AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರದಲ್ಲೂ ಹರಿಯುತಿದೆ ಹಾಲಿನ ಹೊಳೆ: ಕೃಪೆ-ಮಾರ್ಗದರ್ಶನ ಕೋಲಾರ ಜಿಲ್ಲಾಡಳಿತ ಹಾಗೂ ಹಾಲು ಒಕ್ಕೂಟ

Kolar Milk production: ಕೋಲಾರದಲ್ಲಿ ರೈತರಿಗೆ ಮಳೆ ಬೆಳೆ ಕೈ ಕೊಟ್ಟರೂ ಹೈನೋದ್ಯಮ ಸದ್ಯಕ್ಕೆ ರೈತರ ಕೈ ಹಿಡಿದಿದೆ. ಅದರ ಜೊತೆಗೆ ರೈತರ ಶ್ರಮದ ಪರಿಣಾಮ ಕೋಲಾರದಲ್ಲಿ ಬರಗಾಲದಲ್ಲೂ ಹಾಲಿನ ಹೊಳೆ ಹರಿಯುತ್ತಿದೆ. ಹಾಗಾಗಿ ಇದು ರೈತರಿಗಷ್ಟೇ ಅಲ್ಲಾ ಕೋಲಾರ ಹಾಲು ಒಕ್ಕೂಟಕ್ಕೂ ಕೂಡಾ ಸಹಕಾರಿಯಾಗಿದೆ ಅನ್ನೋದರಲ್ಲಿ ಎರಡು ಮಾತಿಲ್ಲ.

ಬರದಲ್ಲೂ ಹರಿಯುತಿದೆ ಹಾಲಿನ ಹೊಳೆ: ಕೃಪೆ-ಮಾರ್ಗದರ್ಶನ ಕೋಲಾರ ಜಿಲ್ಲಾಡಳಿತ ಹಾಗೂ ಹಾಲು ಒಕ್ಕೂಟ
ಬರದಲ್ಲೂ ಹರಿಯುತಿದೆ ಹಾಲಿನ ಹೊಳೆ: ಕೃಪೆ ಕೋಲಾರ ಜಿಲ್ಲಾಡಳಿತ- ಹಾಲು ಒಕ್ಕೂಟ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Feb 08, 2024 | 10:51 AM

Share

ಅದು ಹೇಳಿಕೇಳಿ ಬರದ ನಾಡು ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ಜಿಲ್ಲೆ, ಅದರಲ್ಲೂ ದುರಾದೃಷ್ಟ ಎಂಬಂತೆ ಈ ವರ್ಷ ಜಿಲ್ಲೆಯಲ್ಲಿ ಸಂಪೂರ್ಣ ಬರಗಾಲ ಆವರಿಸಿದೆ. ಇಂಥ ದಾರುಣ ಪರಿಸ್ಥಿತಿಯಲ್ಲಿಯೂ ಜಿಲ್ಲೆಯ ಹೈನೋದ್ಯಮ ರೈತರ ಕೈಹಿಡಿದೆ. ಜೊತೆಗೆ ಹೈನೋದ್ಯಮ (Milk production) ಬರಗಾಲದಲ್ಲೂ (drought) ಹೆಚ್ಚಿನ ಹಾಲು ಉತ್ಪಾದನೆ ಮಾಡುವ ಮೂಲಕ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟವನ್ನು (Kolar Milk Federation) ರಕ್ಷಣೆ ಮಾಡಿದೆ.

ಹೌದು ಕೋಲಾರ ಜಿಲ್ಲೆ ಅಂದರೆ ಸದಾ ಬರಗಾಲದ ಹಣೆಪಟ್ಟಿ ಕಟ್ಟಿಕೊಳ್ಳುವ ಜಿಲ್ಲೆ. ಕೋಲಾರದಲ್ಲಿ ನದಿ ನಾಲೆಗಳಿಲ್ಲದೆ ಹೋದರು ಸವಾಲಿನ ಕೃಷಿ ಮಾಡಿ ಬದುಕುವ ಕೋಲಾರ ಜಿಲ್ಲೆಯ ರೈತರದು ಕೃಷಿಯ ಜೊತೆಗೆ ಹೈನುಗಾರಿಕೆ ಮುಖ್ಯ ಕಸುಬಾಗಿದೆ. ಪರಿಣಾಮವಾಗಿ ಈ ವರ್ಷ ಕೋಲಾರ ಜಿಲ್ಲೆಯ ಆರು ತಾಲ್ಲೂಕುಗಳಲ್ಲೂ ಸರಿಯಾದ ಮಳೆಯಾಗದೆ ಸರ್ಕಾರವೇ ಬರದ ಜಿಲ್ಲೆ ಎಂದು ಘೋಷಣೆ ಮಾಡಿದೆ.

ಇಂಥ ಪರಿಸ್ಥಿತಿಯಲ್ಲೂ ಜಿಲ್ಲೆಯ ಹಾಲು ಉತ್ಪಾದಕರು ತಮ್ಮ ಶ್ರಮದ ಫಲವಾಗಿ ಹೆಚ್ಚಿನ ಹಾಲು ಉತ್ಪಾದನೆ ಮಾಡಿದ್ದಾರೆ, ಪರಿಣಾಮ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಸರಾಸರಿ ಒಂದು ಲಕ್ಷ ಲೀಟರ್ ಹಾಲು ಉತ್ಪಾದನೆಯಲ್ಲಿ ಹೆಚ್ಚಳ ಕಂಡಿದೆ. ಬರಗಾಲದಲ್ಲಿ ಹಾಲು ಉತ್ಪಾದನೆ ಕುಸಿಯುತ್ತದೆ ಎಂದು ನಿರೀಕ್ಷೆ ಮಾಡಿದ್ದ ಕೋಲಾರ ಹಾಲು ಒಕ್ಕೂಟಕ್ಕೆ ಆಶ್ಚರ್ಯ ಎನ್ನುವಂತೆ ಹಾಲು ಉತ್ಪಾದನೆಯಲ್ಲಿ ಏರಿಕೆ ಕಂಡಿದೆ ಎಂದು ಗೋಪಾಲಮೂರ್ತಿ, ವ್ಯವಸ್ಥಾಪಕ ನಿರ್ದೇಶಕ, ಕೋಚಿಮುಲ್​ ಸಂತಸ ವ್ಯಕ್ತಪಡಿಸಿದ್ದಾರೆ.

Also Read: White Paper – ಯುಪಿಐ ಮತ್ತು ಎನ್​ಡಿಎ ಅವಧಿಯಲ್ಲಿನ ಆರ್ಥಿಕ ನಿರ್ವಹಣೆ ಕುರಿತು ಕೇಂದ್ರದಿಂದ ಇಂದು ಶ್ವೇತಪತ್ರ

ಒಂದೆಡೆ ಬರದ ಹಿನ್ನೆಲೆಯಲ್ಲಿ ರೈತರು ಬೆಳೆ ಬೆಳೆಯಲಾರದ ಪರಿಸ್ಥಿತಿ ನಿರ್ಮಾಣವಾಗಿತ್ತು, ಸಮಯಕ್ಕೆ ಸರಿಯಾಗಿ ಮಳೆ ಬಾರದ ಹಿನ್ನೆಲೆ ನಿರೀಕ್ಷಿತ ಮಟ್ಟದಲ್ಲಿ ಬೆಳೆ ಬೆಳೆಯಲಾಗಲಿಲ್ಲ, ಇದರ ಪರಿಸ್ಥಿತಿ ಅರ್ಥ ಮಾಡಿಕೊಂಡ ಕೋಲಾರ ಜಿಲ್ಲಾಡಳಿತ ಹಾಗೂ ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ರೈತರಿಗೆ ಅದರಲ್ಲೂ ಹಾಲು ಉತ್ಪಾದಕರಿಗೆ ಮೇವಿನ ಬೀಜಗಳು, ಮೇವಿನ ಕಿಟ್​, ಜೊತೆಗೆ ಸಬ್ಸಿಡಿ ದರಲ್ಲಿ ಫೀಡ್ಸ್​ ವಿತರಣೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ರೈತರಿಗೆ ಮಳೆಯಿಂದ ಬರಗಾಲ ಆವರಿಸಿದರೂ ಜಾನುವಾರುಗಳ ಮೇವಿಗೆ ಕೊರತೆಯಾಗದ ರೀತಿಯಲ್ಲಿ ಪರಿಸ್ಥಿತಿಯನ್ನು ನಿರ್ವಹಣೆ ಮಾಡಲಾಯಿತು. ಪರಿಣಾಮವಾಗಿ ಬರಗಾದಲ್ಲೂ ಕೂಡಾ ಕೋಲಾರದಲ್ಲಿ ಉತ್ತಮ ಹಾಲು ಉತ್ಪಾದನೆಯಾಗಿದೆ, ಇದರಿಂದ ರೈತರೂ ಕೂಡಾ ಪುಲ್​ ಖುಷಿಯಾಗಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ