AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಳಬಾಗಲು ಕಾಂಗ್ರೆಸ್‌ ಟಿಕೆಟ್​ ಆಕಾಂಕ್ಷಿ ವಿರುದ್ದ ಎಫ್​ಐಆರ್​, ಕಾರಣವೇನು?

ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಜಿಲ್ಲೆಯ ಮುಳಬಾಗಿಲು ಕಾಂಗ್ರೆಸ್‌ ಆಕಾಂಕ್ಷಿ ಕೊತ್ತೂರು ಅಂಜು ಬಾಸ್ ಅಲಿಯಾಸ್ ಆಂಜನೇಯಲು ವಿರುದ್ದ FIR ದಾಖಲಾಗಿದೆ.

ಮುಳಬಾಗಲು ಕಾಂಗ್ರೆಸ್‌ ಟಿಕೆಟ್​ ಆಕಾಂಕ್ಷಿ ವಿರುದ್ದ ಎಫ್​ಐಆರ್​, ಕಾರಣವೇನು?
ಮುಳಬಾಗಿಲು ಕಾಂಗ್ರೆಸ್‌ ಆಕಾಂಕ್ಷಿ ಕೊತ್ತೂರು ಅಂಜು ಬಾಸ್ ಅಲಿಯಾಸ್ ಆಂಜನೇಯಲು
ಕಿರಣ್ ಹನುಮಂತ್​ ಮಾದಾರ್
|

Updated on:Apr 06, 2023 | 9:28 AM

Share

ಕೋಲಾರ: ರಾಜ್ಯ ವಿಧಾನಸಭೆ ಚುನಾವಣೆಗೆ(Karnataka Assembly Election) ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಜಿಲ್ಲೆಯ ಮುಳಬಾಗಲು ಕಾಂಗ್ರೆಸ್‌ ಟಿಕೆಟ್​ ಆಕಾಂಕ್ಷಿ ಕೊತ್ತೂರು ಅಂಜು ಬಾಸ್ ಅಲಿಯಾಸ್ ಆಂಜನೇಯಲು ವಿರುದ್ದ FIR ದಾಖಲಾಗಿದೆ. ಜಮೀನು ವ್ಯಾಜ್ಯ ಹಿನ್ನಲೆ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಮುಳಬಾಗಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಅಂಜು ಬಾಸ್ ಅವರು ಒಂದು ಎಕರೆ ಕ್ರಯ ಮಾಡಿಸಿಕೊಂಡು 2 ಎಕರೆ ಜಮೀನಿಗೆ ಬೇಲಿ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನು ಅಷ್ಟೆ ಅಲ್ಲದೆ ಮುಳಬಾಗಲು ತಾಲೂಕಿನ ಯಲವಳ್ಳಿ ಗ್ರಾಮದ ಸರ್ವೆ ನಂ. 65 ರಲ್ಲಿ 2 ಎಕರೆ 10 ಗುಂಟೆ ಜಮೀನು ಲಪಟಾಯಿಸಲು ಮುಂದಾಗಿದ್ದನಂತೆ. ಅದನ್ನ ಪ್ರಶ್ನೆ ಮಾಡಿದ ಚಂಗಮ್ಮ ಎಂಬುವವರನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆಂಬಲಿಗರಿಂದ ಧಮ್ಕಿ ಹಾಕಲಾಗಿದೆ. ಈ ಹಿನ್ನಲೆ ಅಂಜುಬಾಸ್, ಮುರಳಿ, ಸುರೇಶ್ ಸೇರಿ 4 ಜನರ ವಿರುದ್ದ ಎಫ್​ಐಆರ್​ ಹಾಕಲಾಗಿದ್ದು, ಮಹಿಳೆಯನ್ನ ನಿಂದಿಸಿ ಹಲ್ಲೆ‌ ಮಾಡಿದ್ದಕ್ಕಾಗಿ ಐಪಿಸಿ ಸೆಕ್ಷನ್ 504, 143, 149, 323, 354 ಅಡಿ ಪ್ರಕರಣ ದಾಖಲಿಸಲಾಗಿದೆ.

ನ್ಯಾಯದಾನದಲ್ಲಿ ಕರ್ನಾಟಕ ದೇಶದಲ್ಲೇ ನಂ.1

ಬೆಂಗಳೂರು: ಇಂಡಿಯಾ ಜಸ್ಟೀಸ್‌ ರಿಪೋರ್ಟ್‌ 2022 ಬಿಡುಗಡೆಯಾಗಿದ್ದು, ಇದರಲ್ಲಿ ಕರ್ನಾಟಕವು ದೇಶದಲ್ಲೇ ಮೊದಲ ಸ್ಥಾನ ಪಡೆದಿದೆ. ಇದೇ ವೇಳೆ ಮೊದಲ 5ರ ಪೈಕಿ 4 ಸ್ಥಾನಗಳನ್ನು ದಕ್ಷಿಣ ರಾಜ್ಯಗಳೇ ಪಡೆದಿವೆ. ಪೊಲೀಸ್‌ ವ್ಯವಸ್ಥೆ, ನ್ಯಾಯಾಂಗ ವ್ಯವಸ್ಥೆ, ಜೈಲುಗಳ ಸ್ಥಿತಿಗತಿ ಹಾಗೂ ಕಕ್ಷಿದಾರರಿಗೆ ಕಾನೂನು ಸವಲತ್ತು- ಈ ಮಾನದಂಡಗಳನ್ನು ಇರಿಸಿಕೊಂಡು ವರದಿ ಸಿದ್ಧಪಡಿಸಲಾಗಿದೆ. 2019ರಲ್ಲಿ ಪ್ರಾರಂಭವಾದ ಟಾಟಾ ಟ್ರಸ್ಟ್‌ಗಳ ಉಪಕ್ರಮವಾದ ಐಜೆಆರ್‌ ಈ ವರದಿಯ  ಕತೃವಾಗಿದೆ. ತಲಾ 1 ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ 18 ದೊಡ್ಡ ಮತ್ತು ಮಧ್ಯಮ ಗಾತ್ರದ ರಾಜ್ಯಗಳಲ್ಲಿ ಕರ್ನಾಟಕವು ಅಗ್ರಸ್ಥಾನದಲ್ಲಿದ್ದರೆ, ತಮಿಳುನಾಡು ತೆಲಂಗಾಣ, ಗುಜರಾತ್‌ ಮತ್ತು ಆಂಧ್ರಪ್ರದೇಶವು ನಂತರದ ಸ್ಥಾನದಲ್ಲಿವೆ. ತಲಾ ಒಂದು ಕೋಟಿಗಿಂತ ಕಡಿಮೆ ಜನಸಂಖ್ಯೆಯನ್ನು ಹೊಂದಿರುವ ಏಳು ಸಣ್ಣ ರಾಜ್ಯಗಳ ಪಟ್ಟಿಯಲ್ಲಿ ಸಿಕ್ಕಿಂ ನೇತೃತ್ವ ವಹಿಸಿದ್ದರೆ, ಅರುಣಾಚಲ ಪ್ರದೇಶ ಮತ್ತು ತ್ರಿಪುರಾ ನಂತರದ ಸ್ಥಾನದಲ್ಲಿವೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:25 am, Thu, 6 April 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ