AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಂಗಿಯಾಗಿ ಹೋರಾಟಕ್ಕಿಳಿದ ರೈತ; ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಗಾಗಿ ರೈತರ ಭೂಮಿ, ಮನೆ ಪಡೆದು ಪರಿಹಾರ ನೀಡದ ಪ್ರಾಧಿಕಾರ

ಭೂಸ್ವಾಧಿನ ಪ್ರಕ್ರಿಯೆ ನಡೆಸಿದ ಹೆದ್ದಾರಿ ಪ್ರಾಧಿಕಾರ ಇಲ್ಲಿನ ಬಹುತೇಕ ರೈತರಿಗೆ ಪಕ್ಷಪಾತ ಮಾಡಿದೆ. ಒದೊಂದು ತಾಲೂಕಿನಲ್ಲಿ ಭೂಮಿಗೆ ಒಂದೊಂದು ರೀತಿ ಬೆಲೆ ನಿಗದಿ ಮಾಡಿದೆ. ಅಲ್ಲದೆ ಭೂಸ್ವಾದೀನ ನಿಯಮ ಪಾಲನೆ ಮಾಡದೆ, ರೈತರನ್ನು ಬೀದಿಗೆ ತಳ್ಳಿದೆಯಂತೆ.

ಏಕಾಂಗಿಯಾಗಿ ಹೋರಾಟಕ್ಕಿಳಿದ ರೈತ; ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಗಾಗಿ ರೈತರ ಭೂಮಿ, ಮನೆ ಪಡೆದು ಪರಿಹಾರ ನೀಡದ ಪ್ರಾಧಿಕಾರ
ರೈತ ಮುನಿಯಪ್ಪ
TV9 Web
| Edited By: |

Updated on: Feb 09, 2022 | 7:23 AM

Share

ಕೋಲಾರ: ಜಿಲ್ಲೆಯಲ್ಲಿ ರೈತನೋರ್ವ ಸರ್ಕಾರಿ ಅಧಿಕಾರಿಗಳ ವಿರುದ್ಧ ಏಕಾಂಗಿಯಾಗಿ ಹೋರಾಟಕ್ಕಿಳಿದಿದ್ದಾನೆ. ತನ್ನ ಕುಟುಂಬ ಜೀವನ ಸಾಗಿಸಲು ಇದ್ದ ಒಂದು ಆಧಾರವನ್ನು ಕಸಿದುಕೊಂಡು ಕಣ್ಣೀರು ಹಾಕಿಸುತ್ತಿದ್ದೀರಾ ಅಂತಾ ಸಿಡಿದೆದ್ದಿರುವ ರೈತ, ಸರ್ಕಾರಿ ಕಚೇರಿ ಎದುರು ಠಿಕಾಣಿ ಹೂಡಿದ್ದಾನೆ. ಚೆನ್ನೈ ಎಕ್ಸ್‌ಪ್ರೆಸ್ ಹೈವೆ.. ಕೋಲಾರ ತಾಲೂಕು, ಬಂಗಾರಪೇಟೆ ತಾಲೂಕು, ಕೆಜಿಎಫ್ ತಾಲೂಕು, ಮಾಲೂರು ತಾಲೂಕುಗಳಲ್ಲಿ ಹಾದು ಹೋಗ್ತಿರುವ ಈ ಹೆದ್ದಾರಿ ಅದೆಷ್ಟೋ ರೈತರ ಹೊಲ ಗದ್ದೆ, ಮನೆ ಮಠಗಳನ್ನ ಸ್ವಾಹ ಮಾಡಿದೆ. ಆದ್ರೆ ಹೆದ್ದಾರಿ ಪ್ರಾಧಿಕಾರ ಮಾತ್ರ ರೈತರಿಗೆ ಪರಿಹಾರ ನೀಡದೆ ಸತಾಯಿಸುತ್ತಿದೆ. ಹೀಗಾಗಿ ಏಕಾಂಗಿಯಾಗಿ ರೈತ ಮುನಿಯಪ್ಪ ಹೋರಾಟಕ್ಕಿಳಿದಿದ್ದಾರೆ.

ಭೂಸ್ವಾಧಿನ ಪ್ರಕ್ರಿಯೆ ನಡೆಸಿದ ಹೆದ್ದಾರಿ ಪ್ರಾಧಿಕಾರ ಇಲ್ಲಿನ ಬಹುತೇಕ ರೈತರಿಗೆ ಪಕ್ಷಪಾತ ಮಾಡಿದೆ. ಒದೊಂದು ತಾಲೂಕಿನಲ್ಲಿ ಭೂಮಿಗೆ ಒಂದೊಂದು ರೀತಿ ಬೆಲೆ ನಿಗದಿ ಮಾಡಿದೆ. ಅಲ್ಲದೆ ಭೂಸ್ವಾದೀನ ನಿಯಮ ಪಾಲನೆ ಮಾಡದೆ, ರೈತರನ್ನು ಬೀದಿಗೆ ತಳ್ಳಿದೆಯಂತೆ. ಅದರಲ್ಲೂ ಮಾಲೂರು ತಾಲೂಕಿನ ಲಕ್ಷೀಸಾಗರ ಗ್ರಾಮದ ಮುನಿಯಪ್ಪ ಎಂಬಾತನ ಜಮೀನಿನಲ್ಲಿ ಹೆದ್ದಾರಿ ಹೋಗುತ್ತಿದೆ. ಆದರೆ ಅಲ್ಲಿ ಇದ್ದ ಮರ, ಗಿಡ, ಮನೆಯನ್ನು ನೆಲಸಮ ಮಾಡಿದೆ. ಆದ್ರೆ ಅವುಗಳಿಗೆ ನೀಡಬೇಕಾದ ಲಕ್ಷಾಂತರ ರೂಪಾಯಿ ಪರಿಹಾರ ನೀಡದೆ ವಂಚಿಸಿದೆ. ಇದರಿಂದ ಸಿಡಿದೆದ್ದಿರುವ ರೈತ ಮುನಿಯಪ್ಪ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಏಕಾಂಗಿ ಹೋರಾಟಕ್ಕೆ ನಿಂತಿದ್ದಾನೆ. ಹೈವೆ ಭೂಸ್ವಾದೀನಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಕೈಗೊಂಡಿದ್ದಾನೆ.

ಹೆದ್ದಾರಿ ಪ್ರಾಧಿಕಾರ ಹತ್ತಾರು ಗ್ರಾಮಗಳಲ್ಲಿ ರೈತರ ಜಮೀನುಗಳನ್ನು ವಶಕ್ಕೆ ಪಡೆದು ಮಾರುಕಟ್ಟೆ ಬೆಲೆ ನೀಡಿಲ್ಲ, ಜೊತೆಗೆ ಭೂ ಸ್ವಾಧೀನ ನಿಯಮದಂತೆ ಅಲ್ಲಿನ ಭೂಮಿಯ ಬೆಲೆಯ ಎರಡು ಪಟ್ಟು ಹೆಚ್ಚಿಗೆ ಹಣ ಪರಿಹಾರ ನೀಡಬೇಕು ಎನ್ನುವ ಯಾವುದೇ ನಿಯಮ ಪಾಲಿಸದೆ ರೈತರ ನೂರಾರು ಎಕರೆ ಭೂಮಿಯನ್ನು ಸ್ವಾದೀನಕ್ಕೆ ಪಡೆದು ವಂಚನೆ ಮಾಡಿದ್ದಾರೆ ಅಂತಾ ರೈತರು ಆರೋಪಿಸಿದ್ದಾರೆ. ಒಟ್ಟಾರೆ ಹೆದ್ದಾರಿ ಭೂ ಸ್ವಾಧೀನಾಧಿಕಾರಿಗಳ ದ್ವಂದ್ವ ನೀತಿ ಹಾಗೂ ಎಡವಟ್ಟಿನಿಂದ ಬಡ ರೈತರು ಇತ್ತ ಭೂಮಿಯೂ ಇಲ್ಲದೆ, ಅತ್ತ ಪರಿಹಾರವೂ ಇಲ್ಲದೆ ತ್ರಿಶಂಕು ಸ್ಥಿತಿಯಲ್ಲಿ ಬದುಕುತ್ತಿದ್ದಾರೆ.

ವರದಿ: ರಾಜೇಂದ್ರಸಿಂಹ, ಟಿವಿ9 ಕೋಲಾರ

ಇದನ್ನೂ ಓದಿ: Zodiac Signs: ನಿಮ್ಮ ವ್ಯಕ್ತಿತ್ವಕ್ಕೆ ಸರಿಯಾಗಿ ಹೊಂದುವ ಗಿಡ ಯಾವುದು? ಇಲ್ಲಿದೆ ಮಾಹಿತಿ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು