ಅಕಾಲಿಕ ಮಳೆ, ಕೀಟ ಬಾಧೆ; ಆತಂಕದಲ್ಲಿ ಕೋಲಾರದ ಮಾವಿನ ಬೆಳೆಗಾರರು

ಕೋಲಾರ ಜಿಲ್ಲೆಯ ಶ್ರೀನಿವಾಸಪುರವನ್ನು ರಾಜ್ಯದ ಮಾವಿನ ತವರು ಎಂದೇ ಕರೆಯಲಾಗುತ್ತದೆ. ಕಾರಣ ಕೋಲಾರ ಜಿಲ್ಲೆಯೊಂದರಲ್ಲೇ ಸರಿಸುಮಾರು 52 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇಲ್ಲಿ ಬೆಳೆಯುವ ಮಾವು ವಿಶ್ವದ ವಿವಿಧ ದೇಶಗಳು ಹಾಗೂ ವಿವಿಧ ರಾಜ್ಯಗಳಿಗೆ ರಫ್ತು ಮಾಡಲಾಗುತ್ತದೆ.

ಅಕಾಲಿಕ ಮಳೆ, ಕೀಟ ಬಾಧೆ; ಆತಂಕದಲ್ಲಿ ಕೋಲಾರದ ಮಾವಿನ ಬೆಳೆಗಾರರು
ಮಾವು ಬೆಳೆ
Follow us
|

Updated on:Apr 15, 2021 | 2:23 PM

ಕೋಲಾರ: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಮಾವಿನ ತವರು ಎಂದೇ ಪ್ರಸಿದ್ಧಿ. ಇಲ್ಲಿನ ಮಾವು ಬೆಳೆಗಾರರಿಗೆ ಇದೀಗ ಸಂಕಷ್ಟವೊಂದು ಎದುರಾಗಿದೆ. ಈ ಬಾರಿ ಬಂಪರ್ ಬೆಳೆ ನಿರೀಕ್ಷೆಯಲ್ಲಿದ್ದ ಮಾವು ಬೆಳೆಗಾರರಿಗೆ ಆಕಾಲಿಕವಾಗಿ ಬಿದ್ದ ಮಳೆಯಿಂದ ತೊಂದರೆಯುಂಟಾಗಿದೆ. ಅಲ್ಲದೇ ಈ ವರ್ಷ ಮಾವಿನ ತವರಲ್ಲಿ ಮಾವಿಗೆ ಬರ ಬರುವ ಜೊತೆಗೆ ಕೀಟ ಬಾಧೆ ಕಾಡಲಾರಂಭಿಸಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರವನ್ನು ರಾಜ್ಯದ ಮಾವಿನ ತವರು ಎಂದೇ ಕರೆಯಲಾಗುತ್ತದೆ. ಕಾರಣ ಕೋಲಾರ ಜಿಲ್ಲೆಯೊಂದರಲ್ಲೇ ಸರಿಸುಮಾರು 52 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇಲ್ಲಿ ಬೆಳೆಯುವ ಮಾವು ವಿಶ್ವದ ವಿವಿಧ ದೇಶಗಳು ಹಾಗೂ ವಿವಿಧ ರಾಜ್ಯಗಳಿಗೆ ರಫ್ತು ಮಾಡಲಾಗುತ್ತದೆ. ಮಾವಿನ ಸೀಸನ್ ಬಂದರೆ ಸಾಕು ಬೇರೆ ಬೇರೆಯ ರಾಜ್ಯದ ವ್ಯಾಪಾರಸ್ಥರು ಕೋಲಾರಕ್ಕೆ ಬರುತ್ತಾರೆ. ಬಂದು ತಿಂಗಳುಗಟ್ಟಲೆ ಇಲ್ಲೇ ಬೀಡು ಬಿಟ್ಟು ರೈತರಿಂದ ಮಾವು ಖರೀದಿ ಮಾಡುತ್ತಾರೆ. ಅಷ್ಟರ ಮಟ್ಟಿಗೆ ಮಾವು ವಹಿವಾಟು ನಡೆಯುತ್ತದೆ. ಆದರೆ ಈ ವರ್ಷ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದ ಮಾವು ಬೆಳೆಗೆ ಮಾರಕವಾಗಿ ಪರಿಣಮಿಸಿದೆ.

ಜನವರಿ ಮತ್ತು ಫೆಬ್ರವರಿಯಲ್ಲಿ ಸುರಿದ ಮಳೆಯಿಂದ ಮಾವಿನ ಹೂವೆಲ್ಲ ಉದುರಿ ಹೋಗಿ ಮರಗಳಲ್ಲಿ ಕೇವಲ 10 ರಿಂದ 20 ರಷ್ಟು ಫಸಲು ಮಾತ್ರ ಉಳಿದುಕೊಂಡಿದೆ. ಹಾಗಾಗಿ ಈ ಬಾರಿ ಮಾವು ಬೆಳೆಗಾರರು ಯಾವುದೇ ನಿರೀಕ್ಷೆ ಇಟ್ಟುಕೊಳ್ಳುವಂತಿಲ್ಲ ಎಂದು ಮಾವು ಬೆಳೆಗಾರರಾದ ವೆಂಕಟರಮಣಪ್ಪ ಹೇಳಿದರು.

ಮಾವಿನ ಕಣಜ ಎಂದು ಕರೆಯುವ ಕೋಲಾರ ಜಿಲ್ಲೆಯಲ್ಲಿ ಹಲವು ಬಗೆಯ ಮಾವನ್ನು ಬೆಳೆಯಲಾಗುತ್ತದೆ. ಇಲ್ಲಿ ಉತ್ಕೃಷ್ಟವಾದ ಮಾವನ್ನು ಬೆಳೆಯುತ್ತಾರೆ. ಅದಕ್ಕಾಗಿ ಇಲ್ಲಿನ ಮಾವಿನ ಹಣ್ಣಿಗೆ ಎಲ್ಲಿಲ್ಲದ ಬೇಡಿಕೆ ಇದೆ. ಆದರೆ ಈ ವರ್ಷ ಅಕಾಲಿಕ ಮಳೆಯ ಜೊತೆಗೆ ಕೀಟ ಭಾದೆಯಿಂದ ಶೇಕಡಾ ಹತ್ತರಿಂದ ಇಪ್ಪತ್ತರಷ್ಟು ಮಾವು ಬೆಳೆ ಕೂಡಾ ರೈತರ ಕೈ ಸೇರುವುದು ಅನುಮಾನ ಎನ್ನುವ ಸ್ಥಿತಿ ನಿರ್ಮಾಣವಾಗಿದೆ. ಆರಂಭದಲ್ಲಿ ಅಕಾಲಿಕ ಮಳೆಗೆ ಹೂವೆಲ್ಲಾ ಉದುರಿ ಬೆಳೆ ಹಾಳಾದರೆ, ಈಗ ಅಧಿಕ ತಾಪಮಾನ ಹಾಗೂ ಕೀಟ ಬಾಧೆಗೆ ಬೆಳೆ ಹಾಳಾಗುತ್ತಿದೆ. ಈಗ ಮಾವು ಬೆಳೆಯನ್ನು ಬೂದು ರೋಗ ಹಾಗೂ ಊಜಿ ಹುಳ ಕಿತ್ತು ತಿನ್ನುತ್ತಿವೆ. ಪರಿಣಾಮ ಮಾವಿನ ಮರಗಳಲ್ಲಿ ಅಲ್ಲೊಂದು ಇಲ್ಲೊಂದು ಕಾಯಿಗಳು ಕಣ್ಣಿಗೆ ಕಾಣಿಸುತ್ತಿವೆ. ಮಾವು ಬೆಳೆಯನ್ನೇ ಅವಲಂಬಿಸಿದ್ದ ರೈತರು ಮುಂದಿನ ಜೀವನವನ್ನು ಹೇಗೆ ಎದುರಿಸುವುದೆಂಬ ಆತಂಕಕ್ಕೆ ಒಳಗಾಗಿದ್ದಾರೆ.

ಕೀಟ ಬಾಧೆಯಿಂದ ನಷ್ಟವಾದ ಮಾವಿನ ಬೆಳೆ

ಇದನ್ನೂ ಓದಿ

ಕುಡಿಯುವ ನೀರಿಗೆ ಪರದಾಟ ಪಡುತ್ತಿರುವ ಹಾವೇರಿ ಜನ; ಪರಿಹಾರಕ್ಕೆ ಸ್ಥಳೀಯರ ಆಗ್ರಹ

ಮೊದಲ ಬಾರಿಗೆ ಅರಬ್ ರಾಷ್ಟ್ರಕ್ಕೆ ಆಪೋಸ್ ಮಾವು; ಧಾರವಾಡ ರೈತರು ಫುಲ್ ಖುಷ್

(Farmers of Kolar worried by premature rainfall and pest infestation)

Published On - 2:21 pm, Thu, 15 April 21

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!