AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರದಲ್ಲಿ ಮಳೆ ಆರ್ಭಟ: ನೀರಲ್ಲಿ ತೇಲುತ್ತಿದೆ ಸರ್ಕಾರಿ ಶಾಲೆ, ಆತಂಕದಲ್ಲೇ ಪಾಠ ಕೇಳುವ ಸ್ಥಿತಿ

ಕಳೆದ‌ ಎರಡು ದಿನಗಳಿಂದ‌ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಇಂಥಾದೊಂದು ದುಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನೀರು ತುಂಬಿ ಶಾಲೆಯೊಳಗೆ ಹರಿಯುತ್ತಿದೆ.

ಕೋಲಾರದಲ್ಲಿ ಮಳೆ ಆರ್ಭಟ: ನೀರಲ್ಲಿ ತೇಲುತ್ತಿದೆ ಸರ್ಕಾರಿ ಶಾಲೆ, ಆತಂಕದಲ್ಲೇ ಪಾಠ ಕೇಳುವ ಸ್ಥಿತಿ
ಸರ್ಕಾರಿ ಶಾಲೆಯ ಕೊಠಡಿಯೊಳಗೆ ನುಗ್ಗಿದ ನೀರು
TV9 Web
| Edited By: ಆಯೇಷಾ ಬಾನು|

Updated on:Aug 02, 2022 | 4:43 PM

Share

ಕೋಲಾರ : ಕೋಲಾರ ಜಿಲ್ಲೆಯಾದ್ಯಂತ ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯ(Kolar Rain) ಪರಿಣಾಮ ಶಾಲೆಯೊಳಗೆ ನೀರು ತುಂಬಿದೆ. ಮಕ್ಕಳು ನೀರಿನಲ್ಲೇ ಕುಳಿತು ಪಾಠ ಕೇಳುವ ಸ್ಥಿತಿ ಎದುರಾಗಿದೆ. ಇಂಥಾದೊಂದು ದುಸ್ಥಿತಿ ಎದುರಾಗಿರೋದು ಕೋಲಾರ ನಗರದ ಕುರುಬರಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ.

ಕಳೆದ‌ ಎರಡು ದಿನಗಳಿಂದ‌ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಇಂಥಾದೊಂದು ದುಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನೀರು ತುಂಬಿ ಶಾಲೆಯೊಳಗೆ ಹರಿಯುತ್ತಿದೆ. ಈ ಪರಿಣಾಮ ಶಾಲೆಯಲ್ಲಿದ್ದ ಪಠ್ಯಪುಸ್ತಕಗಳು ಎಲ್ಲವೂ ನೀರಿನಲ್ಲಿ ನೆನೆದು ಹೋಗಿದೆ. ಅಲ್ಲದೆ ಶಾಲೆಯ ಕಟ್ಟಡ ಹಳೆಯದಾಗಿರುವುದರಿಂದ ಶಾಲೆಯ ಮೇಲ್ಚಾವಣಿ ಕೂಡಾ ಕುಸಿಯುತ್ತಿದೆ. ಹಾಗಾಗಿ ಮಕ್ಕಳು ಆತಂಕದಲ್ಲಿ ಪಾಠ ಕೇಳುವ ಸ್ಥಿತಿ ಇದೆ. kolar rain

ಇನ್ನು ಶಾಲೆಯಲ್ಲಿ ಒಟ್ಟು 67 ಜನ ಮಕ್ಕಳಿದ್ದು ಆರು ಕೊಠಡಿಗಳಲ್ಲಿ ಸದ್ಯ ಕೇವಲ ಎರಡು ಕೊಠಡಿಗಳು ಮಾತ್ರ ಚೆನ್ನಾಗಿವೆ. ಉಳಿದ ಕೊಠಡಿಗಳೆಲ್ಲಾ ಮಳೆಯ ಹೊಡೆತಕ್ಕೆ ಕುಸಿಯುವ ಸ್ಥಿತಿಗೆ ತಲುಪಿದೆ. ಸದ್ಯ ಶಾಲೆಯ ಮಕ್ಕಳು ಆತಂಕದಲ್ಲಿ ಪಾಠ ಕೇಳುವ ಸ್ಥಿತಿ ತಲುಪಿದ್ದು ಕೂಡಲೇ ಸಂಬಂಧಪಟ್ಟವರು ಶಾಲೆಯ ಕಾಯಕಲ್ಪ ಒದಗಿಸಬೇಕು ಎಂದು ಸ್ಥಳೀಯರು, ಪೋಷಕರು ಆಗ್ರಹಿಸಿದ್ದಾರೆ. ಸರ್ಕಾರಿ ಶಾಲೆಯನ್ನು ಉಳಿಸಬೇಕು ಎಂದು ಅಭಿಯಾನಗಳನ್ನು ಮಾಡುವ ಸರ್ಕಾರ ಒಮ್ಮೆ ಇತ್ತ ನೋಡಬೇಕು. ಸರ್ಕಾರಿ ಶಾಲೆಯ ಸ್ಥಿತಿ ಮುಳುಗಿದ ದೋಣಿಯಂತಾದರೂ ಯಾವ ಕ್ರಮಕ್ಕೂ ಮುಂದೆ ಬಂದಿಲ್ಲ. ಕಳೆದ ಕೆಲ ದಿನಗಳಿಂದ ಮಕ್ಕಳು ನೀರಿನಲ್ಲೇ ಕುಳಿತು ಪಾಠ ಕೇಳುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.

ವರದಿ: ರಾಜೇಂದ್ರ ಸಿಂಹ, ಟಿವಿ9 ಕೋಲಾರ

Published On - 4:43 pm, Tue, 2 August 22

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ