Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಕೆಂಪೇಗೌಡ ರಥಯಾತ್ರೆ ವೇಳೆ ಬಿಜೆಪಿಯ ಎರಡು ಗುಂಪುಗಳ ನಡುವೆ ಗಲಾಟೆ

ಕೆಂಪೇಗೌಡ ರಥಯಾತ್ರೆ ಸ್ವಾಗತಿಸುವ ವಿಚಾರವಾಗಿ ವೇಳೆ ಬಿಜೆಪಿಯ 2 ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಮಾಲೂರು ತಾಲೂಕಿನ ಟೇಕಲ್​ನಲ್ಲಿ ನಡೆದಿದೆ.

ಕೋಲಾರ: ಕೆಂಪೇಗೌಡ ರಥಯಾತ್ರೆ ವೇಳೆ ಬಿಜೆಪಿಯ ಎರಡು ಗುಂಪುಗಳ ನಡುವೆ ಗಲಾಟೆ
ಬಿಜೆಪಿ ಕಾರ್ಯಕರ್ತರ ಗಲಾಟೆ
Follow us
TV9 Web
| Updated By: ವಿವೇಕ ಬಿರಾದಾರ

Updated on:Nov 04, 2022 | 7:29 PM

ಕೋಲಾರ: ಬಿಜೆಪಿಯಿಂದ (BJP) ಕೆಂಪೇಗೌಡ ರಥಯಾತ್ರೆ ನಡೆಯುತ್ತಿದ್ದು, ಕೆಂಪೇಗೌಡ (Kempegowda) ರಥಯಾತ್ರೆ ಸ್ವಾಗತಿಸುವ ವಿಚಾರವಾಗಿ ಬಿಜೆಪಿಯ 2 ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಮಾಲೂರು ತಾಲೂಕಿನ ಟೇಕಲ್​ನಲ್ಲಿ ನಡೆದಿದೆ. ಬಿಜೆಪಿ ಟಿಕೆಟ್ ಆಕಾಂಕ್ಷಿ ಹೂಡಿ ವಿಜಯಕುಮಾರ್ ಹಾಗೂ ಮಾಜಿ ಶಾಸಕ ಮಂಜುನಾಥ್ ಗೌಡ ಬೆಂಬಲಿಗರ ನಡುವೆ ಸಂಸದ ಮುನಿಸ್ವಾಮಿ ಅವರ ‌ಎದುರೇ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಮುನಿಸ್ವಾಮಿ‌ ಕಾರ್ಯಕರ್ತರನ್ನು ಮನವೊಲಿಸಲು ಯತ್ನಿಸಿದರು. ಆದರೆ  ಕಾರ್ಯಕರ್ತರು ಮುನಿಸ್ವಾಮಿ‌ ಅವರ ಮಾತಿಗೆ ಕ್ಯಾರೆ ಎನ್ನದೆ ಗಲಾಟೆ ಮುಂದುವರೆಸಿದ್ದರು. ಹೀಗಾಗಿ ಪೊಲೀಸರು ಮಧ್ಯಪ್ರವೇಶಿಸಿದ ಬಳಿಕ ಮೆರವಣಿಗೆಗೆ ಚಾಲನೆ ದೊರೆತಿತು.

ಬಿಜೆಪಿಯಿಂದ ಮೃತ್ತಿಗೆ ಸಂಗ್ರಹ 

ನ.11ರಂದು ಕೆಐಎಬಿ ಮುಂದೆ ಕೆಂಪೇಗೌಡರ ಪ್ರತಿಮೆ ಅನಾವರಣ ಹಿನ್ನೆಲೆ ರಾಜ್ಯಾದ್ಯಂತ ರಥಗಳ ಮೂಲಕ ಮೃತ್ತಿಕೆ ಸಂಗ್ರಹ ಅಭಿಯಾನ ಮಾಡಲಾಗುತ್ತಿದೆ. ಅದರಂತೆ ಮಾಗಡಿ ತಾಲ್ಲೂಕಿನ ಗ್ರಾಮದಲ್ಲಿ ಮೃತ್ತಿಕೆ ಸಂಗ್ರಹ ಮಾಡುತ್ತಿದ್ದಾಗ ರಥದಿಂದ ಬಿದ್ದು‌ ಶ್ರೀನಿವಾಸ್ ಸಾವನ್ನಪ್ಪಿದ್ದಾರೆ.

ನ.11ರಂದು ಕೆಂಪೇಗೌಡ ವಿಮಾನ ನಿಲ್ದಾಣದ ಮುಂದೆ ಕೆಂಪೇಗೌಡರ ಪ್ರತಿಮೆ ಅನಾವರಣ ಹಿನ್ನೆಲೆ ರಾಜ್ಯಾದ್ಯಂತ ಮೃತ್ತಿಕೆ ಸಂಗ್ರಹ ಅಭಿಯಾನದ ರಥಗಳಿಗೆ ಅಕ್ಟೋಬರ್​ 21ರಂದು ವಿಧಾನಸೌಧದ ಮುಂಭಾಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದ್ದರು. ಅಭಿಯಾನ ಯಶಸ್ವಿ ಆಗುವಂತೆ ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಅಭಿಯಾನದ ಯಶಸ್ಸಿಗೆ ಎಲ್ಲರೂ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಸೂಚನೆ ನೀಡಿದ್ದರು.

108 ಅಡಿ ಎತ್ತರದ ಪ್ರತಿಮೆ

ಕೆಂಪೇಗೌಡರು ಕಟ್ಟಿದ ಬೆಂಗಳೂರಿನಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದ್ದು, ನವೆಂಬರ್ 11ರಂದು ಉದ್ಘಾಟನೆಗೊಳ್ಳಲಿದೆ. ಈ ಪ್ರತಿಮೆ ನಿರ್ಮಾಣದ ಮೂಲಕ ಬೆಂಗಳೂರು ಇಂದು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಅವರಿಗಿದ್ದ ದೂರದೃಷ್ಟಿಯನ್ನು ಗೌರವಿಸಿ, 108 ಅಡಿ ಎತ್ತರದ ಪ್ರತಿಮೆಗೆ ‘ಪ್ರಗತಿ ಪ್ರತಿಮೆ’ ಎಂದು ನಾಮಕರಣ ಮಾಡಲಾಗಿದೆ. ಜಗತ್ತಿನ ಯಾವ ನಗರದ ವಿಮಾನ ನಿಲ್ದಾಣದಲ್ಲೂ ಅಲ್ಲಿಯ ಸಂಸ್ಥಾಪಕರ ಪ್ರತಿಮೆ ಇಲ್ಲ. ಇನ್ನುಮುಂದೆ, ಬೆಂಗಳೂರು ವಿಮಾನ ನಿಲ್ದಾಣ ಸಮುಚ್ಚಯದಲ್ಲಿ ಕೆಂಪೇಗೌಡರ ಪ್ರತಿಮೆ ಆಕರ್ಷಣೆಯ ಕೇಂದ್ರವಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:16 pm, Fri, 4 November 22

ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ
Video: ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ