AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿದೆ ರಾಮ, ಕೃಷ್ಣಾರ್ಜುನಿಂದ ಪೂಜಿಸಲ್ಪಟ್ಟ 18 ಅಡಿ ಸಾಲಿಗ್ರಾಮ ಏಕಶಿಲೆ ಗಣಪನ ಮೂರ್ತಿ

ಆತ ಭ್ರಹ್ಮ ವಿಷ್ಣು ಮಹೇಶ್ವರರಿಂದ ಪ್ರತಿಷ್ಠಾಪನೆಗೊಂಡ ಜಗದೊಡೆಯ, ಕೌಂಡಿನ್ಯ ಮಹಾಋಷಿಯಿಂದ ಪೂಜಿಸಲ್ಪಟ್ಟ ಗಜಾನನ, ಮೂರು ಯುಗಗಳಲ್ಲಿ ನಡೆದಿದೆ ಆತನಿಂದ ಚಮತ್ಕಾರ, ವಿಶ್ವದಲ್ಲೇ ಇರುವ ಏಕೈಕ ಸಾಲಿಗ್ರಾಮ ಶಿಲೆಯ ಗಣಪ, ಈ ಯುಗದಲ್ಲೂ ಅವನ ಮುಂದೆ ಬೇಡಿದರೆ ಈಡೇರುತ್ತವೆ ಎಲ್ಲರ ಇಷ್ಟಾರ್ಥಗಳು. ಹಾಗಾದರೆ ಅಂಥ ಚಮತ್ಕಾರಿ ಸ್ಥಳ ಯಾವುದು? ಇಲ್ಲಿದೆ ಮಾಹಿತಿ

ಕೋಲಾರದಲ್ಲಿದೆ ರಾಮ, ಕೃಷ್ಣಾರ್ಜುನಿಂದ ಪೂಜಿಸಲ್ಪಟ್ಟ 18 ಅಡಿ ಸಾಲಿಗ್ರಾಮ ಏಕಶಿಲೆ ಗಣಪನ ಮೂರ್ತಿ
ಏಕಶಿಲೆ ಗಣೇಶ
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: |

Updated on: Sep 07, 2024 | 8:50 AM

Share

ಕೋಲಾರ, ಸೆಪ್ಟೆಂಬರ್​ 07: ಮುಳಬಾಗಿಲು (Mulabagilu) ತಾಲೂಕಿನ ಕುರುಡುಮಲೆ ಗ್ರಾಮದಲ್ಲಿದೆ 18 ಅಡಿಯ ಸಾಲಿಗ್ರಾಮ ಏಕಶಿಲೆಯ ಗಣೇಶ (Ganesha) ಮೂರ್ತಿ. ಕೂಟಾದ್ರಿ ಪರ್ವತದ ತಪ್ಪಲಿನಲ್ಲಿರುವ ಪುರಾಣ ಪ್ರಸಿದ್ದವಾದ ಗಣಪತಿ ದೇವಾಲಯವಿದು. ತ್ರಿಪುರಾಸುರನ ಸಂಹಾರವಾದ ಮೇಲೆ ಬ್ರಹ್ಮ, ವಿಷ್ಣು, ಮಹೇಶ್ವರರಿಂದ ಪ್ರತಿಷ್ಠಾಪಿಸಲಾದ ಈ ಸಾಲಿಗ್ರಾಮ ಶಿಲೆಯ ಮೂರ್ತಿ, ನಂತರ ವಿಜಯನಗರ ಸಾಮ್ರಾಜ್ಯ ಕಾಲದಲ್ಲಿ ಸುಂದರ ಶಿಲ್ಪಕಲೆಯನ್ನೊಳಗೊಂಡ ದೇವಾಲಯವನ್ನು ನಿರ್ಮಾಣ ಮಾಡಲಾಯಿತು.

ಇಲ್ಲಿನ ಗಣೇಶನಿಗೆ ತ್ರೇತಾಯುಗದಲ್ಲಿ ಶ್ರೀರಾಮಚಂದ್ರ ಮುನ್ನ ಪೂಜೆ ಸಲ್ಲಿಸಿದ್ದನೆಂದು, ದ್ವಾಪರಯುಗದಲ್ಲಿ ಪಾಂಡವರು ಈ ಗಣೇಶನಿಗೆ ಪೂಜೆ ಸಲ್ಲಿಸಿದ್ದರು ಎಂದು ಹೇಳಲಾಗುತ್ತಿದೆ. ಚೌತಿಯ ಚಂದ್ರನನ್ನು ನೋಡಿದ ಶ್ರೀಕೃಷ್ಣನಿಗೆ ಶಮಂತಕಮಣಿಯ ಕದ್ದ ಅಪವಾದ ಈ ಗಣೇಶನ ದರ್ಶನದಿಂದಲೇ ಪರಿಹಾರವಾಯಿತು ಎಂದು ಪುರಾಣಗಳಲ್ಲಿ ಉಲ್ಲೇಖಿಸಲಾಗಿದೆ. ಈಗಲೂ ಚೌತಿಯ ಚಂದ್ರನ ದರ್ಶನದಿಂದಾಗುವ ಪಾಪ ಪರಿಹಾರವಾಗುತ್ತದೆ ಎಂಬು ನಂಬಲಾಗಿದೆ. ಜೊತೆಗೆ ನಾಗದೋಷಗಳು ಇಷ್ಟಾರ್ಥಗಳು ಇಲ್ಲಿ ಬಗೆಹರಿಯುತ್ತವೆ ಅನ್ನೋದಕ್ಕೆ ಇಂದಿಗೂ ಅದೆಷ್ಟೋ ಜೀವಂತ ನಿದರ್ಶನಗಳಿವೆ.

ಏಕಶಿಲೆ ಗಣೇಶ

ಇಂದು ಗಣೇಶ ಚತುರ್ಥಿ ಅಂಗವಾಗಿ ಕುರುಡುಮಲೆಯಲ್ಲಿ ಐದು ದಿನಗಳ ಕಾಲ ಬ್ರಹ್ಮರಥೋತ್ಸವಗಳು, ಪುಷ್ಪಪಲ್ಲಕ್ಕಿ, ಲಕ್ಷ್ಮೀಗಣಪತಿ ಉತ್ಸವಗಳು ನಡೆಯುತ್ತವೆ. ಈ ವಿಶೇಷ ದಿನಗಳಂದು ಗಣೇಶನ ದರ್ಶನಕ್ಕೆ ಲಕ್ಷಾಂತರ ಜನ ಭಕ್ತಾದಿಗಳು ಬರುತ್ತಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಗಮನ ಸೆಳೆಯುತ್ತಿವೆ ವಿಶೇಷ ಗಣಪತಿ ವಿಗ್ರಹಗಳು

ಮೂರು ಯುಗಗಳಿಂದ ಪೂಜಿಸಲ್ಪಡುತ್ತಿರುವ ಕುರುಡುಮಲೆ ಗಣಪತಿಯು ಕಲಿಯುಗದಲ್ಲೂ ತನ್ನ ಚಮತ್ಕಾರವನ್ನು ತೋರಿಸುತ್ತಿದ್ದಾನೆ. ಭಕ್ತಿಯಿಂದ ಬೇಡಿದ ಭಕ್ತರಿಗೆ ಕೇಳಿದ್ದನ್ನು ನೀಡಿದ್ದಾನೆ. ಅದಕ್ಕಾಗಿ ಇಂದಿಗೂ ರಾಜಕೀಯ ನಾಯಕರು ಇಲ್ಲಿಗೆ ಬರುತ್ತಾರೆ. ಎಸ್.ಎಂ ಕೃಷ್ಣ, ಹೆಚ್​ಡಿ ದೇವೇಗೌಡ, ಬಿಎಸ್​ ಯಡಿಯೂರಪ್ಪ, ಹಾಗೂ ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಈ ಗಣೇಶನಿಗೆ ಪೂಜೆ ಸಲ್ಲಿಸಿಯೇ ತಮ್ಮ ಪ್ರಚಾರ ಕಾರ್ಯಾರಂಭ ಮಾಡುತ್ತಾರೆ. ಜೊತೆಗೆ ಸಾವಿರಾರು ಜನರು ತಮ್ಮ ಇಷ್ಟಾರ್ಥಗಳ ಈಡೇರಿಸುವಂತೆ ಗಣೇಶನ ಬಳಿ ಬಂದು ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸುತ್ತಾರೆ.

ಹೀಗೆ ವಿಶ್ವದಲ್ಲೇ ಏಕೈಕ, ಏಕಶಿಲಾ, ಸಾಲಿಗ್ರಾಮ ಶಿಲೆಯ 18 ಅಡಿ ಎತ್ತರದ ಗಣೇಶ ಮೂರ್ತಿಯ ಶಕ್ತಿ ಅಪಾರವಾದದು. ನಮ್ಮ ಪುರಾಣ ಪ್ರಸಿದ್ಧ ದೇವರುಗಳಾದ ರಾಮ, ಕೃಷ್ಣಾರ್ಜುನರರೇ ಇಲ್ಲಿನ ಗಣೇಶನ ಮುಂದೆ ಬಂದು ತಮ್ಮ ಕಷ್ಟಗಳನ್ನು ಪರಿಹರಿಸಿಕೊಂಡಿರುವ ಉದಾಹರಣೆಗಳಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?