ಕೋಲಾರ ಜಿಲ್ಲಾಸ್ಪತ್ರೆಯ ಎಲ್ಲ ಬೆಡ್​ಗಳನ್ನೂ ಆಕ್ಸಿಜನ್‌ ಬೆಡ್‌ಗಳನ್ನಾಗಿ ಪರಿವರ್ತನೆ ಮಾಡಲಾಗುವುದು; ಡಿಸಿಎಂ ಡಾ ಅಶ್ವತ್ಥನಾರಾಯಣ

Kolar District Hospital: ಆಂಬ್ಯುಲೆನ್ಸ್‌ ಚಾಲಕರಿಗೆ ಎರಡು ತಿಂಗಳಿನಿಂದ ವೇತನ ಆಗಿಲ್ಲ ಎಂದು ಕೆಜಿಎಫ್‌ ಶಾಸಕಿ ರೂಪಾ ಶಶಿಧರ್‌ ಸಭೆಯ ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ಡಿಸಿಎಂ, ತಕ್ಷಣವೇ ಅವರ ವೇತನದಲ್ಲಿ ಒಂದು ಪೈಸೆಯೂ ಬಾಕಿ ಇರದಂತೆ ಪಾವತಿ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಕೋಲಾರ ಜಿಲ್ಲಾಸ್ಪತ್ರೆಯ ಎಲ್ಲ ಬೆಡ್​ಗಳನ್ನೂ ಆಕ್ಸಿಜನ್‌ ಬೆಡ್‌ಗಳನ್ನಾಗಿ ಪರಿವರ್ತನೆ ಮಾಡಲಾಗುವುದು; ಡಿಸಿಎಂ ಡಾ ಅಶ್ವತ್ಥನಾರಾಯಣ
ಡಿಸಿಎಂ ಅಶ್ವತ್ಥನಾರಾಯಣ
Follow us
|

Updated on:May 04, 2021 | 5:22 PM

ಬೆಂಗಳೂರು: ಕೋಲಾರ ಜಿಲ್ಲೆಯಲ್ಲಿ ತಕ್ಷಣವೇ 300 ಆಕ್ಸಿಜನ್‌ ಬೆಡ್‌, 150 ಐಸಿಯು ಬೆಡ್‌ ಹಾಗೂ 40 ವೆಂಟಿಲೇಟರ್‌ಗಳ ವ್ಯವಸ್ಥೆ ಮಾಡಲಾಗುವುದು ಎಂದು ರಾಜ್ಯ ಕೊವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಿಂದ ಮಂಗಳವಾರ ವರ್ಚುಯಲ್‌ ಸಭೆಯ ಮೂಲಕ ಕೋಲಾರ ಜಿಲ್ಲೆಯ  ಚುನಾಯಿತ ಪ್ರತಿನಿಧಿಗಳು, ಉನ್ನತ ಅಧಿಕಾರಿಗಳು, ಎಲ್ಲ ತಾಲೂಕುಗಳ ಆರೋಗ್ಯ ಮತ್ತಿತರ ಇಲಾಖೆಗಳ ಅಧಿಕಾರಿಗಳ ಜತೆ ಕೊವಿಡ್‌ ಪರಿಸ್ಥಿತಿಯ ಬಗ್ಗೆ ಸಮಾಲೋಚನೆ ನಡೆಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಸಮಯ ಪೋಲು ಮಾಡದೇ ತಕ್ಷಣದಿಂದಲೇ ಎಲ್ಲ ಕೆಲಸಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಂಡು ಮಾಡಲಾಗುವುದು ಎಂದರು.

ಸದ್ಯಕ್ಕೆ ಕೋಲಾರ ಜಿಲ್ಲೆಯಲ್ಲಿ 700 ಕೊವಿಡ್‌ ಬೆಡ್‌ಗಳಿದ್ದು, ಈ ಪೈಕಿ 190 ಐಸಿಯು ಮತ್ತು ವೆಂಟಿಲೇಟರ್‌ ಬೆಡ್‌ಗಳಿವೆ. ಜಿಲ್ಲಾ ಕೇಂದ್ರದಲ್ಲಿರುವ ಎಸ್‌ಎನ್ನಾರ್‌ ಆಸ್ಪತ್ರೆಯಲ್ಲಿ ಇನ್ನು 10 ದಿನಗಳ ಒಳಗಾಗಿ ಪ್ರತಿ ನಿಮಿಷಕ್ಕೆ ಸಾವಿರ ಕೆಎಲ್ ಆಮ್ಲಜನಕ ಪೂರೈಕೆ ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ. 6 ಕೆಎಲ್‌ ಆಕ್ಸಿಜನ್‌ ಸಂಗ್ರಹದ ವ್ಯವಸ್ಥೆಯ ಕೆಲಸ ಪ್ರಗತಿಯಲ್ಲಿದೆ. ಇನ್ನೆರಡು ದಿನದಲ್ಲಿ ಸಿವಿಲ್‌ ಕೆಲಸ ಮುಗಿಯಲಿದೆ ಎಂದು ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದರು.

ಜಿಲ್ಲಾ ಕೇಂದ್ರವೂ ಸೇರಿ ಯಾವುದೇ ತಾಲೂಕು ಕೇಂದ್ರದಲ್ಲೂ ಆಮ್ಲಜನಕದ ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಅದೇ ರೀತಿ ರೆಮ್ಡೆಸಿವಿರ್ ಸಾಕಷ್ಟು ದಾಸ್ತಾನು ಇದ್ದು, ಅಗತ್ಯವಿರುವ ಯಾವ ಔಷಧವೂ ಕೊರತೆ ಆಗದಂತೆ ಎಚ್ಚರ ವಹಿಸಲಾಗಿದೆ ಎಂದು ಡಿಸಿಎಂ ತಿಳಿಸಿದರು.

ಎಲ್ಲ ಬೆಡ್‌ಗಳಿಗೂ ಆಕ್ಸಿಜನ್‌ ಸಂಪರ್ಕ ಇದಕ್ಕೂ ಮೊದಲು ಪರಿಶೀಲನಾ ಸಭೆಯಲ್ಲಿ ಮಾತನಾಡಿ ಡಿಸಿಎಂ ಅಶ್ವತ್ಥನಾರಾಯಣ, “ಕೋಲಾರ ಜಿಲ್ಲೆಯಲ್ಲಿರುವ 750 ಆಕ್ಸಿಜನ್‌ ಬೆಡ್‌ಗಳು ಹಾಗೂ 190 ಐಸಿಯು ವೆಂಟಿಲೇಟರ್‌ಗಳ ನಿರ್ವಹಣೆಗೆ ನುರಿತ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಾಗುವುದು. ಆದಷ್ಟು ಬೇಗ ಜಿಲ್ಲಾಸ್ಪತ್ರೆಯಲ್ಲಿರುವ ಎಲ್ಲ ಬೆಡ್‌ಗಳನ್ನು ಆಕ್ಸಿಜನ್‌ ಬೆಡ್‌ಗಳನ್ನಾಗಿ ಪರಿವರ್ತನೆ ಮಾಡಲಾಗುವುದು. ಹತ್ತಿರದ ದೇವರಾಜ ಅರಸು ಮೆಡಿಕಲ್‌ ಕಾಲೇಜ್‌ ಆಸ್ಪತ್ರೆಯಲ್ಲೂ ಆಕ್ಸಿಜನ್‌ ಬೆಡ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಹಾಕಲು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ನಿನ್ನೆ (ಸೋಮವಾರ) ಒಂದೇ ದಿನ ಜಿಲ್ಲೆಯಲ್ಲಿ 622 ಸೋಂಕಿತರು ಪತ್ತೆಯಾಗಿದ್ದಾರೆ. ಈಗ ಜಿಲ್ಲೆಯಲ್ಲಿ 3,600 ಜನ ಸೋಂಕಿತರಿದ್ದಾರೆ. ಇವರಲ್ಲಿ ಶೇ.10ರಷ್ಟು ಅಂದರೆ, 360 ಜನರಿಗೆ ಮಾತ್ರ ಆಕ್ಷಿಜನ್‌ ಅವಶ್ಯಕತೆ ಇರುತ್ತದೆ. ಉಳಿದವರು ಮನೆಯಲ್ಲೇ ಕ್ವಾರಂಟೈನ್‌ ಆಗಿ ಚಿಕಿತ್ಸೆ ಪಡೆಯಬಹುದು. ಜಿಲ್ಲಾಡಳಿತ ಎಲ್ಲ ಎಚ್ಚರಿಕೆಗಳನ್ನು ತೆಗೆದುಕೊಂಡಿದ್ದು, ಇನ್ನು ವೇಗವಾಗಿ ಜನರಿಗೆ ಸ್ಪಂದಿಸುವಂತೆ ಡಿಸಿಗೆ ನಿರ್ದೇಶನ ನೀಡಿದರು.

24 ಗಂಟೆಯೊಳಗೆ ವರದಿ ರೋಗ ಲಕ್ಷಣಗಳುಳ್ಳ ಪ್ರತಿಯೊಬ್ಬರನ್ನೂ ಕೊವಿಡ್‌ ಪರೀಕ್ಷೆಗೆ ಒಳಪಡಿಸಬೇಕು ಎಂದು ಜಿಲ್ಲಾಡಳಿತಕ್ಕೆ ಸೂಚಿಸಿದ ಡಿಸಿಎಂ, ಪರೀಕ್ಷೆ ನಂತರ 24 ಗಂಟೆಗಳ ಒಳಗಾಗಿ ಫಲಿತಾಂಶ ಕೊಡಬೇಕು. ಒಂದು ವೇಳೆ ಪಾಸಿಟಿವ್ ಬಂದಿದ್ದರೆ ಕೂಡಲೇ ಚಿಕಿತ್ಸೆ ಆರಂಭಿಸಬೇಕು. ಹೋಮ್‌ ಐಸೋಲೇಶನ್‌ ಆಗಿರುವವರಿಗೆ ಮೆಡಿಕಲ್‌ ಕಿಟ್‌ ಕೊಡಬೇಕು. ಕಾಲಕಾಲಕ್ಕೆ ಅವರನ್ನು ಫಾಲೋಅಪ್‌ ಮಾಡುತ್ತಿರಬೇಕು. ಸೋಂಕಿನ ಪ್ರಮಾಣವನ್ನು ಪರಿಶೀಲಿಸುತ್ತಲೇ ಇರಬೇಕು ಎಂದು ಡಾ.ಅಶ್ವತ್ಥನಾರಾಯಣ ಅವರು ವೈದ್ಯಾಧಿಕಾರಿಗಳಿಗೆ ಸೂಚನೆ ಕೊಟ್ಟರು.

ಆಂಬುಲೆನ್ಸ್‌ ಚಾಲಕರಿಗೆ ತಕ್ಷಣವೇ ವೇತನ ಆಂಬ್ಯುಲೆನ್ಸ್‌ ಚಾಲಕರಿಗೆ ಎರಡು ತಿಂಗಳಿನಿಂದ ವೇತನ ಆಗಿಲ್ಲ ಎಂದು ಕೆಜಿಎಫ್‌ ಶಾಸಕಿ ರೂಪಾ ಶಶಿಧರ್‌ ಸಭೆಯ ಗಮನಕ್ಕೆ ತಂದರು. ಇದಕ್ಕೆ ಸ್ಪಂದಿಸಿದ ಡಿಸಿಎಂ, ತಕ್ಷಣವೇ ಅವರ ವೇತನದಲ್ಲಿ ಒಂದು ಪೈಸೆಯೂ ಬಾಕಿ ಇರದಂತೆ ಪಾವತಿ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿ ಆರ್.‌ಸೆಲ್ವಮಣಿ, ಕೂಡಲೇ ಪರಿಶೀಲಿಸಿ ವೇತನ ವಿಲೇವಾರಿ ಮಾಡಲಾಗುವುದು ಎಂದು ತಿಳಿಸಿದರು.

ವೈದ್ಯಕೀಯ ಉತ್ಪನ್ನಗಳಿಗೆ ಕೊರತೆ ಆಗಬಾರದು ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯಕೀಯ ಬಳಕೆಯ ವಸ್ತುಗಳ ಕೊರತೆಯಿಂದ ವೈದ್ಯರು, ಸಿಬ್ಬಂದಿ ಸೋಂಕಿಗೆ ಸುತ್ತಾಗುತ್ತಿದ್ದಾರೆ ಎಂದು ಶಾಸಕರಾದ ನಂಜೇಗೌಡ, ಎಸ್.ಎನ್.‌ನಾರಾಯಣಸ್ವಾಮಿ, ರೂಪಾ ಶಶಿಧರ್‌ ಪ್ರಸ್ತಾಪ ಮಾಡಿದರು. ಇದಕ್ಕೂ ಸ್ಪಂದಿಸಿದ ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ, ವೈದ್ಯರು ಹಾಗೂ ಸಿಬ್ಬಂದಿ ಬಳಸುವ ಪಿಪಿಎ ಕಿಟ್‌, ಮಾಸ್ಕ್‌, ಸ್ಯಾನಿಟೈಸರ್‌, ಗ್ಲೌಸ್‌ ಸೇರಿ ಯಾವ ವಸ್ತುವಿಗೂ ಕೊರತೆ ಆಗಬಾರದು. ಅವೆಲ್ಲವನ್ನು ಎಷ್ಟು ಬೇಕಾದರೂ ಪೂರೈಸಲು ಸರಕಾರ ಸಿದ್ದವಿದೆ. ಒಂದು ವೇಳೆ ಕೊರತೆ ಬಿದ್ದರೆ ಜಿಲ್ಲಾಧಿಕಾರಿಗೆ ಖರೀದಿ ಮಾಡಲು ಅಧಿಕಾರ ನೀಡಲಾಗಿದೆ ಎಂದು ತಿಳಿಸಿದರು.

ಸಭೆಯ ಆರಂಭಕ್ಕೆ ಮುನ್ನ ಜಿಲ್ಲಾಧಿಕಾರಿ ಆರ್.‌ಸೆಲ್ವಮಣಿ ಜಿಲ್ಲೆಯಲ್ಲಿ ಕೊವಿಡ್‌ ನಿರ್ವಹಣೆಗೆ ಕೈಗೊಂಡಿರುವ ಎಲ್ಲ ಕ್ರಮಗಳ ಮಾಹಿತಿಯನ್ನು ನೀಡಿದರು. ಜಿಲ್ಲೆಯಲ್ಲಿ ದಿನಕ್ಕೆ 6,000 ಕೆಎಲ್‌ ಆಮ್ಲಜನಕ ಬಳಕೆಯಾಗುತ್ತಿದ್ದು, ಇನ್ನೂ 10,000 ಕೆಎಲ್‌ ಆಮ್ಲಜನಕ ಬೇಕಿದೆ. ಜಿಲ್ಲಾಸ್ಪತ್ರೆಯಲ್ಲಿ ದಿನಕ್ಕೆ 10,000 ಕೆಎಲ್‌ ಆಕ್ಸಿಜನ್‌ ಪೂರೈಸುವ ಕಾಮಗಾರಿ ನಡೆಯುತ್ತಿದೆ. ಇನ್ನೆರಡು ದಿನದಲ್ಲಿ ಆ ಕೆಲಸ ಮುಗಿಯುತ್ತದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಲಸಿಕೆಗೆ ಬಹಳ ಡಿಮಾಂಡ್‌ ಇದ್ದು, ಸೋಮವಾರದ ಹೊತ್ತಿಗೆ ನಮ್ಮಲ್ಲಿದ್ದ ಲಸಿಕೆಯ ಸ್ಟಾಕ್‌ ಖಾಲಿಯಾಯಿತು. ಹೊರಗಡೆಯಿಂದ 10,000 ವೈಲ್‌ ತರಿಸಲಾಗಿದೆ. ದಿನಕ್ಕೆ 11ರಿಂದ 12,000 ವೈಲ್‌ಗಳಷ್ಟು ಲಸಿಕೆ ಜಿಲ್ಲೆಗೆ ಬೇಕಿವೆ ಎಂಬ ಅಂಶವನ್ನು ಡಿಸಿಎಂರ ಗಮನಕ್ಕೆ ತಂದರು.

ಇದಕ್ಕೂ ಕೂಡಲೇ ಸ್ಪಂದಿಸಿದ ಡಿಸಿಎಂ ಅಶ್ವತ್ಥನಾರಾಯಣ, ಕೊರತೆ ಇರುವ ಆಮ್ಲಜನಕವನ್ನು ತತ್‌ಕ್ಷಣವೇ ಒದಗಿಸಲಾಗುವುದು ಹಾಗೂ ಅಗತ್ಯ ಪ್ರಮಾಣ ಲಸಿಕೆಯನ್ನೂ ನೀಡಲಾಗುವುದು ಎಂದರು.

ಉಳಿದಂತೆ ಬೆಡ್‌ಗಳು ಸಿಗದಿರುವುದು, ಆಮ್ಲಜನಕದ ಪೂರೈಕೆ ಮತ್ತಿತರೆ ಅಂಶಗಳ ಬಗ್ಗೆ ಸಂಸದ ಮುನಿಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ, ಶಾಸಕರಾದ ಎಸ್.ರಮೇಶ್‌ ಕುಮಾರ್‌, ಎಸ್.ಎನ್.‌ನಾರಾಯಣಸ್ವಾಮಿ, ರೂಪಾ ಶಶಿಧರ್‌, ಕೆ.ಶ್ರೀನಿವಾಸ ಗೌಡ, ಕೆ.ವೈ.ನಂಜೇಗೌಡ,‌ ನಾಗೇಶ್‌, ವಿಧಾನ ಪರಿಷತ್‌ ಸದಸ್ಯ ನಜೀರ್‌ ಅಹಮದ್‌ ಮುಂತಾದವರು ಹಲವಾರು ವಿಷಯಗಳನ್ನು ಪ್ರಸ್ತಾಪ ಮಾಡಿದರು. ಕೋಲಾರ ಮತ್ತು ಕೆಜಿಎಫ್‌ ಪೊಲೀಸ್‌ ವರಿಷ್ಠಾಧಿಕಾರಿಗಳು ಸಭೆಯಲ್ಲಿದ್ದರು.

ಇದನ್ನೂ ಓದಿ: ಕೊರೊನಾ ನಡುವೆ ಮನೆ ಹರಾಜಿಗೆ ಮುಂದಾದ ಆರ್​ಡಿಸಿಸಿ ಬ್ಯಾಂಕ್; ದಯಾಮರಣ ಕೋರಿ ರಾಷ್ಟ್ರಪತಿ, ರಾಜ್ಯಪಾಲ, ಮುಖ್ಯಮಂತ್ರಿಗೆ ಪತ್ರ ಬರೆದ ಕೊಪ್ಪಳ ಯುವಕ

Coronavirus India Update: ಭಾರತದಲ್ಲಿ ಒಂದೇ ದಿನ 3.57 ಲಕ್ಷ ಹೊಸ ಕೊವಿಡ್ ಪ್ರಕರಣ ಪತ್ತೆ, 3,449 ಮಂದಿ ಸಾವು

(DCM Dr Aswathanarayana said All beds in the Kolar District hospitals will be converted to oxygen beds)

Published On - 5:21 pm, Tue, 4 May 21

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ