AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡುಕರ ಜಗಳ ಕೊಲೆಯಲ್ಲಿ ಅಂತ್ಯ..! ಪ್ರಾಣ ಸ್ನೇಹಿತನನ್ನೇ ಕೊಂದ ಗೆಳೆಯ

ಕೋಲಾರ: ಕುಡಿದ ಅಮಲಿನಲ್ಲಿ ಪ್ರಾಣ ಸ್ನೇಹಿತನನ್ನೇ ಕೊಂದಿರುವ ಘಟನೆಯೊಂದು ಕೋಲಾರದ ನರಸಾಪುರ ಹೋಬಳಿಯ ಕುರ್ಕಿ ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿ ಮುನಿಯಪ್ಪ ಎಂದು ಗುರುತಿಸಲಾಗಿದೆ. ಕೂಲಿ ಕೆಲಸದಿಂದ ಕುಡಿಯೋವರೆಗೂ ಜೊತೆಗೆ ಇರುತ್ತಿದ್ದ ಮುನಿಯಪ್ಪ ಹಾಗೂ ಅವನ ಗೆಳೆಯ ಕೃಷ್ಣಪ್ಪ ಬಹಳ ಒಳ್ಳೇ ದೋಸ್ತಿಗಳು. ಕುಡಿದ ಮತ್ತಿನಲ್ಲಿ ಒಮ್ಮೊಮ್ಮೆ ಕಿತ್ತಾಡಿದ್ರೂ ಮತ್ತೆ ಬಹಳ ಬೇಗ ಒಂದಾಗಿಬಿಡ್ತಿದ್ರು. ಕುಡುಕರ ಗಮ್ಮತ್ತೇ ಹಾಗೆ ಏನೋ. ಆದರೆ ಮಂಗಳವಾರದಂದು ಕುಡಿದ ಮತ್ತಿನಲ್ಲಿ ಶುರುವಾದ ಜಗಳ ಅದೇಕೋ ತಣ್ಣಗಾಗುವ ಲಕ್ಷಣ ತೋರದೆ ಕೊನೆಗೆ ಮುನಿಯಪ್ಪನ […]

ಕುಡುಕರ ಜಗಳ ಕೊಲೆಯಲ್ಲಿ ಅಂತ್ಯ..! ಪ್ರಾಣ ಸ್ನೇಹಿತನನ್ನೇ ಕೊಂದ ಗೆಳೆಯ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 10, 2020 | 2:34 PM

Share

ಕೋಲಾರ: ಕುಡಿದ ಅಮಲಿನಲ್ಲಿ ಪ್ರಾಣ ಸ್ನೇಹಿತನನ್ನೇ ಕೊಂದಿರುವ ಘಟನೆಯೊಂದು ಕೋಲಾರದ ನರಸಾಪುರ ಹೋಬಳಿಯ ಕುರ್ಕಿ ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿ ಮುನಿಯಪ್ಪ ಎಂದು ಗುರುತಿಸಲಾಗಿದೆ. ಕೂಲಿ ಕೆಲಸದಿಂದ ಕುಡಿಯೋವರೆಗೂ ಜೊತೆಗೆ ಇರುತ್ತಿದ್ದ ಮುನಿಯಪ್ಪ ಹಾಗೂ ಅವನ ಗೆಳೆಯ ಕೃಷ್ಣಪ್ಪ ಬಹಳ ಒಳ್ಳೇ ದೋಸ್ತಿಗಳು. ಕುಡಿದ ಮತ್ತಿನಲ್ಲಿ ಒಮ್ಮೊಮ್ಮೆ ಕಿತ್ತಾಡಿದ್ರೂ ಮತ್ತೆ ಬಹಳ ಬೇಗ ಒಂದಾಗಿಬಿಡ್ತಿದ್ರು. ಕುಡುಕರ ಗಮ್ಮತ್ತೇ ಹಾಗೆ ಏನೋ.

ಆದರೆ ಮಂಗಳವಾರದಂದು ಕುಡಿದ ಮತ್ತಿನಲ್ಲಿ ಶುರುವಾದ ಜಗಳ ಅದೇಕೋ ತಣ್ಣಗಾಗುವ ಲಕ್ಷಣ ತೋರದೆ ಕೊನೆಗೆ ಮುನಿಯಪ್ಪನ ಕೊಲೆಯಲ್ಲಿ ಅಂತ್ಯವಾಯ್ತು. ಅಷ್ಟಕ್ಕೂ ಜಗಳ ಶುರುವಾಗಿದ್ದು ಕೂಲಿ ಹಂಚಿಕೊಳ್ಳುವ ವಿಚಾರಕ್ಕೆ. ಅಂದು ಎಂದಿನಂತೆ ದಿನಗೂಲಿ ಮುಗಿಸಿಕೊಂಡ ನಂತರ ಪಕ್ಕದ ಮದ್ಯದಂಗಡಿಯಲ್ಲಿ ಕಂಠಪೂರ್ತಿ ಕುಡಿದಿದ್ದರು. ನಂತ್ರ ತಮ್ಮ ಫೇವರೇಟ್ ಅಡ್ಡ ಆಗಿದ್ದ ಹತ್ತಿರದ ದೇವಾಲಯಕ್ಕೆ ಹೋಗಿ ಉಳಿದ ಕೂಲಿ ಹಣವನ್ನ ಹಂಚಿಕೊಳ್ಳೋಕೆ ಮುಂದಾದ್ರು.

ಹಂಚಿಕೆ ವಿಚಾರವಾಗಿ ಇಬ್ಬರ ನಡುವೆ ಜಗಳ ಶುರುವಾಯ್ತು. ಸಿಟ್ಟಿನಲ್ಲಿ ಕೃಷ್ಣಪ್ಪ ಅಲ್ಲೇ ಇದ್ದ ದೊಣ್ಣೆಯೊಂದನ್ನ ತೆಗೊಂಡು ಮುನಿಯಪ್ಪನ ತಲೆಗೆ ಬಲವಾಗಿ ಹೊಡೆದಿದ್ದಾನೆ. ಇದರಿಂದ ಮುನಿಯಪ್ಪನಿಗೆ ತೀವ್ರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ನೇಹಿತನ ಮೃತ ದೇಹ ಕಂಡ ಕೃಷ್ಣಪ್ಪ ಗಾಬರಿಯಾಗಿ ಅಲ್ಲಿಂದ ಕಾಲ್ಕಿತ್ತ. ಇತ್ತ ಇವರ ಜಗಳ ದಿನಾ ಇದ್ದಿದ್ದೇ ಅಂತಾ ಸ್ಥಳೀಯರು ಸಹ ಅಲ್ಲಿ ಸುಳಿಯಲಿಲ್ಲ. ಮರುದಿನ ಬೆಳಗ್ಗೆ ಬಂದಾಗ್ಲೇ ಅವರಿಗೆ ವಿಷಯ ತಿಳಿದಿದ್ದು. ಕೂಡಲೇ ಪೊಲೀಸರಿಗೆ ಕರೆಮಾಡಿದ ಹಳ್ಳಿಯವರು ಮುನಿಯಪ್ಪನ ಮನೆಯವರಿಗೂ ಸಹ ವಿಷಯ ತಿಳಿಸಿದರು.

ಇನ್ನು ವಿಷಯ ತಿಳಿದು ಸ್ಥಳಕ್ಕೆ ಬಂದ ವೇಮಗಲ್ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಕೃಷ್ಣಪ್ಪನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಇಬ್ಬರು ಎಣ್ಣೆಗೋ ಅಥವಾ ಬೀಡಿಗೋ ಕಿತ್ತಾಡಿಕೊಂಡು ಆ ಭರದಲ್ಲಿ ಕೊಲೆಯಾಗಿದೆ ಎಂದು ತಿಳಿದುಬಂದಿದೆ. ಅದೇನೇ ಇರಲಿ. ಈ ಪ್ರಸಂಗ ನೋಡಿದರೆ ಖಂಡಿತ ನೆನಪಾಗೋದು ಒಂದೇ ಮಾತು; ಕುಡಿಯುವ ಮತ್ತೇ ಗಮ್ಮತ್ತು.  ಅಳತೆ ಮೀರಿದರೇ ಆಪತ್ತು.

Published On - 12:28 pm, Wed, 10 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ