ್ಕೆ ತೆರಳಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಮ್ಮ ಧಾರ್ಮಿಕ ಭಾವನಕ್ಕೆ ಧಕ್ಕೆಯುಂಟಾಗಿದೆ ಎಂದು ಹಮೀದಾ ಪೋಷಕರು ಶ್ರೀನಿವಾಸಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?