AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್ ಶಾಸಕನ ವಿರುದ್ಧ ಎಫ್​ಐಆರ್ ದಾಖಲು

ಮತದಾರರಿಗೆ ಆಮಿಷವೊಡ್ಡುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಪೊಲೀಸರಿಗೆ ದೂರು ನೀಡಿದ್ದಾರೆ.

ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್ ಶಾಸಕನ ವಿರುದ್ಧ ಎಫ್​ಐಆರ್ ದಾಖಲು
ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ
TV9 Web
| Edited By: |

Updated on: Dec 03, 2021 | 10:37 PM

Share

ಬೆಂಗಳೂರು: ರಾಜ್ಯ ವಿಧಾನ ಪರಿಷತ್​ನ 25 ಕ್ಷೇತ್ರಗಳಿಗೆ ಚುನಾವಣೆ ನಡೆಯುವ ದಿನ ಸಮೀಪಿಸುತ್ತಿರುವಂತೆ ಪ್ರಚಾರವೂ ಕಾವೇರಿದೆ. ಡಿ.10ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿದೆ. ಈ ನಡುವೆ ಬಂಗಾರಪೇಟೆಯ ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣಸ್ವಾಮಿ ವಿರುದ್ಧ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ಎಫ್​ಐಆರ್​ ದಾಖಲಾಗಿದೆ. ಮತದಾರರಿಗೆ ಆಮಿಷವೊಡ್ಡುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ ಯಶವಂತ್ ಕುಮಾರ್ ಬಂಗಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಗೋಡೆ ಕುಸಿದು ದಂಪತಿ ಸಾವು ಕೋಲಾರ: ಮಳೆಯಿಂದಾಗಿ ಮನೆ ಗೋಡೆ ಕುಸಿದು ದಂಪತಿ ಸಾವನ್ನಪ್ಪಿರುವ ಘಟನೆ ಕೋಲಾರ ತಾಲ್ಲೂಕಿನ ಕೆ.ಮಲ್ಲಂಡಹಳ್ಳಿ‌ ಗ್ರಾಮದಲ್ಲಿ ನಡೆದಿದೆ. ನಾಗರಾಜಪ್ಪ (65) ಮತ್ತು ಲಕ್ಷ್ಮಮ್ಮ (60) ಮೃತರು. ಸೀನಪ್ಪ ಎಂಬುವವರಿಗೆ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಚಾರಣಾಧೀನ ಕೈದಿ ಸಾವು ವಿಜಯಪುರ: ಅನಾರೋಗ್ಯದಿಂದ ಬಳಲುತ್ತಿದ್ದ ವಿಚಾರಣಾಧೀನ ಕೈದಿಯೊಬ್ಬರು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಹಾದೇವ ಬಿರಾದಾರ ಮೃತರು. ಮಹಾರಾಷ್ಟ್ರದ ಜತ್ತ ತಾಲೂಕಿನ ಸೂಸಲಾದ ಗ್ರಾಮದ ನಿವಾಸಿ ಬಿರಾದಾರ ಕೇಂದ್ರ ಕಾರಾಗೃಹದಲ್ಲಿ ಕುಸಿದು ಬಿದ್ದಿದ್ದರು ಎಂದು ಕೇಂದ್ರ ಕಾರಾಗೃಹ ಅಧೀಕ್ಷಕ ಐ.ಜಿ.ಮ್ಯಾಗೇರಿ ಮಾಹಿತಿ ನೀಡಿದ್ದಾರೆ.

ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ: ಸವಾರ ಸಾವು ಬೆಳಗಾವಿ: ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ರಾಮದುರ್ಗ ತಾಲ್ಲೂಕು ಹಲಗತ್ತಿ ಗ್ರಾಮದ ಬಳಿ ನಡೆದಿದೆ. ಶ್ರೀಕಾಂತ್ ಕಾಳಗಿ (36) ಮೃತರು. ಇವರು ರಾಮದುರ್ಗದ ನಿಂಗಾಪುರ ಪೇಟೆಯ ನಿವಾಸಿ. ರಾಮದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಧಾರವಾಡ ವಿಧಾನ ಪರಿಷತ್ ಚುನಾವಣೆ; ಸಿಎಂ ಬೊಮ್ಮಾಯಿಗೆ ರಾಜಕೀಯ ನೆಲೆ ಕಲ್ಪಿಸಿದ ಕ್ಷೇತ್ರ ಈ ಬಾರಿ ಯಾರ ಕೈ ಹಿಡಿಯುತ್ತೆ? ಇದನ್ನೂ ಓದಿ: ವಿಧಾನ ಪರಿಷತ್ ಸದಸ್ಯತ್ವಕ್ಕೆ ಜೆಡಿಎಸ್​ ನಾಯಕ ಸಿಆರ್ ಮನೋಹರ್​ ರಾಜೀನಾಮೆ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ