AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ‘ಸಲಗ’ ಚಿತ್ರ ಯಶಸ್ವಿಯಾದ ಹಿನ್ನೆಲೆ; ಮಂಡಿಯೂರಿ ಮೆಟ್ಟಿಲು ಹತ್ತಿ ಹರಕೆ ತೀರಿಸಿದ ಅಭಿಮಾನಿಗಳು

Duniya Vijay: ಸಲಗ ಸಿನಿಮಾ ಯಶಸ್ವಿಯಾದ ಬೆನ್ನಲ್ಲೇ ಕೋಲಾರದಲ್ಲಿ ದುನಿಯಾ ವಿಜಯ್ ಅಭಿಮಾನಿಗಳು ತಾವು ಹೇಳಿಕೊಂಡಿದ್ದ ಹರಕೆಯನ್ನು ಪೂರೈಸಿದ್ದಾರೆ. ಈ ಕುರಿತು ಕುತೂಹಲಕರ ಸುದ್ದಿ ಇಲ್ಲಿದೆ.

ಕೋಲಾರ: ‘ಸಲಗ’ ಚಿತ್ರ ಯಶಸ್ವಿಯಾದ ಹಿನ್ನೆಲೆ; ಮಂಡಿಯೂರಿ ಮೆಟ್ಟಿಲು ಹತ್ತಿ ಹರಕೆ ತೀರಿಸಿದ ಅಭಿಮಾನಿಗಳು
‘ಸಲಗ’ ಚಿತ್ರದಲ್ಲಿ ದುನಿಯಾ ವಿಜಯ್
TV9 Web
| Edited By: |

Updated on: Oct 17, 2021 | 6:01 PM

Share

ಕೋಲಾರ: ಸಲಗ ಸಿನಿಮಾ ಯಶಸ್ವಿಯಾದ ಹಿನ್ನೆಲೆಯಲ್ಲಿ ದುನಿಯಾ ವಿಜಯ್ ಅಭಿಮಾನಿಗಳು ವಿಶೇಷ ರೀತಿಯಲ್ಲಿ ಹರಕೆ ತೀರಿಸಿದ್ದಾರೆ. ಕೋಲಾರ ಜಿಲ್ಲೆಯ ಅಂತರಗಂಗೆ ಬೆಟ್ಟದಲ್ಲಿ ಮಂಡಿಯೂರಿ ಮೆಟ್ಟಿಲು ಹತ್ತಿ, ಅಭಿಮಾನಿಗಳು ಹರಕೆ ತೀರಿಸಿದ್ದಾರೆ. ಈ ಹಿಂದೆ ಅಭಿಮಾನಿಗಳು ಸಲಗ ಚಿತ್ರವು ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣಲಿ ಎಂದು ಹರಕೆ ಹೊತ್ತಿದ್ದರು. ಅದರಂತೆ ದುನಿಯಾ ವಿಜಯ್ ಅಭಿಮಾನಿಗಳಾದ ಮಂಜುನಾಥ್ ಹಾಗೂ ಅವರ ಸ್ನೇಹಿತರು ಮಂಡಿಯೂರಿ ಮೆಟ್ಟಿಲು ಹತ್ತಿ ಹರಕೆ ತೀರಿಸಿದ್ದಾರೆ.

ಸಲಗ ಚಿತ್ರ ದುನಿಯಾ ವಿಜಯ್ ನಿರ್ದೇಶನದ ಮೊದಲ ಚಿತ್ರವಾಗಿದ್ದು, ಅವರು ಮುಖ್ಯಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಯಶಸ್ಸು ಅವರ ವೃತ್ತಿ ಜೀವನಕ್ಕೆ ಬಹಳ ಮುಖ್ಯವಾಗಿತ್ತು. ಬಿಡುಗಡೆಗೂ ಮೊದಲೇ ಹಾಡುಗಳು ಹಾಗೂ ಟ್ರೈಲರ್ ಮುಖಾಂತರ ಚಿತ್ರವು ನಿರೀಕ್ಷೆ ಹುಟ್ಟುಹಾಕಿತ್ತು. ಆ ನಿರೀಕ್ಷೆಯಂತೆಯೇ ಸಲಗವೂ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಮಾಸ್ ಸಿನಿಮಾ ಇಷ್ಟಪಡುವ ವೀಕ್ಷಕರಿಗೆ ಸಲಗ ಬಹಳ ಹಿಡಿಸಿತ್ತು. ಇತ್ತೀಚೆಗೆ ಚಿತ್ರತಂಡ ಸುದ್ದಿಗೋಷ್ಠಿ ಕರೆದು ಚಿತ್ರದ ಯಶಸ್ಸಿನ ಕುರಿತು ಸಂತಸ ಹಂಚಿಕೊಂಡಿತ್ತು.

‘ಸಲಗ’ ಚಿತ್ರದಲ್ಲಿ ಖ್ಯಾತ ಕಲಾವಿದರ ದಂಡೇ ಇದ್ದು, ಡಾಲಿ ಧನಂಜಯ್, ಶ್ರೀಧರ್ ಸೇರಿದಂತೆ ಹಲವರು ಬಣ್ಣ ಹಚ್ಚಿದ್ದಾರೆ. ನಾಯಕಿಯಾಗಿ ಸಂಜನಾ ಆನಂದ್ ಕಾಣಿಸಿಕೊಂಡಿದ್ದಾರೆ. ಚರ್ಣ್ ರಾಜ್ ಸಂಗೀತ ನೀಡಿದ್ದು, ಶಿವ ಸೇನಾ ಛಾಯಾಗ್ರಹಣ ಮಾಡಿದ್ದಾರೆ.

ಇದನ್ನೂ ಓದಿ:

Salaga: ನಿರೀಕ್ಷೆಗೂ ಮೀರಿ ‘ಸಲಗ’ ಸಕ್ಸಸ್​; ಹಾಗಾದ್ರೆ ಈವರೆಗಿನ ಕಲೆಕ್ಷನ್​ ಲೆಕ್ಕ ಹೇಳೋರು ಯಾರು?

Salaga Movie Review: ‘ಸಲಗ’ ತುಂಬಾ ರಗಡ್​ ಆಗಿದೆ ಎಚ್ಚರಿಕೆ! ದುನಿಯಾ ವಿಜಯ್​ಗೆ ಮಾಸ್​ ಪ್ರೇಕ್ಷಕರೇ ಟಾರ್ಗೆಟ್​

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?