AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಶಾಸಕ ನಂಜೇಗೌಡಗೆ ಬಿಗ್ ಶಾಕ್: ಆಸ್ತಿ ಮುಟ್ಟುಗೋಲು ಹಾಕಿಕೊಂಡ ಇಡಿ

ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ನಂಜೇಗೌಡಗೆ (K.Y Nanjegowda) ಸೇರಿದ ಆಸ್ತಿಯನ್ನು ಇಡಿ ಜಪ್ತಿ ಮಾಡಿದೆ. ಕೋಲಾರ ಹಾಲು ಒಕ್ಕೂಟದ (ಕೋಮುಲ್‌) ನೇಮಕಾತಿ ಹಗರಣ ಸಂಬಂಧ ಇಡಿ ದಾಳಿ ನಡೆಸಿದ್ದು, 2023ರಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಈ ಬಗ್ಗೆ ಇಡಿ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಕಾಂಗ್ರೆಸ್ ಶಾಸಕ ನಂಜೇಗೌಡಗೆ ಬಿಗ್ ಶಾಕ್: ಆಸ್ತಿ ಮುಟ್ಟುಗೋಲು ಹಾಕಿಕೊಂಡ ಇಡಿ
Ky Nanjegowda
TV9 Web
| Edited By: |

Updated on: Jul 17, 2025 | 7:27 PM

Share

ಬೆಂಗಳೂರು, (ಜುಲೈ 17): ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡ (K.Y Nanjegowda) ಅವರ ಆಸ್ತಿಯನ್ನು ಇ.ಡಿ (ED) ಮುಟ್ಟುಗೋಲು ಹಾಕಿಕೊಂಡಿದೆ. ಕೆ.ವೈ.ನಂಜೇಗೌಡ ಹಾಗೂ ಇತರರಿಗೆ ಸೇರಿದ ಒಟ್ಟು 1.32 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ ಮಾಡಿದೆ. 2023ರಲ್ಲಿ ಕೋಮುಲ್ ನೇಮಕಾತಿ ಹಗರಣ ಸಂಬಂಧ 1.32 ಕೋಟಿ ರೂ. ಮೌಲ್ಯದ ಸ್ಥಿರ-ಚರಾಸ್ತಿಯನ್ನು ಜಪ್ತಿ ಮಾಡಿದೆ. ಈ ಬಗ್ಗೆ ಇಡಿ ಎಕ್ಸ್​​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

2023ರ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಸಹಕಾರ ಹಾಲು ಉತ್ಪಾದಕರ ಒಕ್ಕೂಟ ಲಿಮಿಟೆಡ್ (KOMUL) ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ (money laundering) ಪ್ರಕರಣಕ್ಕೆ ಸಂಬಂಧಪಟ್ಟಿದ್ದು, ಜುಲೈ 16, 2025ರಂದು ಅಧಿಕೃತವಾಗಿ ಈ ಮೌಲ್ಯದ ಆಸ್ತಿಯನ್ನು ಜಪ್ತಿಗೊಳಿಸಲಾಗಿದೆ ಎಂದು ED ಅಧಿಕೃತ ಎಕ್ಸ್​ ಖಾತೆಯಲ್ಲಿ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಕೋಲಾರ ಹಾಲು ಒಕ್ಕೂಟ ಚುನಾವಣೆ: ಮೂರನೇ ಬಾರಿಗೆ ಅಧ್ಯಕ್ಷರಾದ ಕೆವೈ ನಂಜೇಗೌಡ

ಕೋಮುಲ್‌ ನೇಮಕಾತಿಯಲ್ಲಿ ಹಗರಣ ಸಂಬಂಧ ಸುಮಾರು 75 ಅಭ್ಯರ್ಥಿಗಳಿಂದ ಹಣ ಪಡೆದಿದ್ದಾರೆ. ಮಂಗಳೂರು ಯೂನಿವರ್ಸಿಟಿಯ ಸಿಬ್ಬಂದಿ ಜೊತೆಗೆ ಅವ್ಯಹಾರ ಮಾಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಪ್ರತಿಯೊಬ್ಬ ಅಭ್ಯರ್ಥಿಗೂ ಕೂಡ ರಾಜಕಾರಣಿಗಳ ಶಿಫಾರಸು ಪತ್ರ ನೀಡಲಾಗಿತ್ತು. ಇ.ಡಿ ದಾಳಿ ವೇಳೆ ಶಿಫಾರಸು ಪತ್ರ ಸಮೇತ ದಾಖಲಾತಿಗಳನ್ನು ವಶಪಡಿಸಿಕೊಂಡಿದ್ದರು. ಅಲ್ಲದೇ ಅಕ್ರಮ ಹಣ ವರ್ಗಾವಣೆ ಹಿನ್ನೆಲೆಯಲ್ಲಿ ನಂಜೇಗೌಡ ಮನೆ ಮೇಲೆ ಇಡಿ ದಾಳಿ ಮಾಡಿತ್ತು.

ಕೋಮುಲ್ ಒಕ್ಕೂಟದ 13 ನಿರ್ದೇಶಕರ ಸ್ಥಾನಗಳಿಗೆ ಇತ್ತೀಚೆಗೆ ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 9 ಮಂದಿ ಜಯ ಸಾಧಿಸುವುದರೊಂದಿಗೆ ಕೋಮುಲ್‌ ಕಾಂಗ್ರೆಸ್‌ ವಶವಾಗಿತ್ತು. ಜೆಡಿಎಸ್‌ – ಬಿಜೆಪಿ ಮೈತ್ರಿಕೂಟದ 4 ಜನ ನಿರ್ದೇಶಕರು ಮಾತ್ರ ಗೆದ್ದಿದ್ದರು. ಇನ್ನು ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ (ಕೋಮುಲ್‌) ಅಧ್ಯಕ್ಷರಾಗಿ ಕಾಂಗ್ರೆಸ್‌ ಶಾಸಕ ಮಾಲೂರಿನ ಕೆ.ವೈ. ನಂಜೇಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಸತತ ಮೂರನೇ ಬಾರಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದು, ಕೆಎಂಎಫ್​ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​