ಜಿಲ್ಲಾಸ್ಪತ್ರೆ ಉದ್ಘಾಟನೆ ವಿಳಂಬ: ಸಚಿವರ ಮುಖವಾಡ ಧರಿಸಿ ರೈತರ ಪ್ರೊಟೆಸ್ಟ್​

ಕೋಲಾರ: ಕೋಟ್ಯಂತರ ರೂಪಾಯಿ ವೆಚ್ಚದ ಕೋಲಾರ ಜಿಲ್ಲಾಸ್ಪತ್ರೆ ಉದ್ಘಾಟನೆಗೆ ಸರ್ಕಾರ ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆ ಎದುರು ರೈತ ಸಂಘದ ಸದಸ್ಯರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಆಸ್ಪತ್ರೆ ಉದ್ಘಾಟನೆಗೆ ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ಎಸ್​ಎನ್​ಅರ್​ ಆಸ್ಪತ್ರೆ ಎದುರು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಸಚಿವ ಶ್ರೀರಾಮುಲು ಆಸ್ಪತ್ರೆ ಉದ್ಘಾಟನೆ ಮಾಡದೆ ಡಿಸಿಎಂ ಪಟ್ಟಕ್ಕಾಗಿ ಬಡಿದಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಎಣ್ಣೆ ಕುಡಿಯಿರಿ ಯಮಲೋಕಕ್ಕೆ ನಡೆಯಿರಿ ಎಂದು ಅಬಕಾರಿ ಸಚಿವ ನಾಗೇಶ್​ ಅವರ ವ್ಯಂಗ್ಯ ಚಿತ್ರ ಮಾಡಿ ವಿನೂತನವಾಗಿ […]

ಜಿಲ್ಲಾಸ್ಪತ್ರೆ ಉದ್ಘಾಟನೆ ವಿಳಂಬ: ಸಚಿವರ ಮುಖವಾಡ ಧರಿಸಿ ರೈತರ ಪ್ರೊಟೆಸ್ಟ್​

Updated on: Feb 03, 2020 | 11:53 AM

ಕೋಲಾರ: ಕೋಟ್ಯಂತರ ರೂಪಾಯಿ ವೆಚ್ಚದ ಕೋಲಾರ ಜಿಲ್ಲಾಸ್ಪತ್ರೆ ಉದ್ಘಾಟನೆಗೆ ಸರ್ಕಾರ ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆ ಎದುರು ರೈತ ಸಂಘದ ಸದಸ್ಯರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಆಸ್ಪತ್ರೆ ಉದ್ಘಾಟನೆಗೆ ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ಎಸ್​ಎನ್​ಅರ್​ ಆಸ್ಪತ್ರೆ ಎದುರು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರೋಗ್ಯ ಸಚಿವ ಶ್ರೀರಾಮುಲು ಆಸ್ಪತ್ರೆ ಉದ್ಘಾಟನೆ ಮಾಡದೆ ಡಿಸಿಎಂ ಪಟ್ಟಕ್ಕಾಗಿ ಬಡಿದಾಡುವುದರಲ್ಲಿ ಬ್ಯುಸಿಯಾಗಿದ್ದಾರೆ. ಎಣ್ಣೆ ಕುಡಿಯಿರಿ ಯಮಲೋಕಕ್ಕೆ ನಡೆಯಿರಿ ಎಂದು ಅಬಕಾರಿ ಸಚಿವ ನಾಗೇಶ್​ ಅವರ ವ್ಯಂಗ್ಯ ಚಿತ್ರ ಮಾಡಿ ವಿನೂತನವಾಗಿ ಪ್ರೊಟೆಸ್ಟ್​ ಮಾಡಿದ್ದಾರೆ. ಜಿಲ್ಲೆಯ ಬಿಜೆಪಿ ಸಂಸದ ಮುನಿಸ್ವಾಮಿ, ಶಾಸಕರಾದ ರಮೇಶ್ ಕುಮಾರ್, ಶ್ರೀನಿವಾಸಗೌಡ, ಎಸ್.ಎನ್.ನಾರಾಯಣಸ್ವಾಮಿ, ಕೆ.ವೈ.ನಂಜೇಗೌಡ ಮತ್ತು ರೂಪಾ ಅವರ ಅವರ ಮುಖವಾಡ ಧರಿಸಿ ಅಣಕು ಪ್ರದರ್ಶನ ಹಾಗೂ ವ್ಯಂಗ್ಯ ರೀತಿಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ.



sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us