AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೇ ದ್ವೇಷ ಹಿನ್ನೆಲೆ ಗ್ಯಾಂಗ್ ವಾರ್; ಓರ್ವನ ಕೊಲೆ, ಇಬ್ಬರ ಸ್ಥಿತಿ ಗಂಭೀರ

ಹಳೇ ದ್ವೇಷಕ್ಕೆ ಗ್ಯಾಂಗ್ವಾರ್ ನಡೆದು ಕುಮಾರ್ ಅಲಿಯಾಸ್ ರಾಜಕುಮಾರ್ ಮೃತಪಟ್ಟಿದ್ದಾರೆ. ಹಾಗೂ ಅಜಯ್ ಸೇರಿದಂತೆ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹಳೇ ದ್ವೇಷ ಹಿನ್ನೆಲೆ ಗ್ಯಾಂಗ್ ವಾರ್; ಓರ್ವನ ಕೊಲೆ, ಇಬ್ಬರ ಸ್ಥಿತಿ ಗಂಭೀರ
ಪ್ರಾತಿನಿದಿಕ ಚಿತ್ರ
TV9 Web
| Edited By: |

Updated on:Oct 24, 2021 | 11:25 AM

Share

ಕೋಲಾರ: ಹಳೇ ದ್ವೇಷ ಹಿನ್ನೆಲೆ ತಡರಾತ್ರಿ ಲಾಂಗ್ ಹಿಡಿದು ಗುಂಪೊಂದು ಗ್ಯಾಂಗ್ವಾರ್ ಮಾಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್ನ ಇಟಿ ಬ್ಲಾಕ್ನಲ್ಲಿ ತಡರಾತ್ರಿ ಗ್ಯಾಂಗ್ವಾರ್ ನಡೆದಿದೆ. ಘಟನೆಯಲ್ಲಿ ಕುಮಾರ್ ಅಲಿಯಾಸ್ ರಾಜಕುಮಾರ್(28) ಬರ್ಬರ ಹತ್ಯೆಯಾಗಿದೆ.

ಹಳೇ ದ್ವೇಷಕ್ಕೆ ಗ್ಯಾಂಗ್ವಾರ್ ನಡೆದು ಕುಮಾರ್ ಅಲಿಯಾಸ್ ರಾಜಕುಮಾರ್ ಮೃತಪಟ್ಟಿದ್ದಾರೆ. ಹಾಗೂ ಅಜಯ್ ಸೇರಿದಂತೆ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಶ್ರೀಕಾಂತ್, ಜಯಕಾಂತ್, ಮೆರಿಯನ್, ಲಾರೆನ್ಸ್, ಸರವಣ, ರಮೇಶ್, ವೆಂಕಟೇಶ್ ಗುಂಪಿನಿಂದ ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿದೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಲೆಮರೆಸಿಕೊಂಡಿರುವ ಶ್ರೀಕಾಂತ್ ಗ್ಯಾಂಗ್ಗಾಗಿ ಹುಡುಕಾಟ ನಡೆಯುತ್ತಿದೆ.

ಭೀಮಾತೀರದಲ್ಲಿ ಮರ್ಯಾದೆ ಹತ್ಯೆ ಭೀಮಾತೀರದಲ್ಲಿ ಮರ್ಯಾದೆ ಹತ್ಯೆ ಆರೋಪ ಕೇಳಿ ಬಂದಿದೆ. ಯುವತಿಯನ್ನು ಪ್ರೀತಿಸಿದ್ದಕ್ಕೆ ಅನ್ಯ ಕೋಮಿನ ಯುವಕನ ಕೊಲೆ ನಡೆದಿದೆ. ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಬಳಗಾನೂರ ಗ್ರಾಮದ ರವಿ ನಿಂಬರಗಿ(32) ಕೊಲೆಯಾದ ಯುವಕ. ಈ ಸಂಬಂಧ ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆಲಮೇಲ ಪೊಲೀಸರು ಯುವತಿಯ ಪೋಷಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಸದ್ಯ ಗ್ರಾಮದ ಬಾವಿಯಲ್ಲಿ ರವಿ ನಿಂಬರಗಿ ಶವ ಪತ್ತೆಯಾಗಿದೆ. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಶವ ಹೊರತೆಗೆದಿದ್ದಾರೆ. ಅನ್ಯಕೋಮಿನ ಯುವತಿ ಪ್ರೀತಿಸುತ್ತಿದ್ದ ಹಿನ್ನೆಲೆ ರವಿ ನಿಂಬರಗಿಯನ್ನು ಯುವತಿ ಮನೆಯವರು ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ರವಿ ಹತ್ಯೆಗೈದು ಶವವನ್ನು ಬಾವಿಯಲ್ಲಿ ಎಸೆದು ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ನಿನ್ನೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಹಳೇ ದ್ವೇಷ ಸಾವಿನಲ್ಲಿ ಅಂತ್ಯ; ರೋಹಿಣಿ ಕೋರ್ಟ್​​ನಲ್ಲಿ ಹತ್ಯೆಯಾದ ಗ್ಯಾಂಗ್​​ಸ್ಟರ್ ಜಿತೇಂದರ್ ಗೋಗಿ ಯಾರು?

Published On - 11:09 am, Sun, 24 October 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್