AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಮಯ ಹಾಗೂ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶನ ಮೂರ್ತಿ; ಗೋಫಲ ಟ್ರಸ್ಟ್​ನಿಂದ ಮಾರುಕಟ್ಟೆಗೆ ಬಿಡುಗಡೆ

Ganesha Chaturthi 2021: ಗೋಮಯ ಹಾಗೂ ಆವೆ ಮಣ್ಣಿನಿಂದ ಮಾಡುವ ಗಣೇಶ ಮೂರ್ತಿ ತಯಾರಿಕೆಗೆ ಯಾವುದೇ ರಾಸಾಯನಿಕ, ಬಣ್ಣ, ಅಂಟು ಉಪಯೋಗಿಸುವುದಿಲ್ಲ.

ಗೋಮಯ ಹಾಗೂ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶನ ಮೂರ್ತಿ; ಗೋಫಲ ಟ್ರಸ್ಟ್​ನಿಂದ ಮಾರುಕಟ್ಟೆಗೆ ಬಿಡುಗಡೆ
ಗೋಮಯ ಹಾಗೂ ಮಣ್ಣನಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶ ಮೂರ್ತಿ
TV9 Web
| Edited By: |

Updated on:Sep 09, 2021 | 2:16 PM

Share

ಇತ್ತೀಚಿನ ದಿನಗಳಲ್ಲಿ ಕೊರೊನಾ ಆತಂಕದ ನಡುವೆ ಪರಿಸರದ ಮೇಲಿನ‌ ಕಾಳಜಿ ಕೂಡಾ ಜನರಿಗೆ ಹೆಚ್ಚಾಗಿದೆ ಈ ನಿಟ್ಟಿನಲ್ಲಿ ಜನರ ಮಸ್ಥಿತಿಗೆ ತಕ್ಕಂತೆ, ಪರಿಸರ ಸ್ನೇಹಿಯಾಗಿ ಹಾಗೂ ಆಧ್ಯಾತ್ಮಿಕವಾಗಿ ಹಬ್ಬ ಆಚರಣೆ ಮಾಡಲು ದೇಸೀ ಹಾಗೂ ಪರಿಸರ ಸ್ನೇಹಿ ಗಣೇಶ ಸಿದ್ದವಾಗಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಗಂಗಾಪುರದ ಶ್ರೀ ರಾಘವೇಂದ್ರ ಗೋ ಆಶ್ರಮದಲ್ಲಿ ಸುಮಾರು ಮೂರು ಸಾವಿರ ಗಣೇಶ ಮೂರ್ತಿಗಳ‌ ತಯಾರಿ ಮಾಡಲಾಗಿದೆ. ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ ಆರಂಭವಾದ ಗೋಫಲ ಟ್ರಸ್ಟ್ ಈ ಪರಿಸರಸ್ನೇಹಿ ಗಣೇಶನ ಮೂರ್ತಿಯನ್ನು ಯೋಜಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

ಗೋಮಯ (ಹಸುವಿನ ಸೆಗಣಿ) ಹಾಗೂ ಆವೆ ಮಣ್ಣಿನಿಂದ ಮಾಡುವ ಗಣೇಶ ಮೂರ್ತಿ ತಯಾರಿಕೆಗೆ ಯಾವುದೇ ರಾಸಾಯನಿಕ, ಬಣ್ಣ, ಅಂಟು ಉಪಯೋಗಿಸುವುದಿಲ್ಲ. ಇನ್ನು, ಎರಡನೇ ಬಾರಿಗೆ ಈ ರೀತಿಯ ಗಣೇಶ ಮೂರ್ತಿಯನ್ನು ರಾಮಚಂದ್ರಾಪುರ ಮಠದ ಆಶ್ರಯದಲ್ಲಿ ತಯಾರು ಮಾಡಲಾಗುತ್ತಿದೆ.

Ganesha Statue

ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ಪೂಜೆ

ಇಲ್ಲಿ ತಯಾರು ಮಾಡುವ ಗಣೇಶ ಮಾತ್ರವಲ್ಲ, ಅದರ ಪ್ಯಾಕಿಂಗ್​ಗೆ ಉಪಯೋಗಿಸಿದ ವಸ್ತುಗಳು ಕೂಡಾ ರಾಸಾಯನಿಕ ಹಾಗೂ ಮಾಲಿನ್ಯ ರಹಿತವಾಗಿದೆ. ಜತೆಗೆ ಗಣೇಶನ ಪೂಜೆಯ ನಂತರ ಪಾತ್ರೆಯ ನೀರಿನಲ್ಲಿ ಗಣೇಶ ಮೂರ್ತಿಯನ್ನು ಮುಳುಗಿಸಬಹುದು ನಂತರ ನೀರಿನಲ್ಲಿ ಕರಗಿದ ಗಣೇಶ ಮೂರ್ತಿಯನ್ನು ಗಿಡಗಳಿಗೆ ಗೊಬ್ಬರವಾಗಿ ಬಳಕೆ‌ಮಾಡಬಹುದು.

ಗಣೇಶ ಮೂರ್ತಿಯ ಜೊತೆಗೆ ಪೂಜಾ ವಿಧಾನದ ಕೈಪಿಡಿ ಗಣೇಶ ಮೂರ್ತಿಯ ಜೊತೆಗೆ ಭಕ್ತರು ಸುಲಭವಾಗಿ ಪೂಜೆ ಮಾಡಲು ಅನುಕೂಲವಾಗುವಂತೆ ಮಂತ್ರ ಸಹಿತ ಪೂಜಾ ವಿಧಿವಿಧಾನಗಳನ್ನು ತಿಳಿಸುವ ಕರಪತ್ರ ಅಥವಾ ಕೈಪಿಡಿಯನ್ನು ನೀಡಲಾಗುತ್ತದೆ. ಸದ್ಯ ರಿಯಾಯಿತಿ ದರದಲ್ಲಿ ಗಣೇಶ ಮೂರ್ತಿಗಳನ್ನು ಅದರ ಅಳತೆಗೆ ತಕ್ಕಂತೆ ದರ ನಿಗದಿ ಮಾಡಿ ಮಾರಾಟ ಮಾಡಲಾಗುತ್ತಿದೆ.

(ವರದಿ: ರಾಜೇಂದ್ರಸಿಂಹ)

ಇದನ್ನೂ ಓದಿ:

Ganesh Chaturthi 2021: ಗಣೇಶ ಚತುರ್ಥಿಗೆ ಗಣಪತಿಯನ್ನು ಸಿಂಗರಿಸಲು ಇಲ್ಲಿದೆ ಸರಳ ಉಪಾಯ

Ganesha Chaturthi 2021: ಗಣೇಶ ಚತುರ್ಥಿ ಆಚರಣೆಯ ಪೂಜಾ ವಿಧಾನ ಮತ್ತು ಶುಭ ಮುಹೂರ್ತ

Published On - 2:10 pm, Thu, 9 September 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ