AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋಮಯ ಹಾಗೂ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶನ ಮೂರ್ತಿ; ಗೋಫಲ ಟ್ರಸ್ಟ್​ನಿಂದ ಮಾರುಕಟ್ಟೆಗೆ ಬಿಡುಗಡೆ

Ganesha Chaturthi 2021: ಗೋಮಯ ಹಾಗೂ ಆವೆ ಮಣ್ಣಿನಿಂದ ಮಾಡುವ ಗಣೇಶ ಮೂರ್ತಿ ತಯಾರಿಕೆಗೆ ಯಾವುದೇ ರಾಸಾಯನಿಕ, ಬಣ್ಣ, ಅಂಟು ಉಪಯೋಗಿಸುವುದಿಲ್ಲ.

ಗೋಮಯ ಹಾಗೂ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶನ ಮೂರ್ತಿ; ಗೋಫಲ ಟ್ರಸ್ಟ್​ನಿಂದ ಮಾರುಕಟ್ಟೆಗೆ ಬಿಡುಗಡೆ
ಗೋಮಯ ಹಾಗೂ ಮಣ್ಣನಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶ ಮೂರ್ತಿ
TV9 Web
| Edited By: |

Updated on:Sep 09, 2021 | 2:16 PM

Share

ಇತ್ತೀಚಿನ ದಿನಗಳಲ್ಲಿ ಕೊರೊನಾ ಆತಂಕದ ನಡುವೆ ಪರಿಸರದ ಮೇಲಿನ‌ ಕಾಳಜಿ ಕೂಡಾ ಜನರಿಗೆ ಹೆಚ್ಚಾಗಿದೆ ಈ ನಿಟ್ಟಿನಲ್ಲಿ ಜನರ ಮಸ್ಥಿತಿಗೆ ತಕ್ಕಂತೆ, ಪರಿಸರ ಸ್ನೇಹಿಯಾಗಿ ಹಾಗೂ ಆಧ್ಯಾತ್ಮಿಕವಾಗಿ ಹಬ್ಬ ಆಚರಣೆ ಮಾಡಲು ದೇಸೀ ಹಾಗೂ ಪರಿಸರ ಸ್ನೇಹಿ ಗಣೇಶ ಸಿದ್ದವಾಗಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಗಂಗಾಪುರದ ಶ್ರೀ ರಾಘವೇಂದ್ರ ಗೋ ಆಶ್ರಮದಲ್ಲಿ ಸುಮಾರು ಮೂರು ಸಾವಿರ ಗಣೇಶ ಮೂರ್ತಿಗಳ‌ ತಯಾರಿ ಮಾಡಲಾಗಿದೆ. ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ ಆರಂಭವಾದ ಗೋಫಲ ಟ್ರಸ್ಟ್ ಈ ಪರಿಸರಸ್ನೇಹಿ ಗಣೇಶನ ಮೂರ್ತಿಯನ್ನು ಯೋಜಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

ಗೋಮಯ (ಹಸುವಿನ ಸೆಗಣಿ) ಹಾಗೂ ಆವೆ ಮಣ್ಣಿನಿಂದ ಮಾಡುವ ಗಣೇಶ ಮೂರ್ತಿ ತಯಾರಿಕೆಗೆ ಯಾವುದೇ ರಾಸಾಯನಿಕ, ಬಣ್ಣ, ಅಂಟು ಉಪಯೋಗಿಸುವುದಿಲ್ಲ. ಇನ್ನು, ಎರಡನೇ ಬಾರಿಗೆ ಈ ರೀತಿಯ ಗಣೇಶ ಮೂರ್ತಿಯನ್ನು ರಾಮಚಂದ್ರಾಪುರ ಮಠದ ಆಶ್ರಯದಲ್ಲಿ ತಯಾರು ಮಾಡಲಾಗುತ್ತಿದೆ.

Ganesha Statue

ಗಣೇಶ ಚತುರ್ಥಿ ಪ್ರಯುಕ್ತ ವಿಶೇಷ ಪೂಜೆ

ಇಲ್ಲಿ ತಯಾರು ಮಾಡುವ ಗಣೇಶ ಮಾತ್ರವಲ್ಲ, ಅದರ ಪ್ಯಾಕಿಂಗ್​ಗೆ ಉಪಯೋಗಿಸಿದ ವಸ್ತುಗಳು ಕೂಡಾ ರಾಸಾಯನಿಕ ಹಾಗೂ ಮಾಲಿನ್ಯ ರಹಿತವಾಗಿದೆ. ಜತೆಗೆ ಗಣೇಶನ ಪೂಜೆಯ ನಂತರ ಪಾತ್ರೆಯ ನೀರಿನಲ್ಲಿ ಗಣೇಶ ಮೂರ್ತಿಯನ್ನು ಮುಳುಗಿಸಬಹುದು ನಂತರ ನೀರಿನಲ್ಲಿ ಕರಗಿದ ಗಣೇಶ ಮೂರ್ತಿಯನ್ನು ಗಿಡಗಳಿಗೆ ಗೊಬ್ಬರವಾಗಿ ಬಳಕೆ‌ಮಾಡಬಹುದು.

ಗಣೇಶ ಮೂರ್ತಿಯ ಜೊತೆಗೆ ಪೂಜಾ ವಿಧಾನದ ಕೈಪಿಡಿ ಗಣೇಶ ಮೂರ್ತಿಯ ಜೊತೆಗೆ ಭಕ್ತರು ಸುಲಭವಾಗಿ ಪೂಜೆ ಮಾಡಲು ಅನುಕೂಲವಾಗುವಂತೆ ಮಂತ್ರ ಸಹಿತ ಪೂಜಾ ವಿಧಿವಿಧಾನಗಳನ್ನು ತಿಳಿಸುವ ಕರಪತ್ರ ಅಥವಾ ಕೈಪಿಡಿಯನ್ನು ನೀಡಲಾಗುತ್ತದೆ. ಸದ್ಯ ರಿಯಾಯಿತಿ ದರದಲ್ಲಿ ಗಣೇಶ ಮೂರ್ತಿಗಳನ್ನು ಅದರ ಅಳತೆಗೆ ತಕ್ಕಂತೆ ದರ ನಿಗದಿ ಮಾಡಿ ಮಾರಾಟ ಮಾಡಲಾಗುತ್ತಿದೆ.

(ವರದಿ: ರಾಜೇಂದ್ರಸಿಂಹ)

ಇದನ್ನೂ ಓದಿ:

Ganesh Chaturthi 2021: ಗಣೇಶ ಚತುರ್ಥಿಗೆ ಗಣಪತಿಯನ್ನು ಸಿಂಗರಿಸಲು ಇಲ್ಲಿದೆ ಸರಳ ಉಪಾಯ

Ganesha Chaturthi 2021: ಗಣೇಶ ಚತುರ್ಥಿ ಆಚರಣೆಯ ಪೂಜಾ ವಿಧಾನ ಮತ್ತು ಶುಭ ಮುಹೂರ್ತ

Published On - 2:10 pm, Thu, 9 September 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!