AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyber Fraud: ಕೆಜಿಎಫ್ -ಅನಾಮಧೇಯ ವ್ಯಕ್ತಿ ಕಳಿಸಿದ ಆಮಿಷದ ಲಿಂಕ್ ಒತ್ತಿ, ಜಸ್ಟ್ 15 ಲಕ್ಷ ರೂ ಕಳೆದುಕೊಂಡ!

KGF: ಅನಾಮಧೇಯ ವ್ಯಕ್ತಿ ಹೇಳಿದ್ದನ್ನು ನಂಬಿದ ವ್ಯಕ್ತಿಯೊಬ್ಬರು ತಮ್ಮ ಮೊಬೈಲ್‌ಗೆ ಬಂದ ಲಿಂಕ್​ ಅನ್ನು ಒತ್ತಿದ ಪರಿಣಾಮ ತಮ್ಮ ಬ್ಯಾಂಕ್ ಖಾತೆಯಿಂದ 15 ,27,400 ರೂ ಕಳೆದುಕೊಂಡಿರುವ ಘಟನೆ ಕೋಲಾರದ ಕೆಜಿಎಫ್ ನಗರದಲ್ಲಿ ನಡೆದಿದೆ.

Cyber Fraud: ಕೆಜಿಎಫ್ -ಅನಾಮಧೇಯ ವ್ಯಕ್ತಿ ಕಳಿಸಿದ ಆಮಿಷದ ಲಿಂಕ್ ಒತ್ತಿ, ಜಸ್ಟ್ 15 ಲಕ್ಷ ರೂ ಕಳೆದುಕೊಂಡ!
ಅನಾಮಧೇಯ ವ್ಯಕ್ತಿ ಕಳಿಸಿದ ಆಮಿಷದ ಲಿಂಕ್ ಒತ್ತಿ, ಜಸ್ಟ್ 15 ಲಕ್ಷ ರೂ ಕಳೆದುಕೊಂಡರು
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ಸಾಧು ಶ್ರೀನಾಥ್​|

Updated on: Aug 04, 2023 | 2:46 PM

Share

ಕೋಲಾರ, ಆಗಸ್ಟ್​ 4: ಫೋನ್ ಪೇ ಲಿಂಕ್ ಒತ್ತಿದರೆ ತಿಂಗಳಿಗೆ ೫೦ ಸಾವಿರ ರೂ ಆದಾಯ ಬರುವುದಾಗಿ ಅನಾಮಧೇಯ ವ್ಯಕ್ತಿ (Anonymous person) ಹೇಳಿದ್ದನ್ನು ನಂಬಿದ ವ್ಯಕ್ತಿಯೊಬ್ಬರು ತಮ್ಮ ಮೊಬೈಲ್‌ಗೆ ಬಂದ ಲಿಂಕ್​ ಅನ್ನು ಒತ್ತಿದ ಪರಿಣಾಮ ತಮ್ಮ ಬ್ಯಾಂಕ್ ಖಾತೆಯಿಂದ 15 ,27,400 ರೂ ಕಳೆದುಕೊಂಡಿರುವ ಘಟನೆ (Cyber Fraud) ಕೋಲಾರದ ಕೆಜಿಎಫ್ (KGF) ನಗರದಲ್ಲಿ ನಡೆದಿದೆ.

ಕೆಜಿಎಫ್‌ನ ಸುಭಾಷ್ ನಗರದ ಮುರುಗನ್ ಮೊಬೈಲ್‌ಗೆ 926353322 ಸಂಖ್ಯೆಯ ಮೊಬೈಲ್‌ನಿಂದ ಕರೆ ಮಾಡಿದ ಅನಾಮಧೇಯ ವ್ಯಕ್ತಿ ಮೊದಲಿಗೆ ತಾನು ಟಿಜೆಸಿ ಕಾರ್ಪೋರೇಟ್ ಕಂಪನಿಯ ರೀಜನಲ್ ಮ್ಯಾನೇಜರ್ ಎಂದು ಪರಿಚಯ ಮಾಡಿಕೊಂಡಿದ್ದಾನೆ.

ನಂತರ ನಿಮಗೆ ತಿಂಗಳಿಗೆ ೫೦ ಸಾವಿರ ರೂ ಆದಾಯ ಬರುವಂತೆ ಮಾಡುತ್ತೇವೆ. ನೀವು ಜಸ್ಟ್​ ಈ ಫೋನ್ ಪೇ ಲಿಂಕ್ ಮೂಲಕ ಲಾಗಿನ್​ ಆಗಿ ಎಂದು ಲಿಂಕ್​ ಕಳುಸಿದ್ದಾನೆ. ಹಿಂದೆಮುಂದೆ ನೋಡದೆ, ಯೋಚಿಸದೆ ಮರುಳಾದ ಮುರುಗನ್ ಆ ಲಿಂಕ್​​ ಅನ್ನು ಓಪನ್ ಮಾಡಿಬಿಟ್ಟಿದ್ದಾರೆ.

ಇದನ್ನೂ ಓದಿ: PSI ನೇಮಕಾತಿ ಅಕ್ರಮ ಪ್ರಕರಣ: ಮರು ಪರೀಕ್ಷೆಯೇ ಸೂಕ್ತ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್

ಆ ಕಡೆಯಿಂದ ಅನಾಮಧೇಯ ವ್ಯಕ್ತಿ ಆ ಘಳಿಗೆಗಾಗಿಯೇ ಕಾಯುತ್ತಿದ್ದವನಂತೆ ಆ ಸಂದರ್ಭವನ್ನೇ ಬಳಸಿಕೊಂಡು ಫೋನ್ ಪೇ ಮುಖಾಂತರ ಹಂತ ಹಂತವಾಗಿ ಒಂದು ತಿಂಗಳಿನಿಂದ ೧೫,೨೭,೪೦೦ ರೂಗಳನ್ನು ತನ್ನ ಬ್ಯಾಂಕ್ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ!

ಕೊನೆಗೂ ಪ್ರಕರಣವು ಕೆಜಿಎಫ್ ಸೈಬರ್ ಕ್ರೈಂ ಪೊಲೀಸರಿಗೆ ತಲುಪಿದ್ದು ಅವರೀಗ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕೆಜಿಎಫ್‌ನ ಸಿಇಎನ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮುಂದುವರಿದಿದೆ.

ಕೆಜಿಎಫ್ ವರದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು