AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ನಿರಂತರ ಮಳೆ: ಕುಸಿದು ಬಿದ್ದ ಸರ್ಕಾರಿ ಶಾಲೆ ಗೋಡೆ, ಸ್ಥಳಕ್ಕೆ ತಹಶೀಲ್ದಾರ್ ನಾಗರಾಜ್ ಭೇಟಿ

ಶಾಲೆಯಲ್ಲಿ ನಾಲ್ಕು ಕೊಠಡಿಗಳಿದ್ದು, ಇದರಲ್ಲಿ 2 ಹಳೆಯದಾಗಿ ಕುಸಿಯುವ ಭೀತಿ ಎದುರಾಗಿದ್ದರೆ, ಉಳಿದ ಎರಡು ಮಾತ್ರ ಚನ್ನಾಗಿದೆ. ಇನ್ನೂ ಅದೃಷ್ಠವಶಾತ್ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ, ಕೊಠಡಿಗಳಿಲ್ಲದೆ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿರುವ ಮರದ ಕೆಳಗೆ ಕುಳಿತು ಪಾಠ ಕೇಳುವ ಸ್ಥಿತಿ ನಿರ್ಮಾಣ ವಾಗಿತ್ತು.

ಕೋಲಾರದಲ್ಲಿ ನಿರಂತರ ಮಳೆ: ಕುಸಿದು ಬಿದ್ದ ಸರ್ಕಾರಿ ಶಾಲೆ ಗೋಡೆ, ಸ್ಥಳಕ್ಕೆ ತಹಶೀಲ್ದಾರ್ ನಾಗರಾಜ್ ಭೇಟಿ
ಕುಸಿದು ಬಿದ್ದ ಸರ್ಕಾರಿ ಶಾಲೆ ಗೋಡೆ
TV9 Web
| Edited By: |

Updated on:Sep 07, 2022 | 3:35 PM

Share

ಕೋಲಾರ: ಕೋಲಾರದಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಸರ್ಕಾರಿ ಶಾಲೆಗಳ ಗೋಡೆಗಳು ಕುಸಿಯಲಾರಂಭಿಸಿವೆ. ಇದರಿಂದ ಜಿಲ್ಲೆಯ 300 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳ ಕಟ್ಟಡಗಳನ್ನು ದುರಸ್ಥಿ ಮಾಡಬೇಕಿದ್ದು, ಆತಂಕದಲ್ಲೆ ವಿದ್ಯಾರ್ಥಿಗಳು ಪಾಠ ಕೇಳಬೇಕಾದ ದುಸ್ಥಿತಿ ನಿರ್ಮಾಣವಾಗಿದೆ.

ಕೋಲಾರ ತಾಲ್ಲೂಕಿನ ದೊಡ್ಡ ಹಸಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗೋಡೆ ಕುಸಿದು ಬಿದ್ದಿದೆ. 1942ರಲ್ಲಿ ನಿರ್ಮಾಣವಾಗಿರುವ ಶಾಲಾ ಕಟ್ಟಡ ಸಾಕಷ್ಟು ಹಳೆಯದಾದ ಹಿನ್ನೆಲೆ ನಿರಂತರ ಮಳೆಯ ಪರಿಣಾಮ ಸರ್ಕಾರಿ ಶಾಲೆ ಗೋಡೆ ಕುಸಿದು ಬಿದ್ದಿದೆ. ಇನ್ನೂ ಶಾಲೆಯಲ್ಲಿ ನಾಲ್ಕು ಕೊಠಡಿಗಳಿದ್ದು, ಇದರಲ್ಲಿ 2 ಹಳೆಯದಾಗಿ ಕುಸಿಯುವ ಭೀತಿ ಎದುರಾಗಿದ್ದರೆ, ಉಳಿದ ಎರಡು ಮಾತ್ರ ಚನ್ನಾಗಿದೆ. ಇನ್ನೂ ಅದೃಷ್ಠವಶಾತ್ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ, ಕೊಠಡಿಗಳಿಲ್ಲದೆ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿರುವ ಮರದ ಕೆಳಗೆ ಕುಳಿತು ಪಾಠ ಕೇಳುವ ಸ್ಥಿತಿ ನಿರ್ಮಾಣ ವಾಗಿತ್ತು. ಇನ್ನೂ ಕೋಲಾರ ತಹಶೀಲ್ದಾರ್ ನಾಗರಾಜ್ ಭೇಟಿ‌ ನೀಡಿ ಪರಿಶೀಲನೆ ಮಾಡಿದರು.

ಕೂಡಲೇ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿ ಮಕ್ಕಳೊಂದಿಗೆ ಊಟ‌ ಸವಿದು ನಂತರ ಕೆಲ ಕಾಲ ಮಕ್ಕಳೊಂದಿಗೆ ಕಾಲ ಕಳೆದರು. ಇನ್ನು ಶಿಕ್ಷಣ ಇಲಾಖೆ ಉಪನಿರ್ದೇಶಕರು ಸ್ಥಳಕ್ಕೆ ಬೇಟಿ ನೀಡಿ ಮಕ್ಕಳಿಗೆ ಪರ್ಯಾಯ ವ್ಯವಸ್ಥೆ ಮಾಡೋದಕ್ಕೆ ಮುಂದಾಗಿದ್ದಾರೆ. ಇನ್ನೂ ನಮಗೆ ಇಲಾಖೆ ಅಥವಾ ಜನ ಪತಿನಿಧಿಗಳು ಪರ್ಯಾಯ ವ್ಯವಸ್ಥೆ ಜೊತೆಗೆ ನೂತನ ಕಟ್ಟಡ ಮಾಡಿಕೊಟ್ರೆ ಅನುಕೂಲವಾಗುತ್ತೆ ಅನ್ನೋದು ಗ್ರಾಮಸ್ಥರ ಮಾತು.

ಮಕ್ಕಳೊಂದಿಗೆ ಊಟ‌ ಸವಿದ ಕೋಲಾರ ತಹಶೀಲ್ದಾರ್ ನಾಗರಾಜ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:35 pm, Wed, 7 September 22

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​