AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಸ್ಥಿತಿಯಲ್ಲಿದ್ದ ಶಾಲಾ ಕಟ್ಟಡಕ್ಕೆ ಮೆರುಗು; ಹಳೆ ವಿದ್ಯಾರ್ಥಿಯಿಂದ ಕಲರ್​ ಪುಲ್​ ಆಯ್ತು ಸರ್ಕಾರಿ ಶಾಲೆ..!

ಇದೇ ಚಿಕ್ಕಅಂಕಂಡಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಓದಿದ್ದ ಹರೀಶ್​ ಎಂಬಾತ, ಚಿಕ್ಕಅಂಕಂಡಹಳ್ಳಿ ಗ್ರಾಮ ಪಂಚಾಯ್ತಿಯ ಅಧ್ಯಕ್ಷನಾಗಿದ್ದು, ಪಂಚಾಯ್ತಿಯಿಂದ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ದುಸ್ಥಿತಿಯಲ್ಲಿದ್ದ ಶಾಲೆಯನ್ನು ಸರಿಪಡಿಸಿ ನಂತರ, ತನ್ನ ವೈಯಕ್ತಿಕ ಹಣದಿಂದ ಶಾಲೆಗೆ ಸುಣ್ಣಬಣ್ಣ ಮಾಡಿ ಮಕ್ಕಳಿಗೆ ಆಕರ್ಷಕವಾಗಿ ಕಂಡು ಬರುವ ರೀತಿಯಲ್ಲಿ ಅಭಿವೃದ್ದಿ ಪಡಿಸಿದ್ದಾರೆ.

ದುಸ್ಥಿತಿಯಲ್ಲಿದ್ದ ಶಾಲಾ ಕಟ್ಟಡಕ್ಕೆ ಮೆರುಗು; ಹಳೆ ವಿದ್ಯಾರ್ಥಿಯಿಂದ ಕಲರ್​ ಪುಲ್​ ಆಯ್ತು ಸರ್ಕಾರಿ ಶಾಲೆ..!
ಮಕ್ಕಳೊಂದಿಗೆ ಹಳೆ ವಿದ್ಯಾರ್ಥಿ ಹರೀಶ್​,
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Apr 16, 2022 | 8:12 PM

Share

ಕೋಲಾರ: ಅದು ಶಿಥಿಲಾವಸ್ಥೆ ತಲುಪಿದ್ದ ಸರ್ಕಾರಿ ಶಾಲೆ (Government School) ಶಾಲೆಯ ದುಸ್ಥಿತಿ ಕಂಡು ಮಕ್ಕಳು ಶಾಲೆಗೆ ಬರುವುದಿರಲಿ ಪೊಷಕರು ಕೂಡಾ ತಮ್ಮ ಮಕ್ಕಳನ್ನು ಶಾಲೆಗೆ ಕಳಿಸಲು ಹಿಂದು ಮುಂದು ನೋಡುವಂತಾಗಿತ್ತು. ಇಂಥ ಪರಿಸ್ಥಿತಿ ತಲುಪಿದ್ದ ಶಾಲೆ, ತನ್ನ ದುಸ್ಥಿತಿಯನ್ನು ತಾನೇ ಸರಿಪಡಿಸಿಕೊಂಡು ಸುಸ್ಥಿತಿಗೆ ತಲುಪಿದೆ, ಅಲ್ಲದೆ ನೋಡುವವರ ಕಣ್ಣು ಕುಕ್ಕುವ ರೀತಿಯಲ್ಲಿ ಜಗಮಗಿಸುತ್ತಿದೆ. ತಾನು ಓದಿದ್ದ ಸರ್ಕಾರಿ ಶಾಲೆಗೆ ಹಳೆಯ ವಿದ್ಯಾರ್ಥಿಯಿಂದ ಕಾಯಕಲ್ಪ ದೊರೆತಿದೆ. ಕಲರ್​ ಪುಲ್​ ಆಗಿ ಮಿನುಗುತ್ತಿರುವ ಸರ್ಕಾರಿ ಶಾಲಾ ಕಟ್ಟಡ, ಬುಲೆಟ್​ ಟ್ರೈನ್​ ರೀತಿಯಲ್ಲಿ ವಿಭಿನ್ನವಾಗಿ ಕಂಡು ಬರುತ್ತಿರುವ ಶಾಲೆ, ಶಾಲೆಯಲ್ಲಿ ಮಕ್ಕಳ ಕಲರವ ಇಂಥಾದೊಂದು ದೃಷ್ಯಗಳು ಕಂಡು ಬರೋದು ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕು ಚಿಕ್ಕಅಂಕಂಡಹಳ್ಳಿ ಗ್ರಾಮದಲ್ಲಿ. ಹೌದು ಈಗ್ರಾಮದಲ್ಲಿ ಒಂದರಿಂದ ಐದನೇ ತರಗತಿವರೆಗೆ ಅಂದರೆ ಸರ್ಕಾರಿ ಪ್ರಾಥಮಿಕ ಶಾಲೆ ಇದೆ. ಈ ಶಾಲೆ ಹಲವು ವರ್ಷಗಳಿಂದ ಸರಿಯಾದ ನಿರ್ವಹಣೆ ಇಲ್ಲದೆ ದುಸ್ಥಿತಿಗೆ ತಲುಪಿತ್ತು. ಇಂಥ ಪರಸ್ಥಿತಿಯಲ್ಲಿದ್ದ ಶಾಲೆಯ ಸ್ಥಿತಿಯನ್ನು ಕಂಡ ಇದೇ ಶಾಲೆಯ ಹಳೆಯ ವಿದ್ಯಾರ್ಥಿ ತನ್ನ ಜವಾಬ್ದಾರಿ, ಕಾಳಜಿ ಹಾಗೂ ವೈಯಕ್ತಿಕ ಹಣದಿಂದ ಇಂದು ಶಾಲೆಯನ್ನು ಜಗಮಗಿಸುವಂತೆ ಮಾಡಿದ್ದಾನೆ.

ಗ್ರಾಮ ಪಂಚಾಯ್ತಿ ಅಧ್ಯಕ್ಷನಾದ ಮೇಲೆ ಆಧ್ಯತೆ ಮೇರೆಗೆ ಮಾಡಿದ ಕೆಲಸ..! ಇದೇ ಚಿಕ್ಕಅಂಕಂಡಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಓದಿದ್ದ ಹರೀಶ್​ ಎಂಬಾತ, ಚಿಕ್ಕಅಂಕಂಡಹಳ್ಳಿ ಗ್ರಾಮ ಪಂಚಾಯ್ತಿಯ ಅಧ್ಯಕ್ಷನಾಗಿದ್ದು, ಪಂಚಾಯ್ತಿಯಿಂದ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ದುಸ್ಥಿತಿಯಲ್ಲಿದ್ದ ಶಾಲೆಯನ್ನು ಸರಿಪಡಿಸಿ ನಂತರ, ತನ್ನ ವೈಯಕ್ತಿಕ ಹಣದಿಂದ ಶಾಲೆಗೆ ಸುಣ್ಣಬಣ್ಣ ಮಾಡಿ ಮಕ್ಕಳಿಗೆ ಆಕರ್ಷಕವಾಗಿ ಕಂಡು ಬರುವ ರೀತಿಯಲ್ಲಿ ಅಭಿವೃದ್ದಿ ಪಡಿಸಿದ್ದಾರೆ. ಈ ಮೂಲಕ ನಮ್ಮೂರಿನ ಶಾಲೆಯ ಪರಿಸ್ಥಿತಿ ಸರಿಹೋದ ಮೇಲೆ ಈಗ ನಮ್ಮೂರಿನ ಶಾಲೆಯಿಂದ ಶಾಲೆಯೇ ಬೇಡ ಎಂದು ಶಾಲೆ ತೊರೆದು ಹೋಗಿದ್ದ ಮಕ್ಕಳು ಈಗ ಮತ್ತೆ ಶಾಲೆಗೆ ಬಂದು ದಾಖಲಾಗುತ್ತಿದ್ದಾರೆ ಎಂದು ಹರೀಶ್​ ಸಂತೋಷ ವ್ಯಕ್ತಪಡಿಸುತ್ತಿದ್ದಾರೆ.

ಹೊರಗಿನಿಂದ ನೋಡಿದರೆ ಬುಲೆಟ್​ ಟ್ರೈನ್​ ಮಕ್ಕಳಿಗೆ ಖುಷಿಯೋ ಖುಷಿ..! ಚಿಕ್ಕಅಂಕಂಡಹಳ್ಳಿ ಸರ್ಕಾರಿ ಶಾಲೆ ಮೊದಲು ಮಳೆ ಬಂದರೆ ಸೋರುವ ಸ್ಥಿತಿ ಇತ್ತು, ಆದರೆ ಈಗ ಅದರ ಸ್ಥಿತಿಯೇ ಬದಲಾಗಿ ಹೋಗಿದೆ, ಹೊರಗಿನಿಂದ ನೋಡಿದರೆ ಬುಲೆಟ್​ ಟ್ರೈನ್​ ರೀತಿಯಲ್ಲಿ ಬಣ್ಣ ಬಣ್ಣದ ಚಿತ್ತಾರಗಳನ್ನು ಬಿಡಿಸಲಾಗಿದೆ, ಶಾಲೆಯ ಹೊರ ನೋಟ ಬುಲೆಟ್ ಟ್ರೈನ್​ ರೀತಿ ಕಂಡು ಬಂದರೆ, ಓಳಗೆ ಮಕ್ಕಳ ಕಲಿಕೆಗೆ ಅನುಕೂಲವಾಗುವ ರೀತಿಯಲ್ಲಿ, ನಮ್ಮ ನಾಡು ನುಡಿ ಸಂಸ್ಕೃತಿಯನ್ನು ಬಿಂಬಿಸುವ ಚಿತ್ರಕಲೆಯನ್ನು ಬಿಡಿಸಲಾಗಿದ್ದು ಶಾಲೆಗೆ ಬರುವ ಮಕ್ಕಳಿಗೆ ಇದೊಂದು ಹೊಸ ಅನುಭವ ನೀಡುತ್ತಿದೆ ಹಾಗಾಗಿ ಶಾಲೆಗೆ ಬರುವ ಮಕ್ಕಳು ಸಂತೋಷದಿಂದ ಶಾಲೆಗೆ ಬಂದು ಕಲಿಯುತ್ತಿದ್ದಾರೆ, ಅಲ್ಲದೆ ಶಾಲೆ ಸರಿ ಇಲ್ಲ ಎಂದು ಶಾಲೆ ತೊರೆದು ಹೋಗಿದ್ದ ಮಕ್ಕಳು ಈಗ ಮತ್ತೆ ಇದೇ ಶಾಲೆಗೆ ಬಂದು ದಾಖಲುಗುತ್ತಿದ್ದಾರೆ ಸುಣ್ಣ ಬಣ್ಣ ಮಾಡಿದ ಮೇಲೆ ಶಾಲೆಗೆ ಬರುವುದಕ್ಕೆ ಖುಷಿಯಾಗುತ್ತೆ ಎನ್ನುತ್ತಾಳೆ ಈ ಶಾಲಾ ವಿದ್ಯಾರ್ಥಿನಿ ವೈಷ್ಣವಿ..

ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಸಿಕ್ಕರೆ ಖಾಸಗಿ ಶಾಲೆಗಳ ಸುಲಿಗೆಗೆ ಕಡಿವಾಣ..! ನಮ್ಮೂರು ನಮ್ಮ ಶಾಲೆ ಅನ್ನೋ ಮೂಲಕ ಪ್ರತಿಯೊಬ್ಬ ಅನುಕೂಲವಂತರು ತಮ್ಮೂರಿನ ವಿದ್ಯಾಕೇಂದ್ರಗಳನ್ನು ಅಭಿವೃದ್ದಿ ಪಡಿಸಿದ್ದೇ ಆದರೆ ನಿಜಕ್ಕೂ ಶಾಲೆಯಿಂದ ದೂರ ಉಳಿಯುವ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತದೆ. ಎಲ್ಲದಕ್ಕಿಂತ ಪ್ರಮುಖವಾಗಿ ಸರ್ಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲೇ ಸಿಗುವಂತಾದರೆ ಸಾಮಾನ್ಯ ಜನರನ್ನು ಶಿಕ್ಷಣದ ಹೆಸರಲ್ಲಿ ಸುಲಿಗೆ ಮಾಡುವ ಖಾಸಗಿ ಶಿಕ್ಷಣ ಸಂಸ್ಥೆಗಳ ಸುಲಿಗೆ ಆಟಕ್ಕೂ ಕಡಿವಾಣ ಬೀಳೋದ್ರಲ್ಲಿ ಅನುಮಾನವಿಲ್ಲ.

ವರದಿ : ರಾಜೇಂದ್ರ ಸಿಂಹ

ಇದನ್ನೂ ಓದಿ:

Zomato: ಗಿಗ್ಸ್​ ರದ್ದು ಪಡಿಸಲು ಆಗ್ರಹಿಸಿ ಬೆಂಗಳೂರಿನಲ್ಲಿ ಜೊಮ್ಯಾಟೋ ಡೆಲಿವರಿ ಬಾಯ್ಸ್​ ಪ್ರತಿಭಟನೆ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​