AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಳಬಾಗಲು ಕಾಂಗ್ರೆಸ್‌ ಟಿಕೆಟ್​ ಆಕಾಂಕ್ಷಿ ವಿರುದ್ದ ಎಫ್​ಐಆರ್​, ಕಾರಣವೇನು?

ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಜಿಲ್ಲೆಯ ಮುಳಬಾಗಿಲು ಕಾಂಗ್ರೆಸ್‌ ಆಕಾಂಕ್ಷಿ ಕೊತ್ತೂರು ಅಂಜು ಬಾಸ್ ಅಲಿಯಾಸ್ ಆಂಜನೇಯಲು ವಿರುದ್ದ FIR ದಾಖಲಾಗಿದೆ.

ಮುಳಬಾಗಲು ಕಾಂಗ್ರೆಸ್‌ ಟಿಕೆಟ್​ ಆಕಾಂಕ್ಷಿ ವಿರುದ್ದ ಎಫ್​ಐಆರ್​, ಕಾರಣವೇನು?
ಮುಳಬಾಗಿಲು ಕಾಂಗ್ರೆಸ್‌ ಆಕಾಂಕ್ಷಿ ಕೊತ್ತೂರು ಅಂಜು ಬಾಸ್ ಅಲಿಯಾಸ್ ಆಂಜನೇಯಲು
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Apr 06, 2023 | 9:28 AM

Share

ಕೋಲಾರ: ರಾಜ್ಯ ವಿಧಾನಸಭೆ ಚುನಾವಣೆಗೆ(Karnataka Assembly Election) ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಜಿಲ್ಲೆಯ ಮುಳಬಾಗಲು ಕಾಂಗ್ರೆಸ್‌ ಟಿಕೆಟ್​ ಆಕಾಂಕ್ಷಿ ಕೊತ್ತೂರು ಅಂಜು ಬಾಸ್ ಅಲಿಯಾಸ್ ಆಂಜನೇಯಲು ವಿರುದ್ದ FIR ದಾಖಲಾಗಿದೆ. ಜಮೀನು ವ್ಯಾಜ್ಯ ಹಿನ್ನಲೆ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಮುಳಬಾಗಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಅಂಜು ಬಾಸ್ ಅವರು ಒಂದು ಎಕರೆ ಕ್ರಯ ಮಾಡಿಸಿಕೊಂಡು 2 ಎಕರೆ ಜಮೀನಿಗೆ ಬೇಲಿ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನು ಅಷ್ಟೆ ಅಲ್ಲದೆ ಮುಳಬಾಗಲು ತಾಲೂಕಿನ ಯಲವಳ್ಳಿ ಗ್ರಾಮದ ಸರ್ವೆ ನಂ. 65 ರಲ್ಲಿ 2 ಎಕರೆ 10 ಗುಂಟೆ ಜಮೀನು ಲಪಟಾಯಿಸಲು ಮುಂದಾಗಿದ್ದನಂತೆ. ಅದನ್ನ ಪ್ರಶ್ನೆ ಮಾಡಿದ ಚಂಗಮ್ಮ ಎಂಬುವವರನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆಂಬಲಿಗರಿಂದ ಧಮ್ಕಿ ಹಾಕಲಾಗಿದೆ. ಈ ಹಿನ್ನಲೆ ಅಂಜುಬಾಸ್, ಮುರಳಿ, ಸುರೇಶ್ ಸೇರಿ 4 ಜನರ ವಿರುದ್ದ ಎಫ್​ಐಆರ್​ ಹಾಕಲಾಗಿದ್ದು, ಮಹಿಳೆಯನ್ನ ನಿಂದಿಸಿ ಹಲ್ಲೆ‌ ಮಾಡಿದ್ದಕ್ಕಾಗಿ ಐಪಿಸಿ ಸೆಕ್ಷನ್ 504, 143, 149, 323, 354 ಅಡಿ ಪ್ರಕರಣ ದಾಖಲಿಸಲಾಗಿದೆ.

ನ್ಯಾಯದಾನದಲ್ಲಿ ಕರ್ನಾಟಕ ದೇಶದಲ್ಲೇ ನಂ.1

ಬೆಂಗಳೂರು: ಇಂಡಿಯಾ ಜಸ್ಟೀಸ್‌ ರಿಪೋರ್ಟ್‌ 2022 ಬಿಡುಗಡೆಯಾಗಿದ್ದು, ಇದರಲ್ಲಿ ಕರ್ನಾಟಕವು ದೇಶದಲ್ಲೇ ಮೊದಲ ಸ್ಥಾನ ಪಡೆದಿದೆ. ಇದೇ ವೇಳೆ ಮೊದಲ 5ರ ಪೈಕಿ 4 ಸ್ಥಾನಗಳನ್ನು ದಕ್ಷಿಣ ರಾಜ್ಯಗಳೇ ಪಡೆದಿವೆ. ಪೊಲೀಸ್‌ ವ್ಯವಸ್ಥೆ, ನ್ಯಾಯಾಂಗ ವ್ಯವಸ್ಥೆ, ಜೈಲುಗಳ ಸ್ಥಿತಿಗತಿ ಹಾಗೂ ಕಕ್ಷಿದಾರರಿಗೆ ಕಾನೂನು ಸವಲತ್ತು- ಈ ಮಾನದಂಡಗಳನ್ನು ಇರಿಸಿಕೊಂಡು ವರದಿ ಸಿದ್ಧಪಡಿಸಲಾಗಿದೆ. 2019ರಲ್ಲಿ ಪ್ರಾರಂಭವಾದ ಟಾಟಾ ಟ್ರಸ್ಟ್‌ಗಳ ಉಪಕ್ರಮವಾದ ಐಜೆಆರ್‌ ಈ ವರದಿಯ  ಕತೃವಾಗಿದೆ. ತಲಾ 1 ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ 18 ದೊಡ್ಡ ಮತ್ತು ಮಧ್ಯಮ ಗಾತ್ರದ ರಾಜ್ಯಗಳಲ್ಲಿ ಕರ್ನಾಟಕವು ಅಗ್ರಸ್ಥಾನದಲ್ಲಿದ್ದರೆ, ತಮಿಳುನಾಡು ತೆಲಂಗಾಣ, ಗುಜರಾತ್‌ ಮತ್ತು ಆಂಧ್ರಪ್ರದೇಶವು ನಂತರದ ಸ್ಥಾನದಲ್ಲಿವೆ. ತಲಾ ಒಂದು ಕೋಟಿಗಿಂತ ಕಡಿಮೆ ಜನಸಂಖ್ಯೆಯನ್ನು ಹೊಂದಿರುವ ಏಳು ಸಣ್ಣ ರಾಜ್ಯಗಳ ಪಟ್ಟಿಯಲ್ಲಿ ಸಿಕ್ಕಿಂ ನೇತೃತ್ವ ವಹಿಸಿದ್ದರೆ, ಅರುಣಾಚಲ ಪ್ರದೇಶ ಮತ್ತು ತ್ರಿಪುರಾ ನಂತರದ ಸ್ಥಾನದಲ್ಲಿವೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:25 am, Thu, 6 April 23

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ