AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ನಷ್ಟ ಅನುಭವಿಸಿದ್ದ ರೈತನ ಕೈ ಹಿಡಿದ ಬೆಳೆ; ನಿರೀಕ್ಷೆಗೂ ಮೀರಿ ಲಾಭ ಪಡೆದು ಹಸನಾದ ಬದುಕು

ಹಲವು ವರ್ಷದಿಂದ ಟೊಮ್ಯೊಟೊ, ತರಕಾರಿ ಬೆಳೆದು ನಾರಾಯಣ ಸ್ವಾಮಿ ನಷ್ಟ ಅನುಭವಿಸಿದ್ರು. ಹೀಗಾಗಿ, ಅನೇಕ ಕಡೆ ಸುತ್ತಾಡಿ ಕೊನೆಗೆ ಕೋಲ್ಕತ್ತಾದಲ್ಲಿ ಸಿಕ್ಕ ತೈವಾನ್ ಗೋಲ್ಡ್ ಎಂಬ ತಳಿಯ ಲೈಟ್ ಪಿಂಕ್ ಸೀಬೆಯನ್ನು ತಂದು ಬೆಳೆದಿದ್ದಾರೆ. 3 ವರ್ಷದ ಹಿಂದೆ ಬೆಳೆದ ಬೆಳೆಗೆ, ನಿರೀಕ್ಷೆಗೂ ಮೀರಿ ಲಾಭ ಬರ್ತಿದೆ.

ಕೋಲಾರದಲ್ಲಿ ನಷ್ಟ ಅನುಭವಿಸಿದ್ದ ರೈತನ ಕೈ ಹಿಡಿದ ಬೆಳೆ; ನಿರೀಕ್ಷೆಗೂ ಮೀರಿ ಲಾಭ ಪಡೆದು ಹಸನಾದ ಬದುಕು
ಸೀಬೆ
TV9 Web
| Edited By: |

Updated on:Mar 17, 2022 | 10:39 AM

Share

ಕೋಲಾರ: ಈ ಜಿಲ್ಲೆಯ ಬಹುತೇಕ ರೈತರು, ತರಕಾರಿ, ಹಣ್ಣು ಬೆಳೆಯುತ್ತಾರೆ. ಆದ್ರೆ, ಲಾಭಕ್ಕಿಂತ ಅವರು ನಷ್ಟ ಅನುಭವಿಸಿದ್ದೇ ಹೆಚ್ಚು. ಆದ್ರೆ ಅದೃಷ್ಟ ಎನ್ನುವಂತೆ ಅದೊಬ್ಬ ರೈತನಿಗೆ ಜಾಕ್ಪಾಟ್ ಹೊಡೆದಿದೆ. ಸೀಬೆ ಹಣ್ಣು ಬೆಳೆದು, ಬದುಕೇ ಬಂಗಾರವಾಗಿದೆ. ಕೋಲಾರ ತಾಲ್ಲೂಕು ಚದುಮನಹಳ್ಳಿಯಲ್ಲಿ ಗ್ರಾಮದ ನಾರಾಯಣಸ್ವಾಮಿ ಅವರ ತೋಟದಲ್ಲಿ ಬೃಹತ್ ಗಾತ್ರದ ಸೀಬೆ ಹಣ್ಣಿನ ತೋಟ ಅರಳಿದೆ.

ಹಲವು ವರ್ಷದಿಂದ ಟೊಮ್ಯೊಟೊ, ತರಕಾರಿ ಬೆಳೆದು ನಾರಾಯಣ ಸ್ವಾಮಿ ನಷ್ಟ ಅನುಭವಿಸಿದ್ರು. ಹೀಗಾಗಿ, ಅನೇಕ ಕಡೆ ಸುತ್ತಾಡಿ ಕೊನೆಗೆ ಕೋಲ್ಕತ್ತಾದಲ್ಲಿ ಸಿಕ್ಕ ತೈವಾನ್ ಗೋಲ್ಡ್ ಎಂಬ ತಳಿಯ ಲೈಟ್ ಪಿಂಕ್ ಸೀಬೆಯನ್ನು ತಂದು ಬೆಳೆದಿದ್ದಾರೆ. 3 ವರ್ಷದ ಹಿಂದೆ ಬೆಳೆದ ಬೆಳೆಗೆ, ನಿರೀಕ್ಷೆಗೂ ಮೀರಿ ಲಾಭ ಬರ್ತಿದೆ. ಹೀಗಾಗಿ, 3 ಎಕರೆಯಿಂದ ಹತ್ತು ಎಕರೆಗೆ ಸೀಬೆ ತೋಟ ವಿಸ್ತರಿಸಿದ್ದಾರೆ. ಎಕರೆಗೆ ವರ್ಷಕ್ಕೆ ಕನಿಷ್ಠ ಇಪ್ಪತ್ತರಿಂದ ಇಪ್ಪತ್ತೈದು ಲಕ್ಷ ರೂಪಾಯಿ ಗಳಿಸುತ್ತಿದ್ದಾರೆ.

ನಾರಾಯಣಸ್ವಾಮಿ ಅವ್ರು ಒಂದು ಎಕರೆಗೆ 800 ಸೀಬೆ ಗಿಡಗಳನ್ನು ಬೆಳೆದಿದ್ದಾರೆ. ಇದಕ್ಕೆ ಕನಿಷ್ಟ ಒಂದೂವರೆ ಲಕ್ಷ ಖರ್ಚು ಬರುತ್ತೆ. ನಾಟಿ ಮಾಡಿದ ಏಳು ತಿಂಗಳು ಗಿಡವನ್ನ ಚೆನ್ನಾಗಿ ನೋಡ್ಕೊಂಡೆ ಆ ನಂತರ 15 ವರ್ಷ ಫಲ ಸಿಗುತ್ತೆ. ಒಂದು ಹಣ್ಣು 500 ರಿಂದ 800 ಗ್ರಾಮ್ ತೂಕವಿದ್ದು, ಪ್ರತಿ ತಿಂಗಳು 40 ಟನ್ ಸೀಬೆ ಬರುತ್ತಿದೆ. ತೈವಾನ್ ಗೋಲ್ಡ್ ತಳಿಗೆ ಮಾರ್ಕೆಟ್ನಲ್ಲಿ ಡಿಮ್ಯಾಂಡ್ ಇದ್ದು, ಕೆಜಿ ಸೀಬೆ ಹಣ್ಣಿಗೆ 70 ರೂಪಾಯಿ ರೇಟಿದೆ. ಬಿಗ್ ಬ್ಯಾಸ್ಕೇಟ್, ರಿಲಯನ್ಸ್, ಮೋರ್, ಸೇರಿದಂತೆ ದೊಡ್ಡ ದೊಡ್ಡ ಕಂಪನಿಗಳೇ ಇವರ ತೋಟಕ್ಕೆ ಬಂದು ಖರೀದಿ ಮಾಡ್ತಾರಂತೆ. ಸುತ್ತಲಿನ ರೈತರಿಗೂ ಇದು ಮಾದರಿಯಾಗಿದೆ. ಸೀಬೆಹಣ್ಣು, ಬಡವರ ಸೇಬು ಅನ್ನೋ ಮಾತಿದೆ. ಉತ್ತಮ ಕೊಬ್ಬಿನಾಂಶ, ಹಲವು ವಿಟಮಿನ್ಸ್ಗಳನ್ನು ಹೊಂದಿರುವ ಸೀಬೆ ನಿಜಕ್ಕೂ ಆರೋಗ್ಯದ ದೃಷ್ಟಿಯಿಂದಲೂ ಕೂಡಾ ಉಪಯುಕ್ತ. ಇದೀಗ, ತೈವಾನ್ ಗೋಲ್ಡ್ ತಳಿ ಬೆಳೆದು ರೈತನ ಬದುಕು ಕೂಡ ಬಂಗಾರವಾಗಿದೆ.

ವರದಿ: ರಾಜೇಂದ್ರಸಿಂಹ, ಟಿವಿ9 ಕೋಲಾರ

Kolar Guava

ಸೀಬೆ ಹಣ್ಣಿನ ತೋಟ

Kolar Guava

ರೈತ ನಾರಾಯಣಸ್ವಾಮಿ

ಇದನ್ನೂ ಓದಿ: ಚಿತ್ರಮಂದಿರಗಳ ಎದುರು ತಲೆ ಎತ್ತಿದ ಪುನೀತ್ ಕಟೌಟ್​; ಇಲ್ಲಿದೆ ವಿಡಿಯೋ

ಚಿಕ್ಕಮಗಳೂರು ಪಿಡಬ್ಲ್ಯುಡಿ ಎಇಇ ಗವಿ ರಂಗಪ್ಪನ ಮನೆಯಲ್ಲಿ ಎಸಿಬಿ ಅಧಿಕಾರಿಗಳಿಗೆ ಮುಕ್ಕಾಲು ಕೆಜೆ ತೂಕದ ಚಿನ್ನದ ಗಟ್ಟಿ ಸಿಕ್ಕಿತು!

Published On - 9:51 pm, Wed, 16 March 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?