AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ತಂತಿ ತುಂಡಾಗಿರುವ ಹಿನ್ನೆಲೆ, ಚೆನ್ನೈ-ಬೆಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತ

ವಿದ್ಯುತ್ ತಂತಿ ತುಂಡಾಗಿರುವ ಹಿನ್ನೆಲೆ ಚೆನ್ನೈ-ಬೆಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿವಾಗಿದೆ. ಜಿಲ್ಲೆಯ ಮಾಲೂರು ತಾಲೂಕಿನ ಬ್ಯಾಟರಾಯನಹಳ್ಳಿ ಬ್ಯಾಟರಾಯನಹಳ್ಳಿ ಬಳಿ ವಿದ್ಯುತ್ ಲೈನ್​ ತುಂಡಾಗಿ ಬಿದ್ದಿದೆ.

ವಿದ್ಯುತ್ ತಂತಿ ತುಂಡಾಗಿರುವ ಹಿನ್ನೆಲೆ, ಚೆನ್ನೈ-ಬೆಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Feb 22, 2023 | 6:42 PM

Share

ಕೋಲಾರ: ವಿದ್ಯುತ್ ತಂತಿ ತುಂಡಾಗಿರುವ ಹಿನ್ನೆಲೆ ಚೆನ್ನೈ-ಬೆಂಗಳೂರು ಮಾರ್ಗದ ರೈಲು (train) ಗಳ ಸಂಚಾರ ಸ್ಥಗಿತವಾಗಿದೆ. ಜಿಲ್ಲೆಯ ಮಾಲೂರು ತಾಲೂಕಿನ ಬ್ಯಾಟರಾಯನಹಳ್ಳಿ ಬ್ಯಾಟರಾಯನಹಳ್ಳಿ ಬಳಿ ವಿದ್ಯುತ್ ಲೈನ್​ ತುಂಡಾಗಿ ಬಿದ್ದಿದೆ.​ ದುರಸ್ತಿ ಕಾರ್ಯ ನಡೆಯುತ್ತಿರುವ ಹಿನ್ನೆಲೆ ಸುಮಾರು 8ಕ್ಕೂ ಹೆಚ್ಚು ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಪ್ರಮುಖವಾಗಿ ಮಾರಿಕುಪ್ಪಂ ಬೆಂಗಳೂರು, ಬೆಂಗಳೂರು ಮೈಸೂರು ತಿರುಪತಿ, ಬೆಂಗಳೂರು ಚೆನೈ, ಜೋಲಾರ್​ಪೇಟ್​ ಬೆಂಗಳೂರು, ಸೇರಿದಂತೆ ಸುಮಾರು ಎಂಟು ರೈಲುಗಳ ಸಂಚಾರ ಸ್ಥಗಿತವಾಗಿದೆ ಎಂದು ರೈಲ್ವೆ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.

ಜಿಲ್ಲೆಯ ಮಾಲೂರು ತಾಲ್ಲೂಕು ಬ್ಯಾಟರಾಯನಹಳ್ಳಿ ಬಳಿ ವಿದ್ಯುತ್​ ರೈಲು ತುಂಟಾಗಿ ಬಿದ್ದಿದೆ. ಮಧ್ಯಾಹ್ನ ಸುಮಾರಿಗೆ ವಿದ್ಯುತ್​ ಲೈನ್​ ತುಂಡಾಗಿರುವ ಕುರಿತು ಮಾಹಿತಿ ಸಿಕ್ಕ ತಕ್ಷಣ ಬಂಗಾರಪೇಟೆ ಹಾಗೂ ಕಂಟ್ರೋನ್​ಮೆಂಟ್​ ರೈಲ್ವೇ ಸಿಬ್ಬಂದಿಗಳು ಕೂಡಲೇ ಸ್ಥಳಕ್ಕೆ ಬಂದು ವಿದ್ಯುತ್​ ಸಂಪರ್ಕ ಕಡಿತಗೊಳಿಸಿ, ಆಗಬಹುದಾದ ಅನಾಹುತವನ್ನು ತಪ್ಪಿಸಿದ್ದಾರೆ.

ಇದನ್ನೂ ಓದಿ: ನಿಯಮ ಉಲ್ಲಂಘಿಸಿ ಪ್ರಯಾಣಿಸುತ್ತಿದ್ದವರಿಗೆ ಶಾಕ್: ಒಂದೇ ತಿಂಗಳಲ್ಲಿ 7 ಲಕ್ಷ ರೂ. ದಂಡ ಸಂಗ್ರಹಿಸಿದ BMTC

ಜೊತೆಗೆ ತಕ್ಷಣವೇ ದುರಸ್ಥಿ ಕಾರ್ಯ ಆರಂಭ ಮಾಡಿದ್ದು ಸತತವಾಗಿ ನಾಲ್ಕು ಗಂಟೆಗಳಿಂದಲೂ ದುರಸ್ಥಿ ಕಾರ್ಯ ನಡೆಯುತ್ತಿದೆ. ಇನ್ನು ಕೆಲವೇ ಗಂಟೆಗಳಲ್ಲಿ ದುರಸ್ಥಿ ಕಾರ್ಯ ಪೂರ್ಣಗೊಳ್ಳಲಿದ್ದು, ರಾತ್ರಿ ಅಥವಾ ಮುಂಜಾನೆ ವೇಳೆಗೆ ಈ ಮಾರ್ಗದಲ್ಲಿ ಎಂದಿನಂತೆ ರೈಲು ಸಂಚಾರ ಆರಂಭವಾಗುವ ಸಾಧ್ಯತೆ ಇದೆ ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ.

ಬಿಎಂಟಿಸಿ ಪ್ರಯಾಣಿಕರಿಗೆ ಬಿಗ್​​ ಶಾಕ್​

ಬೆಂಗಳೂರು: ಇತ್ತೀಚೆಗೆ ಹೆಚ್ಚುತ್ತಿರುವ ಇಂಧನ ಬೆಲೆಯ ಹಿನ್ನಲೆ, ಮಾಸಿಕ ಪಾಸ್, ದಿನದ ಪಾಸ್ ಹಾಗೂ ದಿನದ ಟಿಕೆಟ್ ದರವನ್ನ ಹೆಚ್ಚಿಸುವ ಮೂಲಕ ಬಿಎಂಟಿಸಿ ಪ್ರಯಾಣಿಕರಿಗೆ ಶಾಕ್​ ನೀಡಿತ್ತು. ಆದರೆ ಈಗ ನಿಯಮ ಉಲ್ಲಂಘಿಸಿದ ಪ್ರಯಾಣಿಕರಿಂದ ದಂಡ ವಸೂಲಿ ಮಾಡುವ ಮೂಲಕ ಮತ್ತೆ ಶಾಕ್​ ನೀಡಿದೆ. ಬಿಎಂಟಿಸಿ ಬಸ್​ನಲ್ಲಿ ಟಿಕೆಟ್ ರಹಿತ 3,591 ಪ್ರಯಾಣಿಕರು ಪತ್ತೆಯಾಗಿದ್ದು, 16,226 ಟ್ರಿಪ್​ ತಪಾಸಣೆ ನಡೆಸಿ 6,77,190 ರೂ. ದಂಡ ವಸೂಲಿ ಮಾಡಲಾಗಿದೆ. ಜನವರಿ ತಿಂಗಳಲ್ಲಿ ಒಟ್ಟು 7,09,390 ರೂಪಾಯಿ ದಂಡ ವಸೂಲಿ ಮಾಡಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ ಧಾರವಾಡ: ಅಗ್ನಿಕುಂಡಗಳಂತಾದ ಬಿ.ಆರ್.ಟಿ.ಎಸ್ ಬಸ್; ಉಸಿರಾಡೋದೆ ಕಷ್ಟ ಅಂತೀರೋ ಪ್ರಯಾಣಿಕರು

ಮೋಟಾರು ವಾಹನ ಕಾಯ್ದೆ 1988ರ ಕಾಲಂ 177 ಮತ್ತು 94ರ ಪ್ರಕಾರ ದಂಡ ವಸೂಲಿ ಮಾಡಲಾಗಿದೆ. ಜೊತೆಗೆ BMTC ಬಸ್ ನಿರ್ವಾಹಕರ ವಿರುದ್ಧ 1521 ಕೇಸ್ ದಾಖಲು ಮಾಡಲಾಗಿದೆ. ಮಹಿಳೆಯರಿಗೆ ಮೀಸಲಿರುವ ಸೀಟ್​ನಲ್ಲಿ ಪುರುಷರ ಪ್ರಯಾಣ ಹಿನ್ನೆಲೆ 322 ಪುರುಷ ಪ್ರಯಾಣಿಕರಿಂದ 32,200 ರೂ. ದಂಡ ವಸೂಲಿ ಮಾಡುವ ಮೂಲಕ ಬಿಎಂಟಿಸಿ ಪ್ರಯಾಣಿಕರಿಗೆ ಬಿಗ್​ ಶಾಕ್ ನೀಡಿದೆ.​ ಇನ್ಮುಂದೆ ಮಹಿಳಾ ಆಸನಗಳಲ್ಲಿ ಕುಳಿತು ಪ್ರಯಾಣಿಸದಿರಲು ಸೂಚನೆ ಕೂಡ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:15 pm, Wed, 22 February 23

Follow Us
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ