AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyber Fraud: ಕೆಜಿಎಫ್ -ಅನಾಮಧೇಯ ವ್ಯಕ್ತಿ ಕಳಿಸಿದ ಆಮಿಷದ ಲಿಂಕ್ ಒತ್ತಿ, ಜಸ್ಟ್ 15 ಲಕ್ಷ ರೂ ಕಳೆದುಕೊಂಡ!

KGF: ಅನಾಮಧೇಯ ವ್ಯಕ್ತಿ ಹೇಳಿದ್ದನ್ನು ನಂಬಿದ ವ್ಯಕ್ತಿಯೊಬ್ಬರು ತಮ್ಮ ಮೊಬೈಲ್‌ಗೆ ಬಂದ ಲಿಂಕ್​ ಅನ್ನು ಒತ್ತಿದ ಪರಿಣಾಮ ತಮ್ಮ ಬ್ಯಾಂಕ್ ಖಾತೆಯಿಂದ 15 ,27,400 ರೂ ಕಳೆದುಕೊಂಡಿರುವ ಘಟನೆ ಕೋಲಾರದ ಕೆಜಿಎಫ್ ನಗರದಲ್ಲಿ ನಡೆದಿದೆ.

Cyber Fraud: ಕೆಜಿಎಫ್ -ಅನಾಮಧೇಯ ವ್ಯಕ್ತಿ ಕಳಿಸಿದ ಆಮಿಷದ ಲಿಂಕ್ ಒತ್ತಿ, ಜಸ್ಟ್ 15 ಲಕ್ಷ ರೂ ಕಳೆದುಕೊಂಡ!
ಅನಾಮಧೇಯ ವ್ಯಕ್ತಿ ಕಳಿಸಿದ ಆಮಿಷದ ಲಿಂಕ್ ಒತ್ತಿ, ಜಸ್ಟ್ 15 ಲಕ್ಷ ರೂ ಕಳೆದುಕೊಂಡರು
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ಸಾಧು ಶ್ರೀನಾಥ್​|

Updated on: Aug 04, 2023 | 2:46 PM

Share

ಕೋಲಾರ, ಆಗಸ್ಟ್​ 4: ಫೋನ್ ಪೇ ಲಿಂಕ್ ಒತ್ತಿದರೆ ತಿಂಗಳಿಗೆ ೫೦ ಸಾವಿರ ರೂ ಆದಾಯ ಬರುವುದಾಗಿ ಅನಾಮಧೇಯ ವ್ಯಕ್ತಿ (Anonymous person) ಹೇಳಿದ್ದನ್ನು ನಂಬಿದ ವ್ಯಕ್ತಿಯೊಬ್ಬರು ತಮ್ಮ ಮೊಬೈಲ್‌ಗೆ ಬಂದ ಲಿಂಕ್​ ಅನ್ನು ಒತ್ತಿದ ಪರಿಣಾಮ ತಮ್ಮ ಬ್ಯಾಂಕ್ ಖಾತೆಯಿಂದ 15 ,27,400 ರೂ ಕಳೆದುಕೊಂಡಿರುವ ಘಟನೆ (Cyber Fraud) ಕೋಲಾರದ ಕೆಜಿಎಫ್ (KGF) ನಗರದಲ್ಲಿ ನಡೆದಿದೆ.

ಕೆಜಿಎಫ್‌ನ ಸುಭಾಷ್ ನಗರದ ಮುರುಗನ್ ಮೊಬೈಲ್‌ಗೆ 926353322 ಸಂಖ್ಯೆಯ ಮೊಬೈಲ್‌ನಿಂದ ಕರೆ ಮಾಡಿದ ಅನಾಮಧೇಯ ವ್ಯಕ್ತಿ ಮೊದಲಿಗೆ ತಾನು ಟಿಜೆಸಿ ಕಾರ್ಪೋರೇಟ್ ಕಂಪನಿಯ ರೀಜನಲ್ ಮ್ಯಾನೇಜರ್ ಎಂದು ಪರಿಚಯ ಮಾಡಿಕೊಂಡಿದ್ದಾನೆ.

ನಂತರ ನಿಮಗೆ ತಿಂಗಳಿಗೆ ೫೦ ಸಾವಿರ ರೂ ಆದಾಯ ಬರುವಂತೆ ಮಾಡುತ್ತೇವೆ. ನೀವು ಜಸ್ಟ್​ ಈ ಫೋನ್ ಪೇ ಲಿಂಕ್ ಮೂಲಕ ಲಾಗಿನ್​ ಆಗಿ ಎಂದು ಲಿಂಕ್​ ಕಳುಸಿದ್ದಾನೆ. ಹಿಂದೆಮುಂದೆ ನೋಡದೆ, ಯೋಚಿಸದೆ ಮರುಳಾದ ಮುರುಗನ್ ಆ ಲಿಂಕ್​​ ಅನ್ನು ಓಪನ್ ಮಾಡಿಬಿಟ್ಟಿದ್ದಾರೆ.

ಇದನ್ನೂ ಓದಿ: PSI ನೇಮಕಾತಿ ಅಕ್ರಮ ಪ್ರಕರಣ: ಮರು ಪರೀಕ್ಷೆಯೇ ಸೂಕ್ತ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್

ಆ ಕಡೆಯಿಂದ ಅನಾಮಧೇಯ ವ್ಯಕ್ತಿ ಆ ಘಳಿಗೆಗಾಗಿಯೇ ಕಾಯುತ್ತಿದ್ದವನಂತೆ ಆ ಸಂದರ್ಭವನ್ನೇ ಬಳಸಿಕೊಂಡು ಫೋನ್ ಪೇ ಮುಖಾಂತರ ಹಂತ ಹಂತವಾಗಿ ಒಂದು ತಿಂಗಳಿನಿಂದ ೧೫,೨೭,೪೦೦ ರೂಗಳನ್ನು ತನ್ನ ಬ್ಯಾಂಕ್ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ!

ಕೊನೆಗೂ ಪ್ರಕರಣವು ಕೆಜಿಎಫ್ ಸೈಬರ್ ಕ್ರೈಂ ಪೊಲೀಸರಿಗೆ ತಲುಪಿದ್ದು ಅವರೀಗ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕೆಜಿಎಫ್‌ನ ಸಿಇಎನ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮುಂದುವರಿದಿದೆ.

ಕೆಜಿಎಫ್ ವರದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ