AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್ ಶಾಸಕನ ವಿರುದ್ಧ ಎಫ್​ಐಆರ್ ದಾಖಲು

ಮತದಾರರಿಗೆ ಆಮಿಷವೊಡ್ಡುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಪೊಲೀಸರಿಗೆ ದೂರು ನೀಡಿದ್ದಾರೆ.

ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್ ಶಾಸಕನ ವಿರುದ್ಧ ಎಫ್​ಐಆರ್ ದಾಖಲು
ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ
TV9 Web
| Edited By: |

Updated on: Dec 03, 2021 | 10:37 PM

Share

ಬೆಂಗಳೂರು: ರಾಜ್ಯ ವಿಧಾನ ಪರಿಷತ್​ನ 25 ಕ್ಷೇತ್ರಗಳಿಗೆ ಚುನಾವಣೆ ನಡೆಯುವ ದಿನ ಸಮೀಪಿಸುತ್ತಿರುವಂತೆ ಪ್ರಚಾರವೂ ಕಾವೇರಿದೆ. ಡಿ.10ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿದೆ. ಈ ನಡುವೆ ಬಂಗಾರಪೇಟೆಯ ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣಸ್ವಾಮಿ ವಿರುದ್ಧ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ಎಫ್​ಐಆರ್​ ದಾಖಲಾಗಿದೆ. ಮತದಾರರಿಗೆ ಆಮಿಷವೊಡ್ಡುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಯಶವಂತ್ ಕುಮಾರ್ ಬಂಗಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಗೋಡೆ ಕುಸಿದು ದಂಪತಿ ಸಾವು ಕೋಲಾರ: ಮಳೆಯಿಂದಾಗಿ ಮನೆ ಗೋಡೆ ಕುಸಿದು ದಂಪತಿ ಸಾವನ್ನಪ್ಪಿರುವ ಘಟನೆ ಕೋಲಾರ ತಾಲ್ಲೂಕಿನ ಕೆ.ಮಲ್ಲಂಡಹಳ್ಳಿ‌ ಗ್ರಾಮದಲ್ಲಿ ನಡೆದಿದೆ. ನಾಗರಾಜಪ್ಪ (65) ಮತ್ತು ಲಕ್ಷ್ಮಮ್ಮ (60) ಮೃತರು. ಸೀನಪ್ಪ ಎಂಬುವವರಿಗೆ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಚಾರಣಾಧೀನ ಕೈದಿ ಸಾವು ವಿಜಯಪುರ: ಅನಾರೋಗ್ಯದಿಂದ ಬಳಲುತ್ತಿದ್ದ ವಿಚಾರಣಾಧೀನ ಕೈದಿಯೊಬ್ಬರು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಹಾದೇವ ಬಿರಾದಾರ ಮೃತರು. ಮಹಾರಾಷ್ಟ್ರದ ಜತ್ತ ತಾಲೂಕಿನ ಸೂಸಲಾದ ಗ್ರಾಮದ ನಿವಾಸಿ ಬಿರಾದಾರ ಕೇಂದ್ರ ಕಾರಾಗೃಹದಲ್ಲಿ ಕುಸಿದು ಬಿದ್ದಿದ್ದರು ಎಂದು ಕೇಂದ್ರ ಕಾರಾಗೃಹ ಅಧೀಕ್ಷಕ ಐ.ಜಿ.ಮ್ಯಾಗೇರಿ ಮಾಹಿತಿ ನೀಡಿದ್ದಾರೆ.

ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ: ಸವಾರ ಸಾವು ಬೆಳಗಾವಿ: ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ರಾಮದುರ್ಗ ತಾಲ್ಲೂಕು ಹಲಗತ್ತಿ ಗ್ರಾಮದ ಬಳಿ ನಡೆದಿದೆ. ಶ್ರೀಕಾಂತ್ ಕಾಳಗಿ (36) ಮೃತರು. ಇವರು ರಾಮದುರ್ಗದ ನಿಂಗಾಪುರ ಪೇಟೆಯ ನಿವಾಸಿ. ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಧಾರವಾಡ ವಿಧಾನ ಪರಿಷತ್ ಚುನಾವಣೆ; ಸಿಎಂ ಬೊಮ್ಮಾಯಿಗೆ ರಾಜಕೀಯ ನೆಲೆ ಕಲ್ಪಿಸಿದ ಕ್ಷೇತ್ರ ಈ ಬಾರಿ ಯಾರ ಕೈ ಹಿಡಿಯುತ್ತೆ? ಇದನ್ನೂ ಓದಿ: ವಿಧಾನ ಪರಿಷತ್ ಸದಸ್ಯತ್ವಕ್ಕೆ ಜೆಡಿಎಸ್​ ನಾಯಕ ಸಿಆರ್ ಮನೋಹರ್​ ರಾಜೀನಾಮೆ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!