AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyber Fraud: ಕೆಜಿಎಫ್ -ಅನಾಮಧೇಯ ವ್ಯಕ್ತಿ ಕಳಿಸಿದ ಆಮಿಷದ ಲಿಂಕ್ ಒತ್ತಿ, ಜಸ್ಟ್ 15 ಲಕ್ಷ ರೂ ಕಳೆದುಕೊಂಡ!

KGF: ಅನಾಮಧೇಯ ವ್ಯಕ್ತಿ ಹೇಳಿದ್ದನ್ನು ನಂಬಿದ ವ್ಯಕ್ತಿಯೊಬ್ಬರು ತಮ್ಮ ಮೊಬೈಲ್‌ಗೆ ಬಂದ ಲಿಂಕ್​ ಅನ್ನು ಒತ್ತಿದ ಪರಿಣಾಮ ತಮ್ಮ ಬ್ಯಾಂಕ್ ಖಾತೆಯಿಂದ 15 ,27,400 ರೂ ಕಳೆದುಕೊಂಡಿರುವ ಘಟನೆ ಕೋಲಾರದ ಕೆಜಿಎಫ್ ನಗರದಲ್ಲಿ ನಡೆದಿದೆ.

Cyber Fraud: ಕೆಜಿಎಫ್ -ಅನಾಮಧೇಯ ವ್ಯಕ್ತಿ ಕಳಿಸಿದ ಆಮಿಷದ ಲಿಂಕ್ ಒತ್ತಿ, ಜಸ್ಟ್ 15 ಲಕ್ಷ ರೂ ಕಳೆದುಕೊಂಡ!
ಅನಾಮಧೇಯ ವ್ಯಕ್ತಿ ಕಳಿಸಿದ ಆಮಿಷದ ಲಿಂಕ್ ಒತ್ತಿ, ಜಸ್ಟ್ 15 ಲಕ್ಷ ರೂ ಕಳೆದುಕೊಂಡರು
Follow us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಸಾಧು ಶ್ರೀನಾಥ್​

Updated on: Aug 04, 2023 | 2:46 PM

ಕೋಲಾರ, ಆಗಸ್ಟ್​ 4: ಫೋನ್ ಪೇ ಲಿಂಕ್ ಒತ್ತಿದರೆ ತಿಂಗಳಿಗೆ ೫೦ ಸಾವಿರ ರೂ ಆದಾಯ ಬರುವುದಾಗಿ ಅನಾಮಧೇಯ ವ್ಯಕ್ತಿ (Anonymous person) ಹೇಳಿದ್ದನ್ನು ನಂಬಿದ ವ್ಯಕ್ತಿಯೊಬ್ಬರು ತಮ್ಮ ಮೊಬೈಲ್‌ಗೆ ಬಂದ ಲಿಂಕ್​ ಅನ್ನು ಒತ್ತಿದ ಪರಿಣಾಮ ತಮ್ಮ ಬ್ಯಾಂಕ್ ಖಾತೆಯಿಂದ 15 ,27,400 ರೂ ಕಳೆದುಕೊಂಡಿರುವ ಘಟನೆ (Cyber Fraud) ಕೋಲಾರದ ಕೆಜಿಎಫ್ (KGF) ನಗರದಲ್ಲಿ ನಡೆದಿದೆ.

ಕೆಜಿಎಫ್‌ನ ಸುಭಾಷ್ ನಗರದ ಮುರುಗನ್ ಮೊಬೈಲ್‌ಗೆ 926353322 ಸಂಖ್ಯೆಯ ಮೊಬೈಲ್‌ನಿಂದ ಕರೆ ಮಾಡಿದ ಅನಾಮಧೇಯ ವ್ಯಕ್ತಿ ಮೊದಲಿಗೆ ತಾನು ಟಿಜೆಸಿ ಕಾರ್ಪೋರೇಟ್ ಕಂಪನಿಯ ರೀಜನಲ್ ಮ್ಯಾನೇಜರ್ ಎಂದು ಪರಿಚಯ ಮಾಡಿಕೊಂಡಿದ್ದಾನೆ.

ನಂತರ ನಿಮಗೆ ತಿಂಗಳಿಗೆ ೫೦ ಸಾವಿರ ರೂ ಆದಾಯ ಬರುವಂತೆ ಮಾಡುತ್ತೇವೆ. ನೀವು ಜಸ್ಟ್​ ಈ ಫೋನ್ ಪೇ ಲಿಂಕ್ ಮೂಲಕ ಲಾಗಿನ್​ ಆಗಿ ಎಂದು ಲಿಂಕ್​ ಕಳುಸಿದ್ದಾನೆ. ಹಿಂದೆಮುಂದೆ ನೋಡದೆ, ಯೋಚಿಸದೆ ಮರುಳಾದ ಮುರುಗನ್ ಆ ಲಿಂಕ್​​ ಅನ್ನು ಓಪನ್ ಮಾಡಿಬಿಟ್ಟಿದ್ದಾರೆ.

ಇದನ್ನೂ ಓದಿ: PSI ನೇಮಕಾತಿ ಅಕ್ರಮ ಪ್ರಕರಣ: ಮರು ಪರೀಕ್ಷೆಯೇ ಸೂಕ್ತ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್

ಆ ಕಡೆಯಿಂದ ಅನಾಮಧೇಯ ವ್ಯಕ್ತಿ ಆ ಘಳಿಗೆಗಾಗಿಯೇ ಕಾಯುತ್ತಿದ್ದವನಂತೆ ಆ ಸಂದರ್ಭವನ್ನೇ ಬಳಸಿಕೊಂಡು ಫೋನ್ ಪೇ ಮುಖಾಂತರ ಹಂತ ಹಂತವಾಗಿ ಒಂದು ತಿಂಗಳಿನಿಂದ ೧೫,೨೭,೪೦೦ ರೂಗಳನ್ನು ತನ್ನ ಬ್ಯಾಂಕ್ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ!

ಕೊನೆಗೂ ಪ್ರಕರಣವು ಕೆಜಿಎಫ್ ಸೈಬರ್ ಕ್ರೈಂ ಪೊಲೀಸರಿಗೆ ತಲುಪಿದ್ದು ಅವರೀಗ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕೆಜಿಎಫ್‌ನ ಸಿಇಎನ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮುಂದುವರಿದಿದೆ.

ಕೆಜಿಎಫ್ ವರದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಸಾಧು ಕೋಕಿಲ ಸಿನಿಮಾ ಕಡಿಮೆ ಆಗಿದ್ದು ಯಾಕೆ? ಕಾರಣ ತಿಳಿಸಿದ ಕಾಮಿಡಿ ಕಿಂಗ್
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಾನಪದವೇ ಎಲ್ಲ ಕಲೆಗಳ ಮೂಲ, ಅದು ಜಾನಪದವಲ್ಲ ಜ್ಞಾನಪದ: ವೆಂಕಪ್ಪ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ