AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಗಣೇಶ ಹಬ್ಬದ ಮೆರವಣಿಗೆಗೆ ಡಿಜೆ ಸೌಂಡ್ಸ್ ಬ್ಯಾನ್: ಸಾರ್ವಜನಿಕರಿಂದ ಆಕ್ರೋಶ

ಕರ್ನಾಟಕದೆಲ್ಲೆಡೆ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಅನೇಕ ಕಡೆಗಳಲ್ಲಿ ಸಾರ್ವಜನಿಕ ಗಣೇಶೋತ್ಸವಗಳು ಗಮನ ಸೆಳೆಯುತ್ತಿವೆ. ಆದರೆ ಇದೇ ಸಂದರ್ಭದಲ್ಲಿ ಕೋಲಾರ ಜಿಲ್ಲಾಡಳಿತ ಹೊರಡಿಸಿರುವ ಹೊಸ ಆದೇಶವೊಂದು ಗಣೇಶೋತ್ಸವ ಆಯೋಜಕರನ್ನು ಸಂಕಷ್ಟಕ್ಕೆ ದೂಡಿದೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಆದೇಶಕ್ಕೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿದೆ.

ಕೋಲಾರದಲ್ಲಿ ಗಣೇಶ ಹಬ್ಬದ ಮೆರವಣಿಗೆಗೆ ಡಿಜೆ ಸೌಂಡ್ಸ್ ಬ್ಯಾನ್: ಸಾರ್ವಜನಿಕರಿಂದ ಆಕ್ರೋಶ
ಸಾಂದರ್ಭಿಕ ಚಿತ್ರ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Sep 07, 2024 | 4:57 PM

Share

ಕೋಲಾರ, ಸೆಪ್ಟೆಂಬರ್ 7: ಕೋಲಾರ ಜಿಲ್ಲೆಯಾದ್ಯಂತ ಸಂಭ್ರಮದಿಂದ ಗಣೇಶೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಡಿಜೆ ಸೌಂಡ್ಸ್ ನಿಷೇಧಿಸಿ ಆದೇಶ ಹೊರಡಿಸಿದೆ. ಇದು ಸಾರ್ವಜನಿಕರ ಆಕ್ಷೇಪಕ್ಕೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಏಕಾಏಕಿ ಡಿಜೆ ಸೌಂಡ್ಸ್ ನಿಷೇಧಿಸಿರುವುದರಿಂದ ಅಪಾರ ನಷ್ಟವಾಗುತ್ತಿದೆ ಎಂದು ಡಿಜೆ ಮಾಲೀಕರು ಕೂಡ ಅಸಮಾಧಾನ ಹೊರಹಾಕಿದ್ದಾರೆ.

ಜಿಲ್ಲಾಡಳಿತದ ಕ್ರಮದಿಂದ ಡಿಜೆ ಸೌಂಡ್ಸ್ ಮಾಲೀಕರಿಗೆ ಸಂಕಷ್ಟ ಎದುರಾಗಿದೆ. ಏಕಾಏಕಿ ಡಿಜೆ ಬ್ಯಾನ್​ ಮಾಡಿರುವುದಕ್ಕೆ ಡಿಜೆ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವರ್ಷಕ್ಕೊಮ್ಮೆ ಬರುವ ಹಬ್ಬದಲ್ಲಿ ನಮ್ಮ ಹೊಟ್ಟೆ ಮೇಲೆ ಹೊಡೆಯುವ ನಿರ್ಧಾರ ತೆಗೆದಕೊಂಡಿದ್ದಾರೆ. ಸಾಲ ಸೋಲ ಮಾಡಿ ಡಿಜೆ ಸಿಸ್ಟಮ್​ಗಳನ್ನು ತಂದಿದ್ದೇವೆ. ಈಗಾಗಲೇ ಅಡ್ವಾನ್ಸ್ ತೆಗೆದುಕೊಂಡಿದ್ದೇವೆ. ಈಗ ಬ್ಯಾನ್​ ಮಾಡಿದ್ದಾರೆ. ಜಿಲ್ಲಾಡಳಿತದ ನಿರ್ಧಾರದಿಂದ ನಾವು ನಷ್ಟ ಅನುಭವಿಸುವಂತಾಗಿದೆ. ನಿಭಂದನೆಗಳನ್ನು ಹಾಕಿ ಅನುಮತಿ ಕೊಡಿ. ಅದರ ಬದಲು ನಿಷೇಧ ಹೇರಬೇಡಿ ಎಂದು ಡಿಜೆ ಮಾಲೀಕರು ಮನವಿ ಮಾಡಿದ್ದಾರೆ. ಕೋಲಾರ ಎಸ್​ಪಿ ನಿಖಿಲ್​ ಬಳಿ ಡಿಜೆ ಸೌಂಡ್ಸ್​ ಮಾಲೀಕರು ಅಳಲು ತೋಡಿಕೊಂಡಿದ್ದಾರೆ.

ಕುರುಡುಮಲೆ ವಿನಾಯಕನ ದರ್ಶನಕ್ಕೆ ಜನರ ದಂಡು

ಗಣೇಶ ಚತುರ್ಥಿ ಸಂದರ್ಭದಲ್ಲಿ ಕೋಲಾರದ ಮುಳಬಾಗಿಲು ತಾಲ್ಲೂಕಿನ ಕುರುಡುಮಲೆ ವಿನಾಯಕನ ದರ್ಶನಕ್ಕೆ ಜನರ ದಂಡೇ ಬಂದಿದೆ. ಭಕ್ತರು ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಿದ್ದಾರೆ. ಕೋಲಾರ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆ ಹೊರ ರಾಜ್ಯದಿಂದಲೂ ಭಕ್ತರು ಬಂದಿದ್ದಾರೆ.

ಇದನ್ನೂ ಓದಿ: ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10,001 ಕರಿಗಡುಬಿನಲ್ಲಿ ಅರಳಿದ ಗಣಪತಿ!

ವಿಶ್ವದ ಏಕೈಕ ಏಕಶಿಲಾ ಸಾಲಿಗ್ರಾಮ ಶಿಲಾಗಣಪತಿ ಎಂಬುದು ಕುರುಡುಮಲೆ ವಿನಾಯಕನ ವಿಶೇಷತೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್